ರಾಜ್ಯದ ಪ್ರಮುಖ ಜಿಲ್ಲೆ ವಿಭಜನೆಗೆ ಒಂದಾದ ಕಾಂಗ್ರೆಸ್ - ಬಿಜೆಪಿ
ರಾಜ್ಯದಲ್ಲಿ ಮುಡಾ ಹಗರಣದ ಕಾವು ತೀವ್ರವಾಗಿದೆ. ಮುಡಾ ಹಗರಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಇಡೀ ರಾಜಕೀಯವೇ ಈ ಪ್ರಕರಣದ ಸುತ್ತಕೇಂದ್ರೀಕೃತವಾಗಿದೆ. ಆದರೆ, ರಾಜ್ಯದಲ್ಲಿ ಸದ್ದಿಲ್ಲದೆ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆಯುತ್ತಿದೆ. ಅದು ಬೆಳಗಾವಿಯ ವಿಭಜನೆಗೆ ಸಂಬಂಧಿಸಿದ್ದು, ರಾಜ್ಯದ ಪ್ರಮುಖ ರಾಜಕೀಯ ಕೇಂದ್ರಗಳಲ್ಲಿ ಬೆಳಗಾವಿಯೂ ಒಂದಾಗಿದೆ.
ಬೆಳಗಾವಿ ರಾಜಕೀಯದಿಂದಲೇ ರಾಜ್ಯದಲ್ಲಿ ರಾಜ್ಯ ಸರ್ಕಾರಗಳಿಗೆ ಕುತ್ತು ಬಂದ ಉದಾಹರಣೆಗಳಿವೆ. ಬೆಳಗಾವಿಯನ್ನು ವಿಭಜನೆ ಮಾಡಬೇಕು ಎಂದು ಕಾಂಗ್ರೆಸ್ನ ಕೆಲವು ನಾಯಕರು ಈ ಹಿಂದೆಯಿಂದಲೂ ಪ್ರಯತ್ನಿಸುತ್ತಿದ್ದಾರೆ. ಆದರೆ, ಅದು ಸಹಕಾರವಾಗಿಲ್ಲ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬೆಳಗಾವಿ ರಾಜೀಯದಲ್ಲಿ ಅಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಕೆಲವರು ಆರೋಪಿಸಿದ್ದರು. ಇದೇ ಕಾರಣಕ್ಕೆ ಬೆಳಗಾವಿಯ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ಮೂಡಿದ್ದು ಸಹ ಇದೆ. ಇದೀಗ ಬೆಳಗಾವಿ ವಿಭಜನೆಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಈ ರೀತಿ ಬೆಳಗಾವಿಯನ್ನು ವಿಭಜನೆ ಮಾಡವುದರ ಹಿಂದೆ ರಾಜಕೀಯ ಉದ್ದೇಶವೇ ಮುಖ್ಯವಾಗಿದೆ ಎನ್ನುವುದನ್ನು ತಳ್ಳಿ ಹಾಕುವಂತಿಲ್ಲ.

ಅಖಂಡ ಬೆಳಗಾವಿ ವಿಭಜನೆ
ಅಖಂಡ ಬೆಳಗಾವಿ ವಿಭಜನೆ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಈ ವಿಷಯವನ್ನು ಮುನ್ನೆಲೆಗೆ ತಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ದಸರಾ ನಂತರ ಈ ವಿಯಷವನ್ನು ಪ್ರಸ್ತಾವನೆ ಮಾಡಿ, ಒತ್ತಡ ತಂತ್ರ ಅನುಸರಿಸಲು ನಿರ್ಧರಿಸಲಾಗಿದೆ. ಅಖಂಡ ವಿಭಜನೆಗೆ ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಿದೆಯಾದರೂ ಅದಕ್ಕೆ ಒಮ್ಮತದ ನಿರ್ಧಾರ ಸಾಧ್ಯವಾಗಿಲ್ಲ. ಅಖಂಡ ಬೆಳಗಾವಿ ವಿಭಜನೆ ಮಾಡುವ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುವುದಕ್ಕೆ ಕಾಂಗ್ರೆಸ್ ನಾಯಕರು ಮಾತ್ರವಲ್ಲದೇ ಈ ಬಾರಿ ಬಿಜೆಪಿ ನಾಯಕರನ್ನೂ ಸೇರಿಸಿಕೊಳ್ಳಲು ಪ್ಲಾನ್ ಮಾಡಿಕೊಳ್ಳಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಬಿಜೆಪಿ ಶಾಸಕರ ವಿಶ್ವಾಸವನ್ನು ಸಹ ಗಳಿಸಿ ಮುಂದಿನ ಹೆಜ್ಜೆ ಇಡಲು ಕಾಂಗ್ರೆಸ್ ನಿರ್ಧರಿಸಿದೆ.
ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ
ಬೆಳಗಾವಿ ವಿಭಜನೆಗೆ ಸಂಬಂಧಿಸಿದಂತೆ ಬೆಳಗಾವಿಯ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿ ಕಾಂಗ್ರೆಸ್ನೊಂದಿಗೆ ಬಿಜೆಪಿ ಶಾಸಕರನ್ನು ಸಹ ವಿಶ್ವಾಸಕ್ಕೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಇಷ್ಟರಲ್ಲೇ ಸಭೆ ನಡೆಯಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ವಿಭಜನೆ ಮಾಡುವ ವಿಚಾರವಾಗಿ ಇಷ್ಟರಲ್ಲೇ ಎಲ್ಲ ಬೆಳಗಾಗಿ ಶಾಸಕರು ಸಭೆ ಸೇರಲಿದ್ದಾರೆ.
ವಿಭಜನೆಯಾದರಷ್ಟೇ ಅಭಿವೃದ್ಧಿ: ಬೆಳಗಾವಿ ಅಭಿವೃದ್ಧಿಯಾಗಬೇಕಾದರೆ ಖಂಡಿತವಾಗಿಯೂ ಅಖಂಡ ಬೆಳಗಾವಿ ವಿಭಜನೆಯಾಗಬೇಕು. ಪ್ರದೇಶ ವ್ಯಾಪ್ತಿ ಹಾಗೂ ಜನಸಂಖ್ಯೆಯ ಆಧಾರದ ಮೇಲೆ ಬೆಳಗಾವಿ ದೊಡ್ಡ ಜಿಲ್ಲೆಯಾಗಿದೆ. ಹೀಗಾಗಿ, ಈ ಜಿಲ್ಲೆ ಅಭಿವೃದ್ಧಿಯಾಗಬೇಕಾದರೆ, ಜಿಲ್ಲೆಯ ವಿಭಜನೆ ಅನಿವಾರ್ಯವಾಗಿದೆ. ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಭಜನೆ ಮಾಡಬೇಕಿದೆ. ಆದರೆ, ಯಾವುದು ಜಿಲ್ಲೆಯಾಗಬೇಕು ಎಂದು ನಾನು ಹೇಳುವುದಿಲ್ಲ ಅದನ್ನು ಸರ್ಕಾರವೇ ನಿರ್ಧರಿಸಲಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ದಸರಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಪತ್ರ ಬರೆಯಲು ನಿರ್ಧರಿಸಲಾಗಿದೆ.
ರಮೇಶ್ ಜಾರಕಿಹೊಳಿಯಿಂದಲೂ ಇದೇ ಆಗ್ರಹ: ಇನ್ನು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಅವರೂ ದನಿಗೂಡಿಸಿದ್ದಾರೆ. ಬೆಳಗಾವಿ ಜಿಲ್ಲೆ ವಿಭಜನೆಯಾಗಬೇಕು ಅದಕ್ಕೂ ಮೊದಲು ಹೊಸ ತಾಲ್ಲೂಕು ರಚನೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ನಾನು ಈ ಹಿಂದೆ ಉಸ್ತುವಾರಿ ಸಚಿವನಾಗಿದ್ದಾಗಲೂ ಸಿದ್ದರಾಮಯ್ಯ ಅವರಿಗೆ ಇದನ್ನೇ ಹೇಳಿದ್ದೆ. ಹೊಸ ತಾಲ್ಲೂಕುಗಳ ರಚನೆ ಮಾಡಿದ ನಂತರ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಲಿ. ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಿ ಗೋಕಾಕ ಹಾಗೂ ಚಿಕ್ಕೋಡಿ ಜಿಲ್ಲೆಗಳನ್ನಾಗಿ ಮಾಡಬೇಕು. ಇನ್ನು ಬಿಜೆಪಿ ಶಾಸಕ ಅಭಯ ಪಾಟೀಲ ಅವರು ಸಹ ಜಿಲ್ಲೆಯ ವಿಭಜನೆಯ ಬಗ್ಗೆ ಮಾತನಾಡಿದ್ದು, ಚರ್ಚೆ ಮಾಡಿ ಬೆಳಗಾವಿ ವಿಭಜನೆ ಮಾಡಲಿ ಎಂದು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications