ಮಾಜಿ ಸಿಎಂ ದಿ. ದೇವರಾಜ ಅರಸು ಜನ್ಮದಿನಕ್ಕೆ ಅನುಮತಿ ನಿರಾಕರಿಸಿದ ಬೊಮ್ಮಾಯಿ ಸರ್ಕಾರ!
ಬೆಂಗಳೂರು, ಆ. 24: ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿಯೂ ಕೊರೊನಾ ಮೂರನೇ ಅಲೆ ಆತಂಕ ಕಾಡುತ್ತಿದೆ. ಕಟ್ಟುನಿಟ್ಟಿನ ಮಾರ್ಗಸೂಚಿಯೊಂದಿಗೆ ಶಾಲಾ ಕಾಲೇಜುಗಳನ್ನು ಆರಂಭಿಸಲಾಗಿದೆ. ಜೊತೆಗೆ ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಆದರೆ ಕೇಂದ್ರ ಸರ್ಕಾರದ ಮಂತ್ರಿಗಳು ಮಾತ್ರ ಜನಾಶೀರ್ವಾದ ಯಾತ್ರೆಯಲ್ಲಿ ತೊಡಗಿದ್ದಾರೆ. ಕೇಂದ್ರದ ನಾಲ್ಕೂ ಸಚಿವರು ಪ್ರತಿದನವೂ ಜನರನ್ನು ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಆ ಮೂಲಕ 2024ರ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಮಾರ್ಗಸೂಚಿ ಜಾರಿಯಲ್ಲಿದೆ, ಆದರೂ ಕೇಂದ್ರದ ಮಂತ್ರಿಗಳು ಜನಾಶೀರ್ವಾದ ಯಾತ್ರೆ ಮೂಲಕ ಜನರನ್ನು ಸೇರಿತ್ತಿರುವುದು ವಿಪಕ್ಷಗಳ ನಾಯಕರು ಗರಂ ಆಗಲು ಕಾರಣವಾಗಿದೆ.
ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಜನ್ಮದಿನ ಆಚರಣೆಗೆ ರಾಜ್ಯ ಬಿಜೆಪಿ ಸರ್ಕಾರ ಅನುಮತಿ ನಿರಾಕರಿಸಿರುವ ಗಂಭೀರ ಆರೋಪ ಎದುರಾಗಿದೆ!

ಸಾವಿನ ದವಡೆಗೆ ತಳ್ಳಿ ಸ್ವರ್ಗ ಎನ್ನುತ್ತಿರುವ ಬಿಜೆಪಿ
'ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದ್ದು, ಅವರು ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮೆ ಕೋರುವ ಯಾತ್ರೆ ನಡೆಸಬೇಕು' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಿಡಿಕಾರಿದ್ದಾರೆ.
'ಕೋವಿಡ್ 2ನೇ ಅಲೆಯಲ್ಲಿ ಲಕ್ಷಾಂತರ ಜನರ ಸಾವಿಗೆ ಕಾರಣರಾಗಿದ್ದಕ್ಕೆ, ಸ್ವರ್ಗ ತೋರಿಸುತ್ತೇವೆ ಎಂದು ಅಧಿಕಾರಕ್ಕೆ ಬಂದು ಜನರಿಗೆ ನರಕ ತೋರಿಸುತ್ತಿರುವುದಕ್ಕೆ, ಕೇಂದ್ರದ ಮಲತಾಯಿ ಧೋರಣೆ, ರಾಜ್ಯಕ್ಕೆ ಬರಬೇಕಾದ ಅನುದಾನ ತರಲು ವಿಫಲರಾಗಿರುವುದಕ್ಕೆ, 2019ರಿಂದ ಆಗುತ್ತಿರುವ ನೆರೆಗೆ ಪರಿಹಾರ ನೀಡದಿರುವುದಕ್ಕೆ, ಜಿಎಸ್ಟಿ ಪಾಲು 13 ಸಾವಿರ ಕೋಟಿ ನೀಡದಿರುವುದಕ್ಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಬಿಜೆಪಿ ನಾಯಕರು ರಾಜ್ಯದ ಜನರ ಮುಂದೆ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಜನ ಬಿಜೆಪಿ ವಿರುದ್ಧ ಆಕ್ರೋಶದ ಯಾತ್ರೆ ನಡೆಸುತ್ತಾರೆ' ಎಂದು ಬೆಂಗಳೂರಿನಲ್ಲಿ ಎಚ್ಚರಿಸಿದ್ದಾರೆ.

ಮೂರನೇ ಅಲೆ ತಡೆಯಲು ಯಾವ ಕ್ರಮ?
'2ನೇ ಅಲೆ ಎಚ್ಚರಿಕೆ ನೀಡಿದ ನಂತರವೂ ಬಿಜೆಪಿ ಸರ್ಕಾರ ಉಪಚುನಾವಣೆ, ನಾಯಕತ್ವ ಬದಲಾವಣೆ ವಿಚಾರವಾಗಿ ಮೈಮರೆಯಿತು. ಪರಿಣಾಮ ಲಕ್ಷಾಂತರ ಜನ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಸರ್ಕಾರವೇ ಉತ್ತರಿಸಬೇಕು. ಮೂರನೇ ಅಲೆ ತಡೆಯಲು ಯಾವ ಕ್ರಮ ಕೈಗೊಂಡಿದ್ದಾರೆ ಯಾರಿಗೂ ಗೊತ್ತಿಲ್ಲ' ಎಂದು ಸಲೀಂ ಅಹ್ಮದ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ, ಆದರೆ ಇಲ್ಲಿ ಹುಲಿಗಳಂತೆ ಮಾತನಾಡುವ ಸಂಸದರು ಮೋದಿ ಮುಂದೆ ಇಲಿಗಳಾಗುತ್ತಾರೆ. ರಾಜ್ಯಕ್ಕೆ ಬರಬೇಕಾದ ಪಾಲು ತರಲು ಹೋರಾಟ ಮಾಡುತ್ತಿಲ್ಲ. ಹೀಗಿರುವಾಗ ಜನ ಇವರಿಗೆ ಯಾಕೆ ಆಶೀರ್ವಾದ ಮಾಡುತ್ತಾರಾ?' ಎಂದು ಸಲೀಂ ಅಹ್ಮದ್ ಪ್ರಶ್ನಿಸಿದ್ದಾರೆ.

ದಿ. ಅರಸು ಹುಟ್ಟುಹಬ್ಬಕ್ಕೆ ಅನುಮತಿ ನಿರಾಕರಣೆ
'ಈ ದೇಶದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲು ಅನುಮತಿ ನಿರಾಕರಿಸಿ ಮುಖ್ಯ ಕಾರ್ಯದರ್ಶಿ ಪತ್ರ ಬರೆಯುತ್ತಾರೆ. ಆದರೆ ಸಾವಿರಾರು ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಲು ಅನುಮತಿ ನೀಡುತ್ತಾರೆ. ಕೋವಿಡ್ ಮೂರನೇ ಅಲೆ ಬಂದರೆ, ಅದರಿಂದ ಅನಾಹುತ ಆದರೆ ಅದಕ್ಕೆಲ್ಲ ಈ ನಾಲ್ಕು ಜನ ಕೇಂದ್ರ ಸಚಿವರೇ ಹೊಣೆಯಾಗುತ್ತಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ.
Recommended Video

ಬಿಜೆಪಿ ನಾಯಕರಿಂದ ಉತ್ತರದ ಸಂಸ್ಕೃತಿ ರಾಜ್ಯಕ್ಕೆ!
'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಗೃಹ ಸಚಿವರ ಹೆಗಲ ಮೇಲಿದೆ. ಬಿಜೆಪಿ ಮಾಜಿ ಸಚಿವರು ನಾಡ ಬಂದೂಕಿನಿಂದ ಗುಂಡು ಹಾರಿಸಲು ಅವಕಾಶ ಕೊಟ್ಟಿದ್ದು ಯಾರು? ಅದು ಎಲ್ಲಿಂದ ಬಂತು? ಇದನ್ನು ಗೃಹ ಸಚಿವರು ಸಮರ್ಥನೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಸಮರ್ಥನೆಗೆ ಮುಂದಾಗಿ, ಬಿಹಾರ ಹಾಗೂ ಉತ್ತರ ಪ್ರದೇಶದ ಸಂಸ್ಕೃತಿಯನ್ನು ತರಲು ಮುಂದಾಗಬಾರದು. ನಮ್ಮದು ಶಾಂತಿ ಪ್ರಿಯ ರಾಜ್ಯ. ಇದನ್ನು ನೋಡಿ ಬೇರೆಯವರು ಕಲಿಯ ಬಾರದು. ಮೊದಲ ಬಾರಿಗೆ ಸಚಿವರಾಗಿರುವ ಗೃಹಮಂತ್ರಿಗಳು ಕಾನೂನು ಪುಸ್ತಕ ಓದಬೇಕು' ಎಂದು ಸಲೀಂ ಅಹ್ಮದ್ ಟೀಕಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications