ಕಾಂಡೋಂ ವಿತರಣೆಯಲ್ಲಿ ಐನೂರು ಕೋಟಿ ಸೋರಿಕೆ ಆಗಿದೆಯಾ?
ಬೆಂಗಳೂರು, ಸೆಪ್ಟೆಂಬರ್ 27: ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯಿಂದ 500 ಕೋಟಿ ರುಪಾಯಿ ಅವ್ಯವಹಾರವಾಗಿದೆ. ಈ ಸಮಿತಿಯು ರಾಜ್ಯ ಆರೋಗ್ಯ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಕಾಂಡೋಂ ವಿತರಣೆಗಾಗಿ ಮೀಸಲಿಟ್ಟಿರುವ ಹಣದಲ್ಲಿ 500 ಕೋಟಿ ರುಪಾಯಿ ದುರುಪಯೋಗವಾಗಿದೆ ಎಂದು ಬಿಜೆಪಿ ಕಾರ್ಪೋರೇಟರ್ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.
ದಾಖಲೆ ಸಹಿತ ಆರೋಪ ಮಾಡಿರುವ ಬಿಜೆಪಿ ನಗರ ಘಟಕದ ವಕ್ತಾರ ರಮೇಶ್, ಯು.ಟಿ.ಖಾದರ್ ಆರೋಗ್ಯ ಸಚಿವರಾಗಿದ್ದಾಗ ಅವ್ಯವಹಾರ ನಡೆದಿದೆ. ಆ ಸೊಸೈಟಿಗೆ ಮುಖ್ಯಮಂತ್ರಿ ಅಧ್ಯಕ್ಷರಾದರೆ, ಆರೋಗ್ಯ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಬಹುತೇಕ ಹಗರಣ ನಡೆದಿರುವುದು ಖಾದರ್ ಅವರು ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಎಂದು ಅವರು ಆರೋಪಿಸಿದ್ದಾರೆ.[ಔಷಧಿ ಖರೀದಿಯಲ್ಲಿ ಅಕ್ರಮ : ಯು.ಟಿ.ಖಾದರ್ ಸ್ಪಷ್ಟನೆಗಳು]

ಸೊಸೈಟಿ ಅಧ್ಯಕ್ಷರಾದ ಸಿದ್ದರಾಮಯ್ಯ ವಿರುದ್ಧ ಕೂಡ ಭಷ್ಟಾಚಾರ ನಿಗ್ರಹ ದಳಕ್ಕೆ ರಮೇಶ್ ದೂರು ನೀಡಿದ್ದಾರೆ. ಏಡ್ಸ್ ನಿಯಂತ್ರಣ ಸೊಸೈಟಿಯು ಖಾಸಗಿ ಕಂಪೆನಿಯ ಕಾಂಡೋಂಗಳ ಪ್ರಚಾರ ಮಾಡುತ್ತಿದೆ. ಮತ್ತು ಈ ಕಾಂಡೋಂಗಳನ್ನೇ ಮಹಿಳೆಯರಿಗೆ ವಿತರಿಸುತ್ತಿದೆ. ಈ ಸೊಸೈಟಿಯು ಏಡ್ಸ್ ಬಗ್ಗೆ ಜಾಗೃತಿ ಮೂಡಿಸಬೇಕು ಹಾಗೂ ಎಚ್ ಐವಿ ಪೀಡಿತರಿಗೆ ಸಲಹೆ ಹಾಗೂ ಪುನರ್ವಸತಿ ಕಲ್ಪಿಸಬೇಕು.
ಯುನಿಸೆಫ್, ನ್ಯಾಷನಲ್ ಏಡ್ಸ್ ಕಂಟ್ರೋಲ್ ಆರ್ಗನೈಸೇಶನ್ ಇತರೆ ಸಂಸ್ಥೆಗಳಿಂದ ಬಂದಿರುವ ಅನುದಾನವನ್ನು ಹೇಗೆ ಬಳಸಲಾಗಿದೆ ಎಂಬ ಬಗ್ಗೆ ಸರಿಯಾದ ದಾಖಲೆಗಳನ್ನು ಇಟ್ಟಿಲ್ಲ. ಪರೀಕ್ಷೆಗಳಿಗೆ, ಚಿಕಿತ್ಸೆಗೆ ಎಷ್ಟು ಖರ್ಚು ಮಾಡಲಾಗಿದೆ ಎಂಬ ಬಗ್ಗೆ ಇರುವ ಮಾಹಿತಿಗಳು ಬೋಗಸ್ ಎಂದು ರಮೇಶ್ ಆರೋಪಿಸಿದ್ದಾರೆ.[ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕನ್ನ, ಮೂವರ ಬಂಧನ]
ಸದ್ಯ ಆಹಾರ ನಾಗರಿಕ ಪೂರೈಕೆ ಸಚಿವರಾಗಿರುವ ಖಾದರ್, ನಾವು ಯಾವುದೇ ತನಿಖೆ ಎದುರಿಸಲು ಸಿದ್ಧ. ಮೊದಲು ತನಿಖೆ ಆಗಲಿ. ನಾನು ಆತ್ಮವಿಶ್ವಾಸದಿಂದ ಇದ್ದೀನಿ. ಯಾಕೆಂದರೆ ಇಂಥ ಯಾವುದೇ ಕೆಲಸದಲ್ಲಿ ಭಾಗಿಯಾಗಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ











Click it and Unblock the Notifications