ಅಕ್ರಮ ಆಸ್ತಿ ಗಳಿಕೆ, ಈಶ್ವರಪ್ಪ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು
ಬೆಂಗಳೂರು, ಜೂನ್ 8: ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಸಾವಿರಾರು ಕೋಟಿ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗ ಮೂಲದ ವಕೀಲ ವಿನೋದ್ ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದಾರೆ.
ಬೆಂಗಳೂರಿನ ಶಾಂತಿ ನಗರದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ವಕೀಲ ವಿನೋದ್ ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿಯಲ್ಲಿ ಅವರು ಈ ದೂರು ಸಲ್ಲಿಸಿದ್ದಾರೆ.

ದೂರು ಸಲ್ಲಿಸಿದ ನಂತರ ಟಿವಿ ಮಾಧ್ಯಮಗಳೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, "ರಾಜ್ಯ, ಹೊರ ರಾಜ್ಯ ಹಾಗೂ ಅಬುದಾಭಿಯಲ್ಲಿ ಕೆ.ಎಸ್ ಈಶ್ವರಪ್ಪ ಅಕ್ರಮ ಆಸ್ತಿ ಮಾಡಿಟ್ಟಿದ್ದಾರೆ," ಎಂದು ಆರೋಪಿಸಿದ್ದಾರೆ.












Click it and Unblock the Notifications