ಕಾಂಗ್ರೆಸ್ ಶಾಸಕಾಂಗ ಸಭೆಗೆ ಬರದವರ ಸದಸ್ಯತ್ವ ರದ್ದು: ಎಚ್ಚರಿಕೆ
ಬೆಂಗಳೂರು, ಜನವರಿ 16: ಇದೇ ತಿಂಗಳ 18 ರಂದು ಕಾಂಗ್ರೆಸ್ ಪಕ್ಷವು ಶಾಸಕಾಂಗ ಸಭೆ ಕರೆದಿದ್ದು, ಸಭೆಗೆ ಹಾಜರಾಗದ ಶಾಸಕರ ಸದಸ್ಯತ್ವವನ್ನು ರದ್ದು ಮಾಡಲಾಗುತ್ತದೆ ಎಂದು ಕೆಪಿಸಿಸಿ ಖಾರವಾಗಿ ಎಚ್ಚರಿಕೆ ನೀಡಿದೆ.
ಆಪರೇಷನ್ ಕಮಲ ಭರ್ಜರಿಯಾಗಿ ನಡೆಯುತ್ತಿರುವ ಹೊತ್ತಿನಲ್ಲಿ ಕರೆದಿರುವ ಸಭೆ ಇದಾಗಿರುವ ಕಾರಣ ಸಭೆಗೆ ಹಾಜರಾಗದಿರುವ ಶಾಸಕರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದಲೇ ರದ್ದು ಮಾಡುವ ಬೆದರಿಕೆಯನ್ನು ಕೆಪಿಸಿಸಿ ಹಾಕಿದೆ.
ಈ ಕುರಿತು ಎಲ್ಲ ಶಾಸಕರಿಗೂ ಪತ್ರವನ್ನು ಕೆಪಿಸಿಸಿ ಬರೆದಿದ್ದು, ಸಭೆಯಲ್ಲಿ ಎಲ್ಲ 80 ಶಾಸಕರು ಹಾಜರಿರಬೇಕು ಯಾರೇ ಗೈರಾದರೂ ಅವರ ಸದಸ್ಯತ್ವವನ್ನು ರದ್ದು ಮಾಡುವ ಹಕ್ಕು ನಮಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಮುಂಬೈನಲ್ಲಿದ್ದ ಅತೃಪ್ತ ಶಾಸಕರಲ್ಲಿ ಕೆಲವರು ಮುನಿಸು ಮರೆತು ಇಂದು ಬೆಂಗಳೂರಿಗೆ ಬಂದಿಳಿದಿದ್ದಾರೆ. ರಮೇಶ್ ಜಾರಕಿಹೊಳಿ ಸೇರಿ ಇನ್ನೂ ಒಂದಿಬ್ಬರು ಶಾಸಕರ ಮುನಿಸು ಮುಗಿದಿಲ್ಲ ಎನ್ನಲಾಗಿದೆ. ಹಾಗಾಗಿ ಅವರು ಶಾಸಕಾಂಗ ಸಭೆಗೆ ಬರುತ್ತಾರೋ ಇಲ್ಲವೋ ಅನುಮಾನವಾಗಿದೆ.
ಶಾಸಕಾಂಗ ಸಭೆಗಳಿಗೆ ಸತತವಾಗಿ ಗೈರಾಗುತ್ತಿರುವ ರಮೇಶ್ ಜಾರಕಿಹೊಳಿ ಜನವರಿ 18ರಂದು ನಡೆವ ಶಾಸಕಾಂಗ ಸಭೆಗೂ ಗೈರಾಗುವ ಸಾಧ್ಯತೆ ಹೆಚ್ಚಾಗಿದೆ. ಅಕಸ್ಮಾತ್ ಅವರು ಗೈರಾದರೆ ಅವರ ಸದಸ್ಯತ್ವ ರದ್ದಾಗುತ್ತದೆಯೇ ಕಾದುನೋಡಬೇಕು.
ತಮ್ಮ ಅತೃಪ್ತ ಶಾಸಕರಲ್ಲಿ ಭಯ ಹುಟ್ಟಿಸಿ ಪಕ್ಷದ ಅಡಿಯಲ್ಲಿಯೇ ಅವರನ್ನು ಉಳಿಸಿಕೊಳ್ಳುವ ಉಮೇದಿನಿಂದಾಗಿ ಕೆಪಿಸಿಸಿ ಹೀಗೊಂದು ಖಡಕ್ ಎಚ್ಚರಿಕೆಯನ್ನು ಶಾಸಕರಿಗೆ ರವಾನಿಸಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications