Manmohan Singh memorial: ಮನಮೋಹನ್ ಸಿಂಗ್ಗೆ ಅಗೌರವ ಆರೋಪಕ್ಕೆ ಬಿಜೆಪಿ ಕೊಟ್ಟ ಖಡಕ್ ಉತ್ತರವೇನು?
ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅವಕಾಶ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಇತ್ತ ಕಾಂಗ್ರೆಸ್ ಪಕ್ಷವು ಗಾಂಧಿಯೇತರ ನಾಯಕರನ್ನು ಹೀನಾಯವಾಗಿ ನಡೆಸಿಕೊಳ್ಳುತ್ತದೆ ಎಂಬುದನ್ನು ಪ್ರಣಬ್ ಮುಖರ್ಜಿ ಅವರ ಪುತ್ರಿ ಹೇಳಿಕೆ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಬಿಜೆಪಿ ತಿರುಗೇಟು ನೀಡಿದೆ.
ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾದಾಗ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ಕರೆದು, ಸಂತಾಪ ಸೂಚಕ ಸಭೆಯನ್ನು ನಡೆಸುವ ಔದಾರ್ಯವನ್ನೂ ತೋರಲಿಲ್ಲ ಎಂದು ಪ್ರಣಬ್ ಮುಖರ್ಜಿ ಅವರ ಪುತ್ರಿಯೇ ಹೇಳಿದ್ದಾರೆ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಂದ ಹಿಡಿದು, ಪ್ರಣಬ್ ಮುಖರ್ಜಿ ತನಕ ಗಾಂಧಿಯೇತರ ನಾಯಕರನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಬಿಜೆಪಿ ಆರೋಪಿಸಿದೆ.

ದೇಶವನ್ನು ಒಗ್ಗೂಡಿಸಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಪ್ರಧಾನಿ ಹುದ್ದೆಗೆ ಸಮರ್ಥರಾಗಿದ್ದರೂ ಅವರನ್ನು ಪ್ರಧಾನಿಯನ್ನಾಗಿ ಮಾಡಲೇ ಇಲ್ಲ. ಅವರನ್ನು ಇತಿಹಾಸದ ಪುಟಗಳಲ್ಲಿ ಸ್ಮರಿಸುವ ಕೆಲಸವನ್ನೂ ಮಾಡಲಿಲ್ಲ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಹೀನಾಯವಾಗಿ ಸೋಲಿಸಿತು. ಮರಣದ ನಂತರ ದೆಹಲಿಯಲ್ಲಿ ಅಂತ್ಯಸಂಸ್ಕಾರಕ್ಕೂ ಭೂಮಿ ನೀಡಲಿಲ್ಲ ಎಂದು ತಿವಿದಿದೆ.
ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಪಾರ್ಥಿವ ಶರೀರವನ್ನು ದೆಹಲಿಯ ಕಾಂಗ್ರೆಸ್ ಕಚೇರಿಯ ಒಳಗೂ ಬಿಡಲಿಲ್ಲ. ಗೇಟಿನ ಹೊರಭಾಗದಲ್ಲಿ ಪಾರ್ಥಿವ ಶರೀರವನ್ನು ಇಟ್ಟು ಅಂತಿಮ ನಮನ ಸಲ್ಲಿಸುವ ಹಾಗೆ ಮಾಡಲಾಯಿತು. ಆದರೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಿದ್ಧಾಂತವನ್ನು ಅನುಷ್ಠಾನಕ್ಕೆ ತಂದಿದ್ದು ಬಿಜೆಪಿ. ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಪಂಚ ತೀರ್ಥಕ್ಷೇತ್ರವನ್ನು ಮೋದಿ ಸರ್ಕಾರ ಅಭಿವೃದ್ಧಿ ಪಡಿಸಿತು ಎಂದು ಹೇಳಿದೆ.
ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಅವರ ಅತ್ಯಂತ ಎತ್ತರದ ಏಕತಾ ಪ್ರತಿಮೆ ಸ್ಥಾಪಿಸಿ ಗೌರವಿಸಿತು. ದೆಹಲಿಯಲ್ಲಿ ಪಿ.ವಿ. ನರಸಿಂಹ ರಾವ್ ಅವರ ಸ್ಮಾರಕ ನಿರ್ಮಾಣ ಮಾಡಲು ಮೋದಿಯವರ ಸರ್ಕಾರವೇ ಬರಬೇಕಾಯಿತು. ಪ್ರಧಾನಿ ಮೋದಿ ಅವರ ಸರ್ಕಾರವು ಅತ್ಯಂತ ಗೌರವದ ವಿದಾಯವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನೀಡಿದೆ. ಪ್ರಧಾನಿ ಸಹಿತ ಸಂಪುಟದ ಸಚಿವರು ಖುದ್ದಾಗಿ ಉಪಸ್ಥಿತರಿದ್ದು ಗೌರವವನ್ನು ಕೇಂದ್ರ ಸರ್ಕಾರ ನೀಡಿದೆ. ಪಕ್ಷ ಯಾವುದೇ ಇರಲಿ, ಮರಣಾಂತಾನಿ ವೈರಾಣಿ.. ಮರಣದ ನಂತರ ದ್ವೇಷ ಸಲ್ಲ ಎಂಬುದನ್ನು ಮೋದಿ ಸರ್ಕಾರ ಮತ್ತೊಮ್ಮೆ ನಿರೂಪಿಸಿದೆ ಎಂದು ಸಮರ್ಥಿಸಿಕೊಂಡಿದೆ.

ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗ ಮಂಜೂರು ಮಾಡುವಂತೆ ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾಯರು ಅಗಲಿದಾಗ ಅವರಿಗೆ ಕಾಂಗ್ರೆಸ್ ಪಕ್ಷ ಸ್ಮಾರಕ ನೀಡಲೇ ಇಲ್ಲ. 2004-14ರಿಂದ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿತ್ತು. ಆದರೆ ಭಾರತವನ್ನು ದಕ್ಷವಾಗಿ ಮುನ್ನಡೆಸಿದ್ದ ನರಸಿಂಹರಾವ್ ಅವರಿಗೆ ಸ್ಮಾರಕವನ್ನು ಕಾಂಗ್ರೆಸ್ ಮಾಡಲಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ದೂರಿದ್ದಾರೆ.
2015ರಲ್ಲಿ ನರೇಂದ್ರ ಮೋದಿ ಜಿ ನೇತೃತ್ವದ ಬಿಜೆಪಿ ಸರ್ಕಾರ ಬಂದಾಗಲೇ ಪಿ.ವಿ.ನರಸಿಂಹ ರಾಯರಿಗೆ ಸ್ಮಾರಕ ನಿರ್ಮಾಣ ಮಾಡಲು ಮೋದಿ ಸರ್ಕಾರ ಜಾಗ ನೀಡುವ ಜೊತೆಗೆ ನರಸಿಂಹ ರಾಯರಿಗೆ ಮರಣೋತ್ತರ ಭಾರತ ರತ್ನ ಘೋಷಿಸಿತು. ನರಸಿಂಹ ರಾಯರ ಪಾರ್ಥಿವ ಶರೀರವನ್ನು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಇಡಲೂ ಒಪ್ಪಿಗೆ ನೀಡಿರಲಿಲ್ಲ. ರಾಯರಿಗೆ ಕಾಂಗ್ರೆಸ್ ಪಕ್ಷ ಎಷ್ಟರ ಮಟ್ಟಿಗೆ ಅಗೌರವ ತೋರಿತೆಂದರೆ, ಅವರ ಅಂತಿಮ ಸಂಸ್ಕಾರವನ್ನು ನವದೆಹಲಿಯಲ್ಲಿ ಮಾಡದೆ ಹೈದರಾಬಾದ್ನಲ್ಲಿ ಏರ್ಪಾಡು ಮಾಡಿಕೊಳ್ಳುವಂತೆ ಅವರ ಕುಟುಂಬಕ್ಕೆ ಸೂಚಿಸಿತು ಎಂದು ತಿರುಗೇಟು ನೀಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications