ಫಲಿತಾಂಶಕ್ಕೂ ಮುನ್ನವೇ ತೆರಮರೆಯ ಕಸರತ್ತು ಆರಂಭಿಸಿದ ಕೈ-ಕಮಲ ಪಡೆ
ಬೆಂಗಳೂರು, ಮೇ 12: ಕರ್ನಾಟಕ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ನೋಡಿದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸ್ಪಷ್ಟ ನಿರ್ಧಾರ ಮಾಡಿದಂತೆ ಕಾಣುತ್ತಿದೆ. ಅಂತಿಮ ಫಲಿತಾಂಶ ಪ್ರಕಟವಾಗುವ ಮೊದಲೇ ಕೆಲವು ಪಕ್ಷೇತರ ಅಭ್ಯರ್ಥಿಗಳಿಗೆ ಗಾಳ ಹಾಕುತ್ತಿವೆ.
ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಇಂತಿಷ್ಟು ಸ್ಥಾನಗಳು ಲಭಿಸಲಿವೆ ಎಂದು ಹೇಳಲಾಗಿದೆ. ಈ ಫಲಿತಾಂಶ ನಿಖರವಲ್ಲ ಎಂದು ಹೇಳಿ ನಿರಾಕರಿಸಿರುವ ಬಿಜೆಪಿ ಮತ್ತು ಕಾಂಗ್ರೆಸ್ ಅಧಿಕಾರ ಹಿಡಿಯಲು ಹವಣಿಸುತ್ತಿವೆ. ಈ ಕಾರಣದಿಂದ ಮ್ಯಾಜಿಕ್ ನಂಬರ್ 113 ಸ್ಥಾನ ಗಳಿಕೆಗಾಗಿ ತೆರೆ ಮರೆಯ ಕಸರತ್ತು ಆರಂಭಿಸಿವೆ.

ಬಹುಮತ ಸಾಬೀತಿಗೆ ಸಂಖ್ಯಾಬಲ ಇರುವಂತೆ ಬಿಜೆಪಿ-ಕಾಂಗ್ರೆಸ್ ನೋಡಿಕೊಳ್ಳುತ್ತಿವೆ. ಅದಕ್ಕಾಗಿ ಗೆಲ್ಲುವಂತಹ ಪಕ್ಷೇತರ ಅಭ್ಯರ್ಥಿಗಳಿಗೆ ಆಹ್ವಾನ ನೀಡಲು ದೂರವಾಣಿ ಕರೆ ಮೂಲಕ ಸಂಪರ್ಕಿಸಿವೆ ಎನ್ನಲಾಗಿದೆ. ಸ್ಥಳೀಯ ಮುಖಂಡರು, ಆಯಾ ಭಾಗದ ವರ್ಚಸ್ಸಿರುವ ಪಕ್ಷದ ನಾಯಕರಿಂದ ಪಕ್ಷೇತರ ಅಭ್ಯರ್ಥಿಗಳಿಗೆ ಬಲೆ ಬೀಸಲಾಗುತ್ತಿದೆ.
ಸಂಖ್ಯಾಬಲ ಹೆಚ್ಚಳಕ್ಕೆ ಪಕ್ಷಗಳ ಪ್ಲಾನ್
ಕಾಂಗ್ರೆಸ್ ಈಗಾಗಲೇ ಉತ್ತರ ಕರ್ನಾಟಕದ ಕುಂದಗೋಳ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಸ್ಐ ಚಿಕ್ಕನಗೌಡರನ್ನು ದೂರವಾಣಿ ಮೂಲಕ ಸಂಪರ್ಕಿಸಿದೆ. ಅವರು ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಸಿಗದಿದ್ದಕ್ಕೆ ಪಕ್ಷೇತರವಾಗಿ ಕಣಕ್ಕಿಳಿದಿದ್ದರು. ಇವರು ವರದಾನವಾಗಬಹುದು ಎಂದು ನಂಬಿರುವ ಕಾಂಗ್ರೆಸ್ ತನ್ನ ಸಂಖ್ಯಾಬಲ ಹೆಚ್ಚಿಸಿಕೊಳ್ಳಲು ಚಿಂತನೆ ನಡೆಸಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರನ್ನು, ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ರಾಮಕೃಷ್ಣ ದೊಡ್ಡಮನಿ, ಬೆಂಗಳೂರಿನ ಪುಲಕೇಶಿನಗರದ ಕ್ಷೇತ್ರದ ಅಖಂಡ ಶ್ರೀನಿವಾಸ್ಗೆ ಕಾಂಗ್ರೆಸ್ ನಾಯಕರು ಕರೆ ಮಾಡಿದ್ದಾರೆ ಎನ್ನಲಾಗಿದೆ.
ಇತ್ತ ಶುಕ್ರವಾರ ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಹರಪನಹಳ್ಳಿ ಪಕ್ಷೇತರ ಅಭ್ಯರ್ಥಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರಿಗೆ ಕರೆ ಮಾಡಿ ಮಾತನಾಡಿದ್ದು ಸಹ ಕುತೂಹಲ ಕೆರಳಿಸಿದೆ. ಎರಡು ಪಕ್ಷಗಳ ಈ ನಡೆಯಿಂದ ಪಕ್ಷೇತರ ಅಭ್ಯರ್ಥಿಗಳ ಗೊಂದಲಕ್ಕೀಡಾಗುವ ಸಾಧ್ಯತೆ ಇದೆ. ಆದರೆ ರಾಜಕೀಯ ಭವಿಷ್ಯದ ಮೇಲೆ ಪಕ್ಷೇತರ ಅಭ್ಯರ್ಥಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಕುರಿತು ಎಲ್ಲವು ಮೇ 12ರ ನಂತರವೇ ಸ್ಪಷ್ಟವಾಗಲಿದೆ.
ಬಿಜೆಪಿ ನಾಯಕರು ಸಹ ಗಂಗಾವತಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜನಾರ್ಧನ ರೆಡ್ಡಿಗೆ ಮಣೆ ಹಾಕುತ್ತಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿ ಈಗಾಗಲೇ ಸಂಪರ್ಕಿಸಿದೆ ಎಂದು ವಿಜಯ ಕರ್ನಾಟಕ ವರದಿ ಮಾಡಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications