ರಾಣೆಬೆನ್ನೂರು ಶಾಸಕ ಆರ್.ಶಂಕರ್ ವಿರುದ್ಧ ಸ್ಫೀಕರ್ಗೆ ದೂರು
ಬೆಂಗಳೂರು, ಜುಲೈ 16 : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಆರ್. ಶಂಕರ್ ವಿರುದ್ಧ ಸ್ಪೀಕರ್ಗೆ ದೂರು ನೀಡಲಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಶಂಕರ್ ವಾಪಸ್ ಪಡೆದಿದ್ದಾರೆ.
ರಾಣೆಬೆನ್ನೂರು ಕ್ಷೇತ್ರದಿಂದ ಕೆಪಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆರ್. ಶಂಕರ್ ಗೆಲುವು ಸಾಧಿಸಿದ್ದರು. ಮೈತ್ರಿ ಸರ್ಕಾರ ರಚನೆಗೆ ಅವರು ಬೆಂಬಲ ನೀಡಿದ್ದರು. ಎಚ್. ಡಿ. ಕುಮಾರಸ್ವಾಮಿ ಸಂಪುಟಕ್ಕೆ 2ನೇ ಬಾರಿ ಸೇರುವ ಮೊದಲು ಪಕ್ಷವನ್ನು ಕಾಂಗ್ರೆಸ್ನಲ್ಲಿ ವಿಲೀನಗೊಳಿಸಿದ್ದರು.
ಕೆಪಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸ್ಥಾಪಕ ಮಹೇಶ್ ಗೌಡ ಮಂಗಳವಾರ ಸ್ಪೀಕರ್ ರಮೇಶ್ ಕುಮಾರ್ಗೆ ಆರ್. ಶಂಕರ್ ವಿರುದ್ಧ ದೂರು ನೀಡಿದ್ದಾರೆ. ಪಕ್ಷದ ನಿಯಮವನ್ನು ಶಂಕರ್ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಮಹೇಶ್ ಗೌಡ, "ಪಕ್ಷದ ಗಮನಕ್ಕೆ ತರದೆ ಶಂಕರ್ ಕಾಂಗ್ರೆಸ್ ಜೊತೆ ಪಕ್ಷವನ್ನು ವಿಲೀನ ಮಾಡಿದ್ದಾರೆ. ವೀಲಿನ ಕುರಿತಂತೆ ಸ್ಪೀಕರ್ಗೆ ಪತ್ರ ಬರೆದಿರುವುದು ಸರಿಯಲ್ಲ. ಇದನ್ನು ಮಾನ್ಯ ಮಾಡಬಾರದು ಎಂದು ಸ್ಪೀಕರ್ಗೆ ಮನವಿ ಮಾಡಿದ್ದೇವೆ" ಎಂದರು.
"ಜಿಲ್ಲಾ, ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಿ ಆನಂತರ ಪಕ್ಷವನ್ನು ವಿಲೀನ ಮಾಡಬೇಕು. ಆದರೆ, ಆರ್. ಶಂಕರ್ ಯಾವುದೇ ರೀತಿ ಚರ್ಚೆ ನಡೆಸದೇ ವಿಲೀನ ಮಾಡಲು ಮುಂದಾಗಿರುವುದು ಸರಿಯಲ್ಲ. ವಿಲೀನದ ಬಗ್ಗೆ ಶಂಕರ್ ಕೊಟ್ಟಿರುವ ಪತ್ರವನ್ನು ಮಾನ್ಯ ಮಾಡಬಾರದು ಎಂದು ಸ್ಪೀಕರ್ ಅವರಿಗೆ ದೂರು ನೀಡಲಾಗಿದೆ" ಎಂದು ಮಹೇಶ್ ಗೌಡ ಹೇಳಿದರು.
"ಶಂಕರ್ ಸರ್ಕಾರ ರಚನೆಗೆ ಬಾಹ್ಯ ಬೆಂಬಲ ನೀಡಿದ್ದರೂ ಅದು ಅವರ ವೈಯುಕ್ತಿಕ ವಿಚಾರ. ವಿಲೀನ ಕುರಿತಂತೆ ಪಕ್ಷ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎನ್ನುವ ಬಗ್ಗೆ ಇನ್ನೂ ಚರ್ಚೆ ನಡೆದಿಲ್ಲ. ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದರು.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications