Basavaraja Bommai: ಎಸ್ಸಿ ಹಾಗೂ ಎಸ್ಟಿಗೆ ಮೀಸಲಿಟ್ಟ ಹಣ ಲೂಟಿ: ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ಆರೋಪ
ಶಿಗ್ಗಾವಿ ಜುಲೈ 6: ಮಾಜಿ ಸಚಿವ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಎಸ್ಸಿ ಹಾಗೂ ಎಸ್ಟಿಗೆ ಮೀಸಲಿಟ್ಟಿದ್ದ 14,000 ಕೋಟಿ ಹಣ ರಾಜ್ಯ ಸರ್ಕಾರದಿಂದ ದುರ್ಬಳಕೆ ಮಾಡಲಾಗಿದೆ ಎಂದು ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಇಂದು ಶಿಗ್ಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, 'ಸಿಗ್ಗಾವಿ ಉಪಚುನಾವಣೆ ವಿಚಾರ ಅಶೋಕ ಅವರ ನೇತೃತ್ವದಲ್ಲಿ ಸಮಿತಿ ಮಾಡಿದ್ದೇವೆ. ಪಕ್ಷದಿಂದ ಸರ್ವೆ ಮಾಡಿಸುತ್ತಿದ್ದೇವೆ. ಶಿಗ್ಗಾವಿಯಲ್ಲಿ ಪೋಸ್ಟರ್ ಭರಾಟೆ ನಡೆಯುವುದಿಲ್ಲ' ಎಂದು ತಿಳಿಸಿದರು.

ನಾನು ರಾಜಕೀಯವಾಗಿ ಬೆಳೆಯಲು ಶಿಗ್ಗಾವಿ ಜನರ ಆಶೀರ್ವಾದ ಕಾರಣ, ಜುಲೈ 12ರಿಂದ ಒಂದುವರೆ ತಿಂಗಳುಗಳ ಕಾಲ ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ಆರಂಭ ಮಾಡುತ್ತೇನೆ ಎಂದು ಸಂಸದ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಶನಿವಾರ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವರು ಗಂಭೀರ ಆರೋಪ ಮಾಡಿದ್ದಾರೆ. ಎಸ್ಸಿ, ಎಸ್ಟಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಆ ಸಮುದಾಯಗಳಿಗೆ ಮೋಸ ಮಾಡುತ್ತಿದೆ. ರಾಜ್ಯ ಸರ್ಕಾರ ದಿವಾಳಿ ಆಗಿರೋದನ್ನು ಪ್ರತಿ ಹೆಜ್ಜೆಯಲ್ಲೂ ಪ್ರದರ್ಶನ ಮಾಡುತ್ತಿದೆ.
ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ತರಕಾರಿ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ. ಇದರ ಮೂಲಕ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುತ್ತಿದೆ. ಎಸ್ಸಿ ಹಾಗೂ ಎಸ್ಟಿಗೆ ಮೀಸಲಿಟ್ಟಿದ್ದ 14,000 ಕೋಟಿ ಹಣ ಗ್ಯಾರಂಟಿಗಳಿಗೆ ಹೋಗುತ್ತಿದೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ.
ಕಾಂಗ್ರೆಸ್ ನವರು ಗ್ಯಾರಂಟಿ ಕೊಟ್ಟು ಜನರ ಮುಂದೆ ಒಳ್ಳೆಯವರಾಗಲು ಹೊರಟಿದ್ದಾರೆ. ಆದರೆ ವೋಟಿಗಾಗಿ ಮಾಡಿದ ಯೋಜನೆಗಳಿಗೆ ಆ ಸಮುದಾಯಕ್ಕೆ ಸೇರಬೇಕಿರುವ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಹಣ ಇಲ್ಲ ಅಂದರೆ ಗ್ಯಾರಂಟಿ ಯಾಕೆ ಕೊಡಬೇಕು? ಇದು ಕಾನೂನು ಉಲ್ಲಂಘನೆಯಾಗಿದೆ ಎಂದು ಆಕ್ರೋಶಗೊಂಡರು.
ಡೆಂಗ್ಯೂ ಪ್ರಕರಣದಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಮಂತ್ರಿಗಳು ಕೇವಲ ಸಭೆ ಮಾಡುತ್ತಿದ್ದಾರೆ. ಚಿಕಿತ್ಸೆ ಸಿಗದಿದ್ದರೆ ಸಾವು ನೋವುಗಳಾಗುತ್ತದೆ. ಜನ ಪರದಾಡುತ್ತಿದ್ದಾರೆ. ಆರೋಗ್ಯ ಇಲಾಕೆ ಸಂಪೂರ್ಣ ವಿಫಲವಾಗಿದ್ದು, ಡಿಎಸ್ಓ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications