ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಯೋತ್ಪಾದಕರೊಂದಿಗೆ ಬಿಜೆಪಿ ನಂಟು; ಕಾಂಗ್ರೆಸ್ ಸಂಸದರಿಂದ ಇದೆಂಥಾ ಆರೋಪ!?

|
Google Oneindia Kannada News

ಬೆಂಗಳೂರು, ಜುಲೈ 9: ಭಾರತದ ಜನರಿಗೆ ರಾಷ್ಟ್ರೀಯತೆ ಪಾಠ ಮಾಡುವ ಬಿಜೆಪಿ, ದೇಶ ವಿರೋಧಿ ಭಯೋತ್ಪಾದಕರ ಜೊತೆಗೆ ನಿಕಟ ಸಂಪರ್ಕ ಹೊಂದಿರುವುದು ಹಲವು ಬಾರಿ ಸಾಬೀತಾಗಿದೆ. ಅದಾಗ್ಯೂ ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯಾಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ ತುಟಿ ಬಿಚ್ಚಿಲ್ಲ ಯಾಕೆ?. ಇದು ಬಿಜೆಪಿ ಹಾಗೂ ಭಯೋತ್ಪಾದಕರ ನಡುವೆ ಸಂಬಂಧವಿದೆ ಎಂಬುದನ್ನು ಸ್ಪಷ್ಟಡಿಸುತ್ತದೆ,' ಎಂದು ಕಾಂಗ್ರೆಸ್ ಟೀಕಿಸಿದೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ಉತ್ತಮ್ ಕುಮಾರ್ ರೆಡ್ಡಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಬಿಜೆಪಿ ಹಾಗೂ ಭಯೋತ್ಪಾದಕರ ನಡುವಿನ ಸಂಬಂಧ ಏನಿದೆ ಎಂಬುದನ್ನು ಅವರು ದಾಖಲೆ ಸಮೇತ ವಿವರಿಸಿದರು.

ರಾಜಕೀಯ ಲಾಭಕ್ಕಾಗಿ ವೈದ್ಯಕೀಯ ಕಾಲೇಜು ನಿರ್ಮಿಸಿಲ್ಲ: ಸಚಿವ ಡಾ.ಕೆ.ಸುಧಾಕರ್ರಾಜಕೀಯ ಲಾಭಕ್ಕಾಗಿ ವೈದ್ಯಕೀಯ ಕಾಲೇಜು ನಿರ್ಮಿಸಿಲ್ಲ: ಸಚಿವ ಡಾ.ಕೆ.ಸುಧಾಕರ್

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ, ಸಹ ಅಧ್ಯಕ್ಷ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ಮುಖ್ಯ ವಕ್ತಾರ ನಾಗರಾಜ್ ಯಾದವ್, ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಸಹ ಹಾಜರಾಗಿದ್ದರು. ಈ ವೇಳೆ ಬಿಜೆಪಿಯ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿದ್ದೇನು ಎಂಬುದನ್ನು ವರದಿಯಲ್ಲಿ ತಿಳಿದುಕೊಳ್ಳೋಣ.

Congress Alleges BJP Joints Hands with Terrerists to Shake Indian Security

ಲೋಕಸಭಾ ಸದಸ್ಯ ಉತ್ತಮ್ ಕುಮಾರ್ ರೆಡ್ಡಿ ಹೇಳಿದ್ದೇನು?

ಲೋಕಸಭಾ ಸದಸ್ಯ ಉತ್ತಮ್ ಕುಮಾರ್ ರೆಡ್ಡಿ ಹೇಳಿದ್ದೇನು?

‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಯೋತ್ಪಾನೆಯಂತಹ ರಾಷ್ಟ್ರ ಮಟ್ಟದ ಗಂಭೀರ ವಿಚಾರದಲ್ಲಿ ರಾಜಕೀಯ ಮಾಡಲು ಇಚ್ಛಿಸುವುದಿಲ್ಲ. ಆದರೆ ಬಿಜೆಪಿ ಹಾಗೂ ಭಯೋತ್ಪಾದಕರ ನಡುವೆ ನಿಕಟವಾದ ಸಂಪರ್ಕವಿದೆ ಎಂಬುದಕ್ಕೆ ಹಲವು ಘಟನೆ ಸಾಕ್ಷಿಯಾಗಿವೆ. ಹೀಗಾಗಿ ರಾಷ್ಟ್ರೀಯತೆ ಬಗ್ಗೆ ಪ್ರವಚನ ಮಾಡುವ ಬಿಜೆಪಿಗೆ ಕೆಲವು ನೇರ ಪ್ರಶ್ನೆಗಳನ್ನು ಕೇಳ ಬಯಸುತ್ತೇವೆ ಎನ್ನುವ ಮೂಲಕ ಲೋಕಸಭಾ ಸದಸ್ಯ ಉತ್ತಮ್ ಕುಮಾರ್ ರೆಡ್ಡಿ ಮಾತು ಶುರು ಮಾಡಿದರು.

ಉದಯಪುರದಲ್ಲಿ ಕನ್ಹಯ್ಯ ಲಾಲ್ ಕೊಲೆ ಪ್ರಕರಣ

ಉದಯಪುರದಲ್ಲಿ ಕನ್ಹಯ್ಯ ಲಾಲ್ ಕೊಲೆ ಪ್ರಕರಣ

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಹತ್ಯೆಯ ಪ್ರಮುಖ ಆರೋಪಿ ಮೊಹಮದ್ ರಿಯಾಜ್ ಅತ್ತಾರಿ ಬಿಜೆಪಿಯ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಆತ ಸ್ಥಳೀಯ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡಿದ್ದನು. ಮಾಧ್ಯಮ ವರದಿ ಪ್ರಕಾರ ಅತ್ತಾರಿ ರಾಜಸ್ಥಾನದ ವಿರೋಧ ಪಕ್ಷದ ನಾಯಕ ಬಿಜೆಪಿಯ ಗುಲಾಬ್ ಚಾಂದ್ ಕಟಾರಿಯಾರ ಅಳಿಯನ ಬಳಿ ಕೆಲಸ ಮಾಡುತ್ತಿದ್ದು, ಬಿಜೆಪಿ ನಾಯಕರ ಅನೇಕ ಕಾರ್ಯಕ್ರಮಗಳಲ್ಲಿ ಈತನೂ ಭಾಗಿಯಾಗಿದ್ದನು ಎಂಬುಬದನ್ನು ಉತ್ತಮ್ ರೆಡ್ಡಿ ಉಲ್ಲೇಖಿಸಿದರು.

ಇನ್ನು, ಜಮ್ಮು ಕಾಶ್ಮೀರದಲ್ಲಿ ಸ್ಥಳೀಯರಿಂದ ಸೆರೆ ಹಿಡಿಯಲ್ಪಟ್ಟ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರ ತಲಿಬ್ ಹುಸೇನ್ ಶಾ ಅಮರನಾಥ ಯಾತ್ರೆ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದನು. ಈತ ಬಿಜೆಪಿ ಪಕ್ಷದ ಪದಾಧಿಕಾರಿಯಾಗಿದ್ದು, ಜಮ್ಮು ಕಾಶ್ಮೀರದ ಅಲ್ಪಸಂಖ್ಯಾತ ವಿಭಾಗದ ಸಾಮಾಜಿಕ ಜಾಲತಾಣ ಉಸ್ತುವಾರಿ ಆಗಿದ್ದನು. ಈತ ಅಮಿತಾ ಶಾ ಹಾಗೂ ಇತರ ಹಿರಿಯ ನಾಯಕರ ಜೊತೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾನೆ.

ಅಮರಾವತಿಯ ರಸಾಯನಶಾಸ್ತ್ರಜ್ಞ ಉಮೇಶ್ ಖೊಲ್ಲೆ ಹತ್ಯೆ ಪ್ರಕರಣದ ರೂವಾರಿ ಇರ್ಫಾನ್ ಖಾನ್ ಪಕ್ಷೇತರ ಸಂಸದೆ ನವನೀತ್ ರಾಣಾ ಹಾಗೂ ಆಕೆಯ ಪತಿ ರವಿ ರಾಣಾ ಆತ್ಯಾಪ್ತ ಎಂದು ಮಾಧ್ಯಮಗಳೇ ವರದಿ ಮಾಡಿವೆ. ಇದರ ಜೊತೆಗೆ ಇರ್ಫಾನ್ ರಾಣಾ ಪರವಾಗಿ ಮತಯಾಚನೆ ಮಾಡಿ ಪ್ರಚಾರ ಮಾಡಿದ್ದು, ರಾಣಾ ದಂಪತಿಗೂ ಬಿಜೆಪಿಗೂ ನಿಕಟ ಸಂಬಂಧವಿದೆ ಎಂದರು.

ಇತಿಹಾಸದ ಬಗ್ಗೆ ಕಾಂಗ್ರೆಸ್ ಮುಖಂಡ ರೆಡ್ಡಿ ಉಲ್ಲೇಖ

ಇತಿಹಾಸದ ಬಗ್ಗೆ ಕಾಂಗ್ರೆಸ್ ಮುಖಂಡ ರೆಡ್ಡಿ ಉಲ್ಲೇಖ

ಬಿಜೆಪಿ ಮಾಜಿ ನಾಯಕ ಹಾಗೂ ಮಾಜಿ ಸರಪಂಚ್ ತಾರಿಖ್ ಅಹ್ಮದ್ ಮೀರ್ 2020ರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ನವೀದ್ ಬಾಬುಗೆ ಶಸ್ತ್ರಾಸ್ತ್ರ ಪೂರೈಕೆ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಇದಕ್ಕೂ ಮುನ್ನ ನವೀದ್ ಬಾಬು ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ ಪ್ರಕರಣದಲ್ಲಿ ಡಿಎಸ್ ಪಿ ದವಿಂದರ್ ಸಿಂಗ್ ಜೊತೆಗೆ ಬಂಧನವಾಗಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯು ಮೀರ್ ಹಾಗೂ ದವೀಂದರ್ ಸಿಂಗ್ ನಡುವೆ ಸಂಪರ್ಕವಿತ್ತು ಎಂಬುದನ್ನು ಧೃಡಪಡಿಸಿದೆ. ದವೀಂದರ್ ಸಿಂಗ್ ಅನ್ನು ಸರಿಯಾಗಿ ವಿಚಾರಣೆ ನಡೆಸಿದ್ದರೆ ಸತ್ಯಾಂಶ ಹೊರ ಬರುತ್ತಿತ್ತು, ಆದರೆ ಈ ತನಿಖೆಯನ್ನು ಅರ್ಧಕ್ಕೆ ನಿಲ್ಲಿಸಲಾಯಿತು ಎಂದು ಆರೋಪಿಸಿದರು.

ಅದೇ ರೀತಿ ಕಳೆದ 2017ರಲ್ಲಿ ಮಧ್ಯಪ್ರದೇಶದ ಭಯೋತ್ಪದನಾ ನಿಗ್ರಹ ದಳ ಬಿಜೆಪಿ ಐಟಿ ಸೆಲ್ ಸದಸ್ಯ ಧೃವ್ ಸಕ್ಸೇನಾ ಹಾಗೂ ಆತನ 10 ಸಹಚರರನ್ನು ಐಎಸ್ಐ ಪರವಾಗಿ ಗೂಢಾಚಾರಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ಬಂಧಿಸಿತ್ತು. ಈ ತಂಡ ಕಾನೂನು ಬಾಹಿರವಾಗಿ ದೂರವಾಣಿ ಸಂಪರ್ಕ ಜಾಲವನ್ನು ಹೊಂದಿದ್ದು, ಆ ಮೂಲಕ ಬೇಹುಗಾರಿಕೆ ನಡೆಸುತ್ತಿತ್ತು. ಈ ಸಕ್ಸೆನಾ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜೊತೆಗಿನ ಫೋಟೋ ಕೂಡ ವೈರಲ್ ಆಗಿತ್ತು.

ಇನ್ನು, ಅಸ್ಸಾಂ ಬಿಜೆಪಿ ನಾಯಕ ನಿರಂಜನ್ ಹೊಜೈ ಸರ್ಕಾರದ ಹಣವನ್ನು ಭಯೋತ್ಪಾದಕ ಸಂಘಟನೆಗಳಿಗೆ ಕಳುಹಿಸುತ್ತಿದ್ದ ಹಾಗೂ ಈ ರೀತಿ 1 ಸಾವಿರ ಕೋಟಿ ಹಗರಣ ನಡೆಸಿದ ಆರೋಪದ ಮೇಲೆ 2017ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು. ಈ ಹಣದಲ್ಲಿ ಭಯೋತ್ಪಾದಕ ಸಂಘಟನೆಗಳು ಶಸ್ತ್ರಾಸ್ತ್ರ ಖರೀದಿ ಮಾಡಿ ರಾಷ್ಟ್ರದ ಮೇಲೆ ದಾಳಿ ಮಾಡುತ್ತಿದ್ದವು.

ಜಮ್ಮು ಕಾಶ್ಮೀರದಲ್ಲಿ ಉಗ್ರನಿಗೆ ಬಿಜೆಪಿ ಟಿಕೆಟ್

ಜಮ್ಮು ಕಾಶ್ಮೀರದಲ್ಲಿ ಉಗ್ರನಿಗೆ ಬಿಜೆಪಿ ಟಿಕೆಟ್

ಶ್ರೀನಗರದ ಪಾಲಿಕೆ 33ನೇ ವಾರ್ಡ್ ಚುನಾವಣೆಯಲ್ಲಿ ಮೊಹಮದ್ ಫಾರೂಖ್ ಖಾನ್ ಬಿಜೆಪಿ ಅಭ್ಯರ್ಥಿಯಾಗಿದ್ದು, ಪಕ್ಷವೇ ಟಿಕೆಟ್ ನೀಡಿತ್ತು. ಆದರೆ ಆತ ಜಾಗತಿಕ ಉಗ್ರ ಮಸೂದ್ ಅಜರ್ ಸಹಚರನಾಗಿದ್ದ. ಅಲ್ಲದೆ ಈತ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ ಹಾಗೂ ಹರ್ಕತ್ ಉಲ್ ಮುಜಾಹಿದ್ದೀನ್ ಸಂಘಟನೆಗಳ ಸದಸ್ಯನೂ ಆಗಿದ್ದ. ಈ ವಿಚಾರ ತಿಳಿದೂ ಕೂಡ ಬಿಜೆಪಿ ಈತನಿಗೆ ಟಿಕೆಟ್ ನೀಡಿತ್ತು.

1999ರ ಕಂದಹಾರ್ ಹೈಜಾಕ್ ಪ್ರಕರಣದ ವೇಳೆ ಉಗ್ರ ಮಸೂದ್ ಅಜರ್ ಬಿಡುಗಡೆ ವಿಚಾರದಲ್ಲೂ ಬಿಜೆಪಿ ಸರ್ಕಾರದ ಮೇಲೆ ಅನುಮಾನಗಳು ವ್ಯಕ್ತವಾಗಿತ್ತು. ನಂತರ ಅಜರ್ ಜೈಶ್ ಎ ಮೊಹಮದ್ ಸಂಘಟನೆ ಸ್ಥಾಪಿಸಿ 2001ರಲ್ಲಿ ಸಂಸತ್ ಮೇಲಿನ ದಾಳಿ ಹಾಗೂ 2008ರಲ್ಲಿ ಮುಂಬೈ ಮೇಲೆ ದಾಳಿ ಮಾಡಿ ನೂರಾರು ಜನರನ್ನು ಹತ್ಯೆ ಮಾಡಿಸಿದರು.

ಮಸೂದ್ ಅಜರ್ 2019ರ ಪುಲ್ವಾಮ ದಾಳಿಯ ರೂವಾರಿ ಆಗಿದ್ದು, ಇದರಲ್ಲಿ 44 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಇನ್ನು ಗಡಿಯಲ್ಲಿ ಹಲವು ಚೆಕ್ ಪಾಂಯಿಂಟ್ ಬಳಿ ಭದ್ರತೆಯ ಕಣ್ಣು ತಪ್ಪಿಸಿ 200 ಕೆ.ಜಿಯಷ್ಟು ಆರ್ ಡಿಎಕ್ಸ್ ಹಾಗೂ ಇತರೆ ಸ್ಫೋಟಕಗಳು ಹೇಗೆ ರವಾನೆಯಾಗಿತ್ತು? ಈ ಕುರಿತ ತನಿಖೆ ಏಕೆ ನಡೆಯಲಿಲ್ಲ ಎಂಬ ಪ್ರಶ್ನೆ ಹಾಗೇ ಉಳಿದಿವೆ.

ರಾಷ್ಟ್ರೀಯತೆ ಬಗ್ಗೆ ಪದೇ ಪದೆ ಮಾತನಾಡುವ ಪಕ್ಷ, ಭಯೋತ್ಪಾದನೆ ವಿಚಾರದಲ್ಲಿ ಸದಾ ಸುಳ್ಳಿನ ಮೂಲಕ ವಿರೋಧ ಪಕ್ಷಗಳ ವಿರುದ್ಧ ಪ್ರಚಾರ ಮಾಡುವ ಬಿಜೆಪಿ ವಿರುದ್ಧ ಈಗ ಸಾಕಷ್ಟು ಸಾಕ್ಷ್ಯಗಳು ಇವೆ. ಉದಯಪುರ ಹತ್ಯೆ ಪ್ರಕರಣದಿಂದ ಜಮ್ಮು ಕಾಶ್ಮೀರದ ಹುಸೇನ್ ಪ್ರಕರಣದವರೆಗೂ ಪ್ರಧಾನಿ ಮೋದಿ ಆಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ ಯಾವುದೇ ರೀತಿ ಹೇಳಿಕೆ ನೀಡದಿರುವುದು ಆಘಾತ ತಂದಿದೆ. ಇಂತಹ ಕೋಮು ಸಂಘರ್ಷ ನಡೆಯಬಾರದು. ಇನ್ನು ಮುಂದೆ ಈ ರೀತಿ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕೂಡ ಭರವಸೆ ನೀಡಲು ಸರ್ಕಾರ ವಿಫಲವಾಗಿದೆ.

ಬಿಜೆಪಿಯಿಂದ ದೇಶದಲ್ಲಿ ಕೋಮ ಗಲಭೆ ಎಂದ ಕಾಂಗ್ರೆಸ್

ಬಿಜೆಪಿಯಿಂದ ದೇಶದಲ್ಲಿ ಕೋಮ ಗಲಭೆ ಎಂದ ಕಾಂಗ್ರೆಸ್

ಇಷ್ಟು ದಿನಗಳ ಕಾಲ ಚುನಾವಣೆಯಲ್ಲಿ ಮತಗಳಿಸಲು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆಯುತ್ತಿದ್ದ ಬಿಜೆಪಿ ಈಗ ಒಂದು ಹೆಜ್ಜೆ ಮುಂದೆ ಹೋಗಿದೆ. ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಕೋಮು ಗಲಭೆ ಮಾಡಿಸಲು ಮುಂದಾಗಿದೆಯೇ? ಎಂಬ ಪ್ರಶ್ನೆ ಕಾಡುತ್ತಿದೆ. ಒಂದೆಡೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಒಂದು ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ಬೆಂಕಿ ಹಚ್ಚಿದರೆ, ಮತ್ತೊಂದು ಕಡೆ ಬಿಜೆಪಿ ಕಾರ್ಯಕರ್ತ ಮೊಹಮದ್ ರಿಯಾಜ್ ಅತ್ತಾರಿ ಕೊಲೆ ಮಾಡಿ ಮತ್ತೊಂದು ಧರ್ಮವನ್ನು ಕೆಣಕುವ ಕೆಲಸ ಮಾಡುತ್ತಿದೆ. ಬಿಜೆಪಿಯ ಈ ಪ್ರಯತ್ನ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

Recommended Video

Sri Lanka ಜನತೆ ರಾಷ್ಟ್ರಪತಿಗಳ ಮನೆಗೆ ನುಗ್ಗಿದ್ದು ಹೀಗೆ | *World | OneIndia Kannada
ಭಾರತದಲ್ಲಿ ಹೊಸ ಆತಂಕ ಸೃಷ್ಟಿಸುವುದೇ ಅಗ್ನಿಪಥ್ ಯೋಜನೆ?

ಭಾರತದಲ್ಲಿ ಹೊಸ ಆತಂಕ ಸೃಷ್ಟಿಸುವುದೇ ಅಗ್ನಿಪಥ್ ಯೋಜನೆ?

ಜಪಾನ್ ಪ್ರಧಾನಿ ಹಂತಕ ಅಲ್ಲಿನ ಸೇನೆಯಲ್ಲಿ ಮೂರು ವರ್ಷ ಸೇವೆ ಸಲ್ಲಿಸಿದ್ದು, ಭಾರತದಲ್ಲಿ ಅಗ್ನಿಪಥ್ ಯೋಜನೆಯು ಇಂತಹ ಆತಂಕ ಎದುರಾಗಬಹುದೇ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತಮ್ ಕುಮಾರ್ ರೆಡ್ಡಿ ಉತ್ತರಿಸಿದರು.
ನನ್ನ ಪ್ರಕಾರ ಈ ಎರಡನ್ನು ಹೋಲಿಕೆ ಮಾಡುವುದು ಸರಿಯಲ್ಲ. ಆದರೆ ಅಗ್ನಿಪಥ್ ಯೋಜನೆಯು ದೇಶದ ಸೇನಾ ಪಡೆಯನ್ನು ದುರ್ಬಲಗೊಳಿಸಲಿದೆ. ನಾನು ಸೇನೆಯಲ್ಲಿ ಸೇವೆ ಸಲ್ಲಿಸಿದ್ದು, ನಾನು 4 ವರ್ಷಗಳ ಕಾಲ ತರಬೇತಿ ಪಡೆದಿದ್ದೆ. ಆದರೆ ಈ ಯೋಜನೆಯಲ್ಲಿ ಕೇವಲ 6 ತಿಂಗಳು ತರಬೇತಿ ನೀಡಿ ಉಳಿದ ಮೂರುವರೆ ವರ್ಷ ಸೇವೆ ಸಲ್ಲಿಸುವುದಾಗಿದೆ. ಈ ಯೋಜನೆ ವಿಚಾರವಾಗಿ ನಾನು ನನ್ನ ಸೇನಾ ಸಹೋದ್ಯೋಗಿಗಳ ಜೊತೆ ಚರ್ಚೆ ಮಾಡಿದ್ದು, ಎಲ್ಲರೂ ಈ ಯೋಜನೆ ವಿರುದ್ಧ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಈ ಯೋಜನೆ ನಮ್ಮ ಸೇನಾ ಪಡೆಗಳ ಸಾಮರ್ಥ್ಯವನ್ನು ಕುಗ್ಗಿಸಲಿದೆ. ಸಾಮಾನ್ಯ ಯೋಧನ ತರಭೇತಿ ಕನಿಷ್ಠ 1 ವರ್ಷ ಇರುತ್ತದೆ. ಆದರೆ ಕೇವಲ 6 ತಿಂಗಳ ತರಬೇತಿ ಸಮರ್ಥ ಯೋಧರನ್ನು ತಯಾರು ಮಾಡಲು ಸಾಧ್ಯವಿಲ್ಲ. ಕೇವಲ ಪಿಂಚಣಿ ಹೊರೆಯನ್ನು ತಗ್ಗಿಸಲು ಬಿಜೆಪಿ ಸರ್ಕಾರ ಇಂತಹ ನಿರ್ಧಾರಕ್ಕೆ ಬಂದಿರುವುದು ದುರಂತ. ಸೇನೆಗೆ ಸೇರುವ ಪ್ರತಿಯೊಬ್ಬರು ದೇಶಕ್ಕಾಗಿ ಬದುಕಿ, ದೇಶಕ್ಕಾಗಿ ಸಾಯುವ ಮನಸ್ಥಿತಿ ಹೊಂದಿರುತ್ತಾರೆ. ಈ ಮನಸ್ಥಿತಿಗೆ ಬಿಜೆಪಿ ಸರ್ಕಾರ ನಾಶ ಮಾಡಿದೆ. ಇಷ್ಟು ದಿನಗಳ ಕಾಲ ಇದ್ದ ಸೇನಾ ನೇಮಕಾತಿ ವ್ಯವಸ್ಥೆಯಲ್ಲಿ ದೋಷವಾದರೂ ಏನಿದೆ ಎಂಬುದು ದೊಡ್ಡ ಪ್ರಶ್ನೆ. ಇನ್ನು ದೇಶ ಇದೇ ಮೊದಲ ಬಾರಿಗೆ ಚೀನಾ ಹಾಗೂ ಪಾಕಿಸ್ತಾನ ಎರಡೂ ದೇಶಗಳಿಂದ ಒಟ್ಟಿಗೆ ಯುದ್ಧ ಆತಂಕವನ್ನು ಎದುರಿಸುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಸೇನೆಯಲ್ಲಿ ಯೋಧರ ಸಂಖ್ಯೆ ಕಡಿಮೆ ಮಾಡಿ ಯೋಧರ ತರಬೇತಿಯನ್ನು ಕಡಿಮೆ ಮಾಡಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ.

ದೇಶದ ಸೇನೆಯಲ್ಲಿ ಒಟ್ಟು ಸಾಮರ್ಥ್ಯ 13 ಲಕ್ಷ. ಆದರೆ ಸದ್ಯ ಸೇನೆಯಲ್ಲಿರುವ ಸೈನಿಕರ ಸಂಖ್ಯೆ 11 ಲಕ್ಷ. ಕೋವಿಡ್ ಹಿನ್ನೆಲೆ ಯಾವುದೇ ಸೇನಾ ನೇಮಕಾತಿ ಮಾಡಿರಲಿಲ್ಲ. ರಾಜಕೀಯ ಚುನಾವಣೆಗಳನ್ನು ಮಾಡಲು ಸಾಧ್ಯವಾದ ಸರ್ಕಾರಕ್ಕೆ ಸೇನಾ ನೇಮಕಾತಿ ಮಾಡಲು ಸಾಧ್ಯವಾಗಲಿಲ್ಲ. ಇನ್ನು ಕೋವಿಡ್ ಮುನ್ನ ಪ್ರತಿ ವರ್ಷ 60 ಸಾವಿರ ಯೋಧರ ನೇಮಕಾತಿ ಆಗುತ್ತಿತ್ತು. ಆದರೆ ಈಗ ಅದನ್ನು 46 ಸಾವಿರಕ್ಕೆ ಇಳಿಸಲಾಗಿದೆ. ಸೇನೆಗೆ ನೀಡುವ ವೇತನ ಹಾಗೂ ಪಿಂಚಣಿ ಹಣವನ್ನು ಉಳಿಸುವ ಸಲುವಾಗಿ ಬಿಜೆಪಿ ಸರ್ಕಾರ ದೇಶದ ಭದ್ರತೆ ಜೊತೆ ಚೆಲ್ಲಾಟವಾಡುತ್ತಿರುವುದು ಮೂರ್ಖತನವಾಗುತ್ತದೆ ಎಂದು ಉತ್ತಮ್ ರೆಡ್ಡಿ ಹೇಳಿದರು.

ಅಗ್ನಿಪಥ್ ಯೋಜನೆಯಲ್ಲಿ ಸೇವೆ ನಿರ್ವಹಿಸುವ ಯೋಧರಿಗೆ ಕೇಂದ್ರ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಕೆಲಸ ನೀಡುವುದಾಗಿ ಹೇಳುತ್ತಿದ್ದಾರೆ. ಆದರೆ ಮೋದಿ ಅಧಿಕಾರಕ್ಕೆ ಬಂದ 8 ವರ್ಷಗಳಲ್ಲಿ ನಿವೃತ್ತ ಯೋಧರು ಸರ್ಕಾರಿ ಹುದ್ದೆಗಳಿಗೆ ಸಲ್ಲಿಸಿದ ಅರ್ಜಿಗಳ ಪೈಕಿ ಶೇ.1ರಷ್ಟು ಯೋಧರಿಗೆ ಉದ್ಯೋಗ ನೀಡಲಾಗಿಲ್ಲ. ಈಗ ಅಗ್ನಿವೀರರಿಗೆ ಉದ್ಯೋಗ ನೀಡುತ್ತೇವೆ ಎನ್ನುವವರು ಈ ಹಿಂದೆ ಯಾಕೆ ನೀಡಲಿಲ್ಲ? ಇವರಿಗೆ ವಿವಿಧ ಉದ್ಯೋಗ ನೀಡುತ್ತೇವೆ ಎಂದು ಹೇಳಿ ಜನರಿಗೆ ಮೂರ್ಖರನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದೊಂದು ಆಲೋಚನಾ ರಹಿತ ಯೋಜನೆಯಾಗಿದ್ದು, ಈ ಯೋಜನೆಯನ್ನು ಸರ್ಕಾರ ಹಿಂಪಡೆಯುವುದು ಉತ್ತಮ ಎಂದು ಆಗ್ರಹಿಸಿದ್ದಾರೆ.

English summary
Congress MP Uttam kumar Reddy Alleges BJP Joints Hands with Terrerists to Shake Indian Security. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X