Get Updates
Get notified of breaking news, exclusive insights, and must-see stories!

‘ಮೋದಿ ಕೇವಲ ಕರ್ನಾಟಕ, ತಮಿಳುನಾಡಿಗೆ ಪ್ರಧಾನಿ ಅಲ್ಲ...’

ಕರ್ನಾಟಕದಲ್ಲಿ ಕಾವೇರಿ ವಿಚಾರಕ್ಕೆ ಕರ್ನಾಟಕ ಬಂದ್ ಕರೆದಿರುವ ಸಮಯಕ್ಕೆ ಬಿಜೆಪಿ & ಕಾಂಗ್ರೆಸ್ ನಡುವೆ ಕೂಡ ರಾಜಕೀಯ ತಿಕ್ಕಾಟ ಜೋರಾಗಿತ್ತು. ಬೆಳಗ್ಗೆಯಿಂದಲೂ ಕಾಂಗ್ರೆಸ್ ಮತ್ತು ಬಿಜೆಪಿ ಘಟಕಗಳು, ಆರೋಪ & ಪ್ರತ್ಯಾರೋಪ ಮಾಡಿವೆ. ಅದರಲ್ಲೂ ಕರ್ನಾಟಕ ಬಿಜೆಪಿ ಇಂದು ಕಾಂಗ್ರೆಸ್ ನಾಯಕರ ವಿರುದ್ಧ ಮಾಡಿದ ಆರೋಪಕ್ಕೆ ಕರ್ನಾಟಕ ಕಾಂಗ್ರೆಸ್ ಘಟಕ ಕೂಡ ಪ್ರತ್ಯುತ್ತರ ನೀಡಿದೆ.

ರಾಜ್ಯದಲ್ಲಿ ಕಾವೇರಿ ಹೋರಾಟ ತೀವ್ರವಾಗಿರುವ ಸಂದರ್ಭದಲ್ಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಲಿ ಎಂಬ ಕೂಗು ಕೇಳಿಬಂದಿದೆ. ಆದರೆ ಈ ವಿಚಾರಕ್ಕೆ ಕೂಡ ಕಾಂಗ್ರೆಸ್ & ಬಿಜೆಪಿ ನಡುವೆ ಫೈಟ್ ಶುರುವಾಗಿದೆ. ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡಲಿ ಅಂತಾ ಕಾಂಗ್ರೆಸ್ ನಾಯಕರು ಒತ್ತಾಯ ಮಾಡುತ್ತಿದ್ದರೆ, ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿ ಯಾಕೆ ಮಧ್ಯಪ್ರವೇಶ ಮಾಡಬೇಕು? ಎಂದು ಕರ್ನಾಟಕದ ಬಿಜೆಪಿ ನಾಯಕರು ಪ್ರಶ್ನೆಯನ್ನ ಮಾಡ್ತಿದ್ದಾರೆ. ಈ ವಿಷಯಕ್ಕೆ ಇಂದು ಬಿಜೆಪಿ & ಕಾಂಗ್ರೆಸ್ ಮಧ್ಯೆ ಮಾತಿನ ಮಹಾಯುದ್ಧ ನಡೆದಿದೆ.

congress-bjp-leaders-starts-fighting

'ಮೋದಿ ಕೇವಲ ಕರ್ನಾಟಕ...'

ಟ್ವೀಟ್ ಮೂಲಕ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, '"ಮೋದಿ ಕೇವಲ ಕರ್ನಾಟಕ, ತಮಿಳುನಾಡಿಗೆ ಪ್ರಧಾನಿ ಅಲ್ಲ, ಇತರ ರಾಜ್ಯಗಳ ಜಲ ವಿವಾದಗಳನ್ನೂ ಅವರು ಬಗೆಹರಿಸಬೇಕಿದೆ" ಇದು ಕನ್ನಡಿಗರಿಂದ ಆಯ್ಕೆಯಾದ ಕೇಂದ್ರ ಸಚಿವೆಯೊಬ್ಬರ ಮಾತು. ಕಾವೇರಿ ವಿಚಾರದಲ್ಲಿ ಬಿಜೆಪಿ ಅದೆಷ್ಟು ದುರಹಂಕಾರದ ಧೋರಣೆ ಹೊಂದಿದೆ ಎಂಬುದಕ್ಕೆ ಈ ಹೇಳಿಕೆಯೇ ಸಾಕ್ಷಿ. ಪ್ರಧಾನಿ ಮೋದಿಗೆ ಫೋಟೋಶೂಟ್ ಮಾಡಿಸುವುದಕ್ಕೆ ಸಮಯ ಸಾಲದು ಸಮಸ್ಯೆ ಬಗೆಹರಿಸಲು ಸಮಯ ಎಲ್ಲಿದೆ ಎನ್ನುವುದು ಈ ಮಾತಿನ ಅರ್ಥವೇ?' ಎಂದು ಪ್ರಶ್ನೆ ಮಾಡುವ ಮೂಲಕ ಬಿಜೆಪಿ ನಾಯಕರನ್ನ ಕೆಣಕಿದೆ.

ಹಾಗೇ ತನ್ನ ಟ್ವೀಟ್‌ನಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ರಾಜ್ಯ ಕಾಂಗ್ರೆಸ್ ಘಟಕ, 'ಚುನಾವಣೆ ಬಂದಾಗ ಮಾತ್ರ ಅವರು ಕರ್ನಾಟಕವೇ ನನ್ನ ಕರ್ಮಭೂಮಿ ಎಂದು ಸುಳ್ಳಿನ ಭಾಷಣ ಬಿಗಿಯುವ ಪ್ರಧಾನಿಯೇ @ShobhaBJP ಅವರೇ? ಪ್ರಧಾನಿ ಹುದ್ದೆಯ ಹೊಣೆಗಾರಿಕೆ ರಾಜ್ಯಗಳ ನಡುವಿನ ಸಮಸ್ಯೆ ಬಗೆಹರಿಸುವುದೇ ಹೊರತು ಚುನಾವಣೆ ರೋಡ್ ಶೋಕಿ ಮಾಡುವುದಲ್ಲ ಎಂಬುದರ ಅರಿವು ಮೋದಿಯವರಿಗೂ ಇಲ್ಲ, ಅವರ ಪಕ್ಷದವರಿಗೂ ಇಲ್ಲ.' ಎಂದು ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

congress-bjp-leaders-starts-fighting

'ಕನ್ನಡಿಗರು ಕುಡಿಯುವುದಕ್ಕೆ ನೀರಿಲ್ಲದೆ..'

ಇನ್ನು ಕಾಂಗ್ರೆಸ್ ರೀತಿಯೇ ಬಿಜೆಪಿ ಕೂಡ ಕಾವೇರಿ ವಿಚಾರವನ್ನ ಅಸ್ತ್ರ ಮಾಡಿಕೊಂಡಿದ್ದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿ, 'ಕನ್ನಡಿಗರು ಕುಡಿಯುವುದಕ್ಕೆ ನೀರಿಲ್ಲದೆ ಸತ್ತರೂ ಪರವಾಗಿಲ್ಲ, ಸ್ಟಾಲಿನ್ ಸರ್ಕಾರಕ್ಕೆ ನೀರು ಬಿಡುವುದೊಂದೆ ಸಾಧನೆ ಎಂಬಂತೆ @siddaramaiah ಅವರ ಸರ್ಕಾರ ಕೆ.ಆರ್.ಎಸ್., ಕಬಿನಿ ಡ್ಯಾಂ ಖಾಲಿ ಆದ ಮೇಲೆ ಇದೀಗ ರಾಮನಗರ ಜಿಲ್ಲೆಯ ಸಣ್ಣ ಪುಟ್ಟ ಜಲಾಶಯಗಳ ಮೇಲಿ ಕಣ್ಣಿಟ್ಟು ನಾವು ಕಾಂಗ್ರೆಸ್ಸಿಗರು ಸ್ಟಾಲಿನ್ ಗುಲಾಮರು ನೀರು ಹರಿಸುವುದು ಶತಸಿದ್ಧ ಎನ್ನುವ ಭಂಡತನಕ್ಕೆ ಬಿದ್ದಿದ್ದಾರೆ.' ಎಂದು ಆರೋಪ ಮಾಡಿತ್ತು.

ಹಾಗೇ ತನ್ನ ಟ್ವೀಟ್‌ನಲ್ಲಿ ಆರೋಪ ಮುಂದುವರಿಸಿದ ಬಿಜೆಪಿ 'ಕನ್ನಡಿಗರಿಗೆ, ಕರ್ನಾಟಕಕ್ಕೆ ಮಹಾ ದ್ರೋಹ ಬಗೆದು ಸ್ಟಾಲಿನ್ ಗುಲಾಮರಂತೆ ವರ್ತಿಸುತ್ತಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಅಧಿಕಾರದಲ್ಲಿರಲು ಅಸಮರ್ಥರು, ತಕ್ಷಣವೇ ರಾಜೀನಾಮೆ ಕೊಡಬೇಕು. ಅಧಿಕಾರದ ದಾಹವಿದ್ದರೆ, ತಮಿಳುನಾಡಿಗೆ ಹೋಗಿ ಸ್ಟಾಲಿನ್ ಸಂಪುಟ ಸೇರಿಕೊಳ್ಳಬಹುದು..!' ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪವನ್ನೂ ಮಾಡಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+