ಸಿದ್ದರಾಮಯ್ಯ, ಜಾರ್ಜ್ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು
Recommended Video

ಬೆಂಗಳೂರು, ಅಕ್ಟೋಬರ್ 05 : ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಲಾಗಿದೆ. ಬಿಜೆಪಿ ನಗರ ಜಿಲ್ಲೆ ವಕ್ತಾರ ಎನ್.ಆರ್.ರಮೇಶ್ ದೂರು ನೀಡಿದವರು.
ಬೆಂಗಳೂರು ನಗರದಲ್ಲಿ ಕಸ ವಿಲೇವಾರಿಗೆ ಬಿಬಿಎಂಪಿ ಮಾಡುತ್ತಿದ್ದ ವೆಚ್ಚದಲ್ಲಿ ದಿಢೀರ್ ಹೆಚ್ಚಳವಾಗಿದೆ. ಇದರಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಎನ್.ಆರ್.ರಮೇಶ್ ದೂರು ನೀಡಿದ್ದು, ಜಾರಿ ನಿರ್ದೇಶನಾಲಯ (ಇ.ಡಿ) ದೂರನ್ನು ಸ್ವೀಕಾರ ಮಾಡಿದೆ.

2016ರ ಫೆಬ್ರವರಿ ತನಕ ಕಸ ವಿಲೇವಾರಿಗಾಗಿ ಬಿಬಿಎಂಪಿ ವರ್ಷಕ್ಕೆ 385 ಕೋಟಿ ವೆಚ್ಚ ಮಾಡುತ್ತಿತ್ತು. ಈಗ ಈ ಮೊತ್ತವು 1066 ಕೋಟಿಗಳಿಗೆ ಹೆಚ್ಚಳವಾಗಿದೆ. ಹಣ ಲೂಟಿ ಹೊಡೆಯುವ ಸಲುವಾಗಿ ಮೊತ್ತ ಹೆಚ್ಚಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕೇಂದ್ರ ಸರ್ಕಾರ ಸ್ವಚ್ಚ ಭಾರತ ಯೋಜನೆ ಅಭಿಯಾನದ ಅನ್ವಯ ಬಿಡುಗಡೆ ಮಾಡಿರುವ 146.10 ಕೋಟಿ ಸಹ ಇದರಲ್ಲಿ ಸೇರಿದೆ. ಆದ್ದರಿಂದ, ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ನಡೆಸುವಂತೆ ದೂರಿನಲ್ಲಿ ಎನ್.ಆರ್.ರಮೇಶ್ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್, ಜಂಟಿ ಆಯುಕ್ತ (ಆರೋಗ್ಯ) ಸರ್ಫರಾಜ್ ಖಾನ್ ವಿರುದ್ಧ ದೂರು ನೀಡಲಾಗಿದೆ.
'ಕೇಂದ್ರ ಸರ್ಕಾರದ ಹಣ ದುರ್ಬಳಕೆ ಆಗಿರುವ ಕಾರಣ ಸಿಬಿಐಗೂ ದೂರು ನೀಡಲಾಗಿದೆ. ಲೋಕಾಯುಕ್ತ ಮತ್ತು ಎಸಿಬಿಗೂ ದೂರು ನೀಡಲಾಗುತ್ತದೆ' ಎಂದು ಎನ್.ಆರ್.ರಮೇಶ್ ಹೇಳಿದ್ದಾರೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications