ಕರ್ನಾಟಕ, ಹಿಮಾಚಲದಲ್ಲಿ ಗೆದ್ದ ಮೇಲೂ ಕಾಂಗ್ರೆಸ್ಗೆ ಇವಿಎಂ ಮೇಲೆ ಇನ್ನೂ ಅನುಮಾನ ಇದೆಯಂತೆ
2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ವಿಪಕ್ಷ ಕಾಂಗ್ರೆಸ್ಗೆ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (ಇವಿಎಂ) ಮೇಲೆ ಅನುಮಾನ ವ್ಯಕ್ತಪಡಿಸುತ್ತಲೇ ಇದೆ. ವಾಸ್ತವವಾಗಿ ಯುಪಿಎ ಸರ್ಕಾರದ ಅವಧಿಯಲ್ಲೇ ಇವಿಎಂ ಪರಿಚಯಿಸಲಾಗಿತ್ತು ಎಂಬುದು ಗಮನಾರ್ಹ ಸಂಗತಿ.
ಆ ಬಳಿಕ ದೇಶದ ಹಲವು ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಕಂಡಿತು. 2019ರ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ನೆಲಕಚ್ಚಿತು. ಇದು ಕಾಂಗ್ರೆಸ್ಗೆ ಇವಿಎಂ ಮೇಲಿನ ಅನುಮಾನ ಮತ್ತಷ್ಟು ಹೆಚ್ಚಾಯಿತು. ಹಲವು ಬಾರಿ ಇದರ ಬಗ್ಗೆ ಕಾಂಗ್ರೆಸ್ ನಾಯಕರು ಪ್ರಸ್ತಾಪಿಸಿದ್ದರೂ, ಯಾವೊಬ್ಬ ನಾಯಕರೂ ಇವಿಎಂ ಹ್ಯಾಕ್ ಅನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ.

ರಾಜಸ್ಥಾನ, ಛತ್ತೀಸ್ಗಡ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಮರಳಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ಗೆ ಇನ್ನೂ ಇವಿಎಂ ಮೇಲಿನ ತನ್ನ ಅನುಮಾನವನ್ನು ಕೈಬಿಟ್ಟಿಲ್ಲ.
ನಮ್ಮ ಪಕ್ಷ ಗೆಲುವು ಸಾಧಿಸಿದ್ದರೂ ವಿದ್ಯುನ್ಮಾನ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (ಇವಿಎಂ) ಸಂಬಂಧಿಸಿದ ಕಾಂಗ್ರೆಸ್ನ ಪ್ರಶ್ನೆಗಳು ಮುಂದುವರಿಯುತ್ತವೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಮಂಗಳವಾರ ಹೇಳಿದ್ದಾರೆ.

ಇವಿಎಂಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ನ ಆತಂಕ, ಫಲಿತಾಂಶದ ಜೊತೆ ವಿವಿ ಪ್ಯಾಟ್ಗಳ ತಾಳೆ ಮಾಡುವುದು, ಕಳೆದುಹೋದ ಯಂತ್ರಗಳು ಮತ್ತು ದೋಷಯುಕ್ತ ಯಂತ್ರಗಳು ಮತ್ತು ಇತ್ತೀಚೆಗೆ ಬೆಳಕಿಗೆ ಬಂದ ದೋಷಯುಕ್ತ ಯಂತ್ರಗಳಲ್ಲಿ ಎಸ್ಒಪಿಗಳನ್ನು ಅನುಸರಿಸದಿರುವುದು ನಮ್ಮ ಪ್ರಶ್ನೆಗಳಾಗಿವೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷ ಕರ್ನಾಟಕ ಮತ್ತು ಹಿಮಾಚಲ ಪ್ರದೇಶದಲ್ಲಿ ಗೆದ್ದಿದೆ ಎಂದ ಮಾತ್ರಕ್ಕೆ ಇವಿಎಂಗಳ ಮೇಲಿನ ನಮ್ಮ ಪ್ರಶ್ನೆಗಳು ನಿಲ್ಲುವುದಿಲ್ಲ ಎಂದು ಪವನ್ ಖೇರಾ ಅವರು ಮಂಗಳವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಮಾತನಾಡಿದ ಪವನ್ ಖೇರಾ, "ಶೀಘ್ರದಲ್ಲೇ ಈ ಬಗ್ಗೆ ಅಧಿಕೃತವಾಗಿ ಘೋಷಣೆಯಾಗಲಿದೆ. ಚುನಾವನೆಯಲ್ಲಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದ್ದು, ಹೈಕಮಾಂಡ್ ನಾಯಕರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ," ಎಂದು ಪವನ್ ಖೇರಾ ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ಬಿಜೆಪಿ ವಿರುದ್ಧವೂ ಕಿಡಿಕಾರಿದ ಪವನ್ ಖೇರಾ, ""ಪ್ರತಿ ರಾಜ್ಯದಲ್ಲೂ ವಿರೋಧ ಪಕ್ಷದ ನಾಯಕನ ಸ್ಥಾನವೂ ಮಹತ್ವದ್ದಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಯಾವಾಗ ವಿಪಕ್ಷ ನಾಯಕನನ್ನು ನೇಮಿಸುತ್ತದೆ,'' ಎಂದು ಪ್ರಶ್ನಿಸಿದ್ದಾರೆ.
"ಮುಖ್ಯಮಂತ್ರಿ ನೇಮಕ ಅಷ್ಟು ಸುಲಭದ ಮಾತಲ್ಲ. ಇಲ್ಲಿ ಎಲ್ಲರ ಅಭಿಪ್ರಾಯಕ್ಕೂ ಮನ್ನಣೆ ನೀಡಬೇಕಾಗುತ್ತದೆ. ಪ್ರತಿ ಶಾಸಕನ ಮತ್ತು ನಾಯಕರ ಅಭಿಪ್ರಾಯಕ್ಕೆ ಬೆಲೆ ನೀಡಿ ನಿರ್ಧರಿಸಬೇಕೆಂದು," ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದರು.
ಮುಂಬರುವ ಲೋಕಸಭೆ ಚುನಾವಣೆ ವೇಳೆಗೆ ತೆಲಂಗಾಣದಲ್ಲಿ ಬಿಆರ್ಎಸ್ ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಬಹುದೇ ಎಂಬ ಪ್ರಶ್ನೆಗೆ, "ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ ಪಕ್ಷವನ್ನು ಎದುರಿಸುವ ಮತ್ತು ಪಂಜಾಬ್ನಲ್ಲಿ ಎಎಪಿ ಜೊತೆ ಹೋರಾಡುವ ಶಕ್ತಿ ಕಾಂಗ್ರೆಸ್ಗೆ ಇರುವ ಕಾರಣ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲವೆಂದು," ಪವನ್ ಖೇರಾ ಸ್ಪಷ್ಟಪಡಿಸಿದರು.
ರಾಜಸ್ಥಾನದಲ್ಲಿ ಬಂಡಾಯ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಪವನ್ ಖೇರಾ, ಆ ರಾಜ್ಯದ ಪಕ್ಷದ ನಾಯಕರ ಅಭಿಪ್ರಾಯಗಳನ್ನು ರಾಜಸ್ಥಾನ ಉಸ್ತುವಾರಿ ಪಡೆದಿದ್ದು, ಅವರ ವರದಿಯ ನಂತರ ಪಕ್ಷ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಉತ್ತರಿಸಿದರು.
ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಬ್ಬರಿಗಿಂತ ಹೆಚ್ಚು ಸಮರ್ಥ ನಾಯಕರಿದ್ದಾರೆ. ಆದರೆ, ಒಬ್ಬರೇ ಮುಖ್ಯಮಂತ್ರಿಯಾಗಬೇಕಾಗುತ್ತದೆ. ಉಳಿದ ನಾಯಕರಿಗೂ ಭರವಸೆ ಮತ್ತು ಮಹತ್ವಾಕಾಂಕ್ಷೆಗಳಿರುತ್ತವೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications