ಈ ಭಾಗದಲ್ಲಿ ಭೂಮಿ ಬೆಲೆ ಏರಿಕೆ; ಎಕರೆ ಭೂಮಿಗೆ 30-40 ಲಕ್ಷ : ಬಿಗ್ ಅಪ್ಡೇಟ್ ಕೊಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಸೆಪ್ಟೆಂಬರ್ 16: ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯಡಿ ಮುಳುಗಡೆಯಾಗುವ ಪ್ರತಿ ಎಕರೆ ನೀರಾವರಿ ಜಮೀನಿಗೆ ರೂ.40 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.30 ಲಕ್ಷ. ಕಾಲುವೆಗಾಗಿ ಸ್ವಾಧೀನಪಡಿಸಿಕೊಳ್ಳುವ ಭೂಮಿ ಪೈಕಿ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ ರೂ.30 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.25 ಲಕ್ಷ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಲು ಮಂಗಳವಾರ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ಬಳಿಕ ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಸ್ಥಳೀಯ ಜನಪ್ರತಿನಿಧಿಗಳು, ರೈತರು, ಸಚಿವರ ಅಭಿಪ್ರಾಯ ಪಡೆದು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇನ್ನು ಈ ಪರಿಹಾರ ದರವು ಕೇವಲ ಕೃಷ್ಣಾ ಭಾಗ್ಯ ಜಲನಿಗಮ ವ್ಯಾಪ್ತಿಯ ಯುಕೆಪಿ 3ನೇ ಹಂತದ ಯೋಜನೆ ಪ್ರದೇಶಕ್ಕೆ ಮಾತ್ರ ಸೀಮಿತವಾಗಲಿದೆ.

ಅಧಿಸೂಚನೆ ಹೊರಡಿಸುವುದು ತಡವಾಗುತ್ತಿರುವ ಹಿನ್ನೆಲೆಯಲ್ಲಿ ಇತರೆ ಪ್ರಕ್ರಿಯೆಗಳು ವಿಳಂಬವಾಗಬಾರದು ಎಂಬ ಕಾರಣಕ್ಕೆ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಿದೆ. ಈ ಯೋಜನೆಯಲ್ಲಿ ರೂ.70 ಸಾವಿರ ಕೋಟಿ ಕೇವಲ ಭೂಸ್ವಾಧೀನ ಪ್ರಕ್ರಿಯೆಗೆ ವ್ಯಯವಾಗಲಿದೆ. ಈ ಪ್ರಕ್ರಿಯೆಯನ್ನು ರೈತರ ಒಪ್ಪಿಗೆ ಹಾಗೂ ನೇರವಾಗಿ ಖರೀದಿ ಮೂಲಕ 3 ವರ್ಷಗಳ ಅವಧಿಯಲ್ಲಿ ಮುಗಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಈ ಭಾಗದಲ್ಲಿ ದಿನೇ ದಿನೆ ಭೂಮಿ ಬೆಲೆ ಏರಿಕೆಯಾಗುತ್ತಿದೆ. ಈ ಹಿಂದೆ ಬೊಮ್ಮಾಯಿ ಅವರ ಸರ್ಕಾರವು ನೀರಾವರಿ ಜಮೀನಿಗೆ ಪ್ರತಿ ಎಕರೆಗೆ 24 ಲಕ್ಷ ಹಾಗೂ ಒಣ ಭೂಮಿಗೆ 20 ಲಕ್ಷ ಪರಿಹಾರ ನಿಗದಿ ಮಾಡಿತ್ತು. ಈ ವಿಚಾರವಾಗಿ ಸಂಪುಟ ಉಪಸಮಿತಿ ರಚಿಸಲಾಗಿತ್ತಾದರೂ ರೈತರು ಈ ತೀರ್ಮಾನಕ್ಕೆ ಒಪ್ಪಿಗೆ ನೀಡಿರಲಿಲ್ಲ. ಹೀಗಾಗಿ ಈ ತೀರ್ಮಾನವನ್ನು ಜಾರಿಗೊಳಿಸಲು ಸಾಧ್ಯವಾಗಲಿಲ್ಲ. ಈ ಯೋಜನೆಯ ಎಲ್ಲಾ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.
ಈ ಯೋಜನೆಗೆ 1,33,867 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗಿದ್ದು, ಈ ಪೈಕಿ 75,563 ಎಕರೆ ಮುಳುಗಡೆಯಾಗಲಿದ್ದು, ಕಾಲುವೆಗಾಗಿ 51,837 ಎಕರೆ ಭೂಮಿ ಅಗತ್ಯವಿದೆ. ಇನ್ನು ಪುನಶ್ಚೇತನ ಕಾರ್ಯಕ್ಕೆ 6,467 ಎಕರೆ ಜಮೀನು ಬೇಕಾಗಿದೆ. ಈ ಯೋಜನೆಗೆ ಅಗತ್ಯವಿರುವ ಭೂಮಿಯನ್ನು 2013ರ ಭೂಸ್ವಾಧೀನ ಕಾಯ್ದೆ ಅನ್ವಯ ಸ್ವಾಧೀನಪಡಿಸಿಕೊಳ್ಳಲಾಗುವುದು. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಅನೇಕ ಪ್ರಕರಣಗಳು ವಿಚಾರಣೆ ನಡೆಯುತ್ತಿದೆ. ಸುಮಾರು 20 ಸಾವಿರ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಿವೆ. ಈ ಕಾಯ್ದೆಯಲ್ಲಿ ನೀಡಲಾಗಿರುವ ಅವಕಾಶದ ಪ್ರಕಾರ ಈ ಪ್ರಕರಣಗಳನ್ನು ರಾಜಿ ಸಂಧಾನ ಕಾನೂನು ಪ್ರಕಾರ ಇವುಗಳನ್ನು ಇತ್ಯರ್ಥ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣವಿಲ್ಲದ ಜಮೀನುಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಪುನಶ್ಚೇತನ ಕಾರ್ಯಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರಕರಣಗಳಿರುವ ಕಾರಣ, ನಾವು ಈ ವಿಚಾರದಲ್ಲಿ ಹೊಸ ನೀತಿ ರೂಪಿಸಲು ತೀರ್ಮಾನಿಸಿದ್ದೇವೆ. ಈ ವಿಚಾರವಾಗಿ ಸ್ಥಳೀಯ ನಾಯಕರು, ರೈತರ ಅಭಿಪ್ರಾಯ ಪಡೆಯಲಾಗುವುದು. ನ್ಯಾಯಯುತ ಪರಿಹಾರ, ಭೂಸ್ವಾಧೀನ ಪಾರದರ್ಶಕತೆ ಹಕ್ಕು ಕಾಯ್ದೆಯ ಸೆಕ್ಷನ್ 51ರ ಅಡಿಯಲ್ಲಿ ಭೂಸ್ವಾಧೀನ, ಪುನಶ್ಚೇತನ ಹಾಗೂ ಪರಿಹಾರ ಪ್ರಾಧಿಕಾರ ರಚಿಸಲು ಅವಕಾಶವಿದೆ. ಹೀಗಾಗಿ ರಾಜ್ಯ ಸರ್ಕಾರ ಮೊದಲ ಬಾರಿಗೆ ಈ ಪ್ರಾಧಿಕಾರವನ್ನು ರಚಿಸಲಿದೆ. ಮುಖ್ಯನ್ಯಾಯಮೂರ್ತಿಗಳು ನೇಮಕ ಮಾಡುವ ನ್ಯಾಯಾಧೀಶರ ನೇತೃತ್ವದಲ್ಲಿ ಈ ಪ್ರಾಧಿಕಾರವನ್ನು ರಚಿಸಲಾಗುವುದು ಎಂದು ತಿಳಿಸಿದರು.
-
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
ವಿವಿಧ ರಾಜ್ಯಗಳ ಚುನಾವಣೆ ಬಳಿಕ ಪ್ರಧಾನಿ ಭೇಟಿಗೆ ಸರ್ವಪಕ್ಷ ಸಂಸದರ ನಿಯೋಗ ತೀರ್ಮಾನ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ











Click it and Unblock the Notifications