ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಿರುದ್ಧ ಎಸಿಬಿಗೆ ದೂರು

By Gururaj
|
Google Oneindia Kannada News

ಬೆಂಗಳೂರು, ಜೂನ್ 12 : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ. ಎಸಿಬಿ ಅಧಿಕಾರಿಗಳು ಕಾನೂನು ಸಲಹೆ ಪಡೆದ ಬಳಿಕ ತನಿಖೆ ನಡೆಸುವ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಉದ್ಯೋಗ ಮತ್ತು ತರಬೇತಿ ಇಲಾಖೆಯ ಮಾಜಿ ನೌಕರ ಶಂಕರ ದೇವೇಗೌಡ ಅವರು ರತ್ನಪ್ರಭಾ ಅವರ ವಿರುದ್ಧ ದೂರು ನೀಡಿದ್ದಾರೆ. ನ್ಯಾಯಾಲಯದ ಆದೇಶ ಜಾರಿಯಾಗದಂತೆ ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.

ಬಿಎಸ್‌ವೈ, ಶ್ರೀರಾಮುಲು ವಿರುದ್ಧ ಎಸಿಬಿಗೆ ದೂರು ನೀಡಿದ ಕಾಂಗ್ರೆಸ್ಬಿಎಸ್‌ವೈ, ಶ್ರೀರಾಮುಲು ವಿರುದ್ಧ ಎಸಿಬಿಗೆ ದೂರು ನೀಡಿದ ಕಾಂಗ್ರೆಸ್

ದೂರಿನಲ್ಲಿ ಏನಿದೆ? : ಕರ್ನಾಟಕದ ಸರ್ಕಾರದ ಬಡ್ತಿ ಮೀಸಲು ಕಾಯ್ದೆ 2002 ಅನ್ನು ರದ್ದುಪಡಿಸಿ ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. 2017ರ ಫೆ. 9ರಂದು ನೀಡಿದ್ದ ಆದೇಶದಿಂದಾಗಿ 45 ಇಲಾಖೆಗಳಲ್ಲಿ ಒಟ್ಟು 3,799 ಸಿಬ್ಬಂದಿ ಹಿಂಬಡ್ತಿ ಪಡೆಯಲಿದ್ದರು.

Complaint to ACB against Chief Secretary Ratnaprabha

ಆದರೆ, ಸುಪ್ರೀಂಕೋರ್ಟ್ ಆದೇಶವನ್ನು ಜಾರಿಗೆ ತರಬೇಕಾದ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಇಲಾಖಾ ಕಾರ್ಯದರ್ಶಿಗಳ ಮೇಲೆ ಒತ್ತಡ ಹೇರಿದ್ದಾರೆ. ಈ ಮೂಲಕ ಕೊನೆ ಕ್ಷಣದಲ್ಲಿ ಆದೇಶ ಜಾರಿಯಾಗದಂತೆ ಮಾಡಿದ್ದಾರೆ.

ಬಡ್ತಿ ಮೀಸಲು: ನ್ಯಾಯಾಂಗ ನಿಂದನೆಯಿಂದ ಪಾರಾಗಲು ಸುಪ್ರೀಂ ಆದೇಶ ಪಾಲಿಸಿಬಡ್ತಿ ಮೀಸಲು: ನ್ಯಾಯಾಂಗ ನಿಂದನೆಯಿಂದ ಪಾರಾಗಲು ಸುಪ್ರೀಂ ಆದೇಶ ಪಾಲಿಸಿ

ರತ್ನಪ್ರಭಾ ಅವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಎಸಿಬಿ ಅಧಿಕಾರಿಗಳು ಕಾನೂನು ಸಲಹೆ ಪಡೆದ ಬಳಿಕ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ.

English summary
Directorate of Employment & Training former employee Shankar Deve Gowda field a complaint to Anti Corruption Bureau against Karnataka chief secretary Ratnaprabha. In his complaint he alleged that Ratnaprabha misused his power.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X