Congress Candidates: 16 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್, ಪಟ್ಟಿ ಇಲ್ಲಿದೆ
ಬೆಂಗಳೂರು, ಮಾರ್ಚ್ 21: ಕರ್ನಾಟಕದ ಬಹು ನಿರೀಕ್ಷಿತ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಯಾವಾಗ ಬೇಕಾದರು ಪ್ರಕಟಿಸುವ ನಿರೀಕ್ಷೆಯಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ 16 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಇದರಿಂದ ಇನ್ನೂ ನಾಲ್ಕು ಕ್ಷೇತ್ರಗಳು ಖಾಲಿ ಉಳಿದಿದ್ದು, ಆ ಹೆಸರುಗಳನ್ನೂ ಶೀಘ್ರದಲ್ಲೇ ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಫೈನಲ್ ಆದ ಪಕ್ಷದ 16 ಅಭ್ಯರ್ಥಿಗಳು ಇವರೇ!
* ಚಂದ್ರಪ್ಪ (ಚಿತ್ರದುರ್ಗ)
* ಮೃಣಾಲ್ ಹೆಬ್ಬಾಳ್ಕರ್ (ಬೆಳಗಾವಿ)
* ಪ್ರಿಯಾಂಕಾ ಜಾರಕಿಹೊಳಿ (ಚಿಕ್ಕೋಡಿ)
* ಸಂಯುಕ್ತಾ ಪಾಟೀಲ್ (ಬಾಗಲಕೋಟೆ)
* ವಿನೋದ್ ಅಸೂಟಿ (ಹುಬ್ಬಳ್ಳಿ - ಧಾರವಾಡ)
* ಪ್ರಭಾ ಮಲ್ಲಿಕಾರ್ಜುನ್ (ದಾವಣಗೆರೆ)
* ರಾಜಶೇಖರ್ ಇಟ್ನಾಳ್ (ಕೊಪ್ಪಳ)
* ರಾಧಾಕೃಷ್ಣ ದೊಡ್ಡಮನಿ (ಕಲಬುರಗಿ)
* ಸಾಗರ್ ಖಂಡ್ರೆ ಅಥವಾ ರಾಜಶೇಖರ್ ಪಾಟೀಲ್ (ಬೀದರ್)
* ಪದ್ಮರಾಜ್ (ದಕ್ಷಿಣ ಕನ್ನಡ)
* ಜಯಪ್ರಕಾಶ್ ಹೆಗ್ಡೆ (ಉಡುಪಿ)
* ಸೌಮ್ಯಾ ರೆಡ್ಡಿ (ಬೆಂಗಳೂರು ದಕ್ಷಿಣ)
* ಮನ್ಸೂರ್ ಅಲಿ ಖಾನ್ (ಬೆಂಗಳೂರು ಸೆಂಟ್ರಲ್)
*ಪ್ರೊ ರಾಜೀವ್ ಗೌಡ (ಬೆಂಗಳೂರು ಉತ್ತರ)
* ಲಕ್ಷ್ಮಣ್ (ಮೈಸೂರು)
* ಕುಮಾರ್ ನಾಯಕ್ (ರಾಯಚೂರು)
* ಡಾ ಅಂಜಲಿ ನಿಂಬಾಳ್ಕರ್ (ಉತ್ತರ ಕನ್ನಡ)

ಈ ಪಟ್ಟಿ ಇನ್ನು ಅಧಿಕೃತವಾಗಿಲ್ಲ. ಪಕ್ಷವು ಶೀಘ್ರದಲ್ಲೇ ಹೆಸರುಗಳನ್ನು ಪ್ರಕಟಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದ ಸಿಇಸಿಯ ಸಾಲು ಸಾಲು ಸಭೆಯಲ್ಲಿ 16 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಈ ಹಿಂದೆ ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರಗಳ ಹೆಸರನ್ನು ಮೊದಲೇ ಪ್ರಕಟಿಸಲಾಗಿತ್ತು.
ಇನ್ನು, 17 ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಅಂತಿಮವಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು. ಅಂತಿಮ ನಾಲ್ಕು ಕ್ಷೇತ್ರಗಳಲ್ಲಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸಚಿವರ ಕುಟುಂಬದವರಿಗೆ ಲೋಕಸಭಾ ಚುನಾವಣಾ ಟಿಕೆಟ್ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಉತ್ತರಿಸಿರುವ ಡಿಕೆ ಶಿವಕುಮಾರ್, "ರಾಜಕೀಯ ವ್ಯವಸ್ಥೆಯಲ್ಲಿ ಕೆಲಸ ಮಾಡಿರುವವರಿಗೂ ಹೊಸ ಅಭ್ಯರ್ಥಿಗಳನ್ನು ತರುವುದಕ್ಕೂ ವ್ಯತ್ಯಾಸವಿದೆ. ಇಡೀ ದೇಶದಲ್ಲಿ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಲಾಗುತ್ತಿದೆ. ಈ ಬಾರಿ ಐವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಇನ್ನು 50% ವಿದ್ಯಾವಂತ ಯುವಕರಿಗೆ ಅವಕಾಶ ನೀಡಿದ್ದೇವೆ" ಎಂದು ಮಾಹಿತಿ ನೀಡಿದ್ದಾರೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications