ಬಿಹಾರ ಫಲಿತಾಂಶ: ಕಾಂಗ್ರೆಸ್ ಜಾತಿ ಲೆಕ್ಕಾಚಾರ ತಲೆಕೆಳಗೆ, ಕುಂದದ ಪ್ರಧಾನಿ ವರ್ಚಸ್ಸು: ಬಸವರಾಜ ಬೊಮ್ಮಾಯಿ
ಬೆಂಗಳೂರು, ನವೆಂಬರ್ 14: ಬಿಹಾರ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಬಿಡುಗಡೆ ಆಗಲಿದೆ. ಮತ ಎಣಿಕೆ ಆರಂಭದಿಂದಲೂ ಮುನ್ನಡೆ ಸಾಧಿಸಿ ಪ್ರಚಂಡ ಗೆಲುವಿನತ್ತ ಸಾಗಿದೆ. 200ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಎನ್ಡಿಗೆ ಗೆಲುವು ಸಾಧಿಸಿದೆ. ಈ ಸಂಬಂಧ ಬೆಂಗಳೂರಿನಲ್ಲೂ ಸಿಹಿ ಹಂಚಿ ಸಂಭ್ರಮಿಸಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಬಿಹಾರದಲ್ಲಿ ಕಾಂಗ್ರೆಸ್ ಜಾತಿ ಲೆಕ್ಕಾಚಾರ ಸುಳ್ಳು ಎಂದು ಹೇಳಿದರು.
ಬಿಹಾರ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರೀಯತೆ ಲೋಕಸಭೆಯ ಬಳಿಕವೂ ಅಚಲವಾಗಿದೆ ಎಂಬುದನ್ನು ಮತ್ತೊಮ್ಮೆ ಸಾಬೀತಾಗಿದೆ. ಮಹಾರಾಷ್ಟ್ರ, ಹರಿಯಾಣ ಹಾಗೂ ಬಿಹಾರದಲ್ಲಿ ಮೋದಿ ಅಲೆ ಮತ್ತೆ ಸ್ಪಷ್ಟವಾಗಿ ಕಂಡುಬಂದಿದೆ. ಕಾಂಗ್ರೆಸ್ ಪಕ್ಷ ಬಿಹಾರದಲ್ಲಿ ಜಾತಿ ರಾಜಕಾರಣದ ಲೆಕ್ಕಾಚಾರ ತಮ್ಮ ಪರವಾಗಿ ಕಾಯ್ದುಕೊಂಡಿದ್ದೇವೆ ಎಂದು ಭಾವಿಸಿತ್ತು. ಆದರೆ ಅದು ಸಂಪೂರ್ಣ ಸುಳ್ಳಾಯಿತು ಎಂಬುದನ್ನು ಜನ ತೋರಿಸಿಕೊಟ್ಟಿದ್ದಾರೆ ಎಂದು ಬೊಮ್ಮಾಯಿ ಕಟುವಾಗಿ ಟೀಕಿಸಿದರು.

ಎಸ್ಸಿ, ಎಸ್ಟಿಗಳಲ್ಲಿ ಶೇಕಡಾ 80 ಜನರು ಬಿಜೆಪಿಗೆ ಮತ ಹಾಕಿರುವುದು ಕಾಂಗ್ರೆಸ್ ಪಕ್ಷದ ಲೆಕ್ಕಾಚಾರಕ್ಕೆ ಗುದ್ದು ಕೊಟ್ಟಿದೆ. ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಮತಗಳು ಕೂಡ ಕಾಂಗ್ರೆಸ್ನ ಅತಿಯಾದ ತುಷ್ಟೀಕರಣ ರಾಜಕೀಯದ ವಿರುದ್ಧ ಒಂದಾಗಿವೆ. ರಾಹುಲ್ ಗಾಂಧಿ ಮಾಡಿರುವ "ಮತಗಳ್ಳತನ" ಆರೋಪದ ಬಗ್ಗೆ ಮಾತನಾಡಿದ ಅವರು, "ಯಾರು ಕದ್ದರು? ಪುರಾವೆ ಏನು? ಯಾವೊಬ್ಬ ಸೋತ ಅಭ್ಯರ್ಥಿಯೂ ಮತ ಕದ್ದಿದ್ದಾರೆಂದು ಹೇಳಿಲ್ಲ. ರಾಹುಲ್ ಗಾಂಧಿಯವರೇ ಎಲ್ಲಾ ರಾಜ್ಯಗಳಲ್ಲಿ ಮತ ಶುದ್ಧೀಕರಣಕ್ಕೆ ಪತ್ರ ಬರೆದಿದ್ದಾರೆ. ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡಲು ಪ್ರಯತ್ನಿಸಿದನ್ನು ಜನ ತಳ್ಳಿ ಹಾಕಿದ್ದಾರೆ ಎಂದು ವಿವರಿಸಿದರು.
ಬಿಹಾರ ಫಲಿತಾಂಶದಿಂದ ಕರ್ನಾಟಕ ಬಿಜೆಪಿಗೆ ಯಾವ ಪಾಠ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ಜನವಿರೋಧಿ ಕೆಲಸಗಳ ವಿರುದ್ಧ ನಾವು ಒಂದಾಗಿ ಹೋರಾಡಿದರೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಖಂಡಿತ ಬಹುಮತ ಪಡೆಯುತ್ತದೆ ಎಂದು ಆತ್ಮವಿಶ್ವಾಸದಿಂದ ಉತ್ತರಿಸಿದರು. ಚುನಾವಣಾ ವೇಳೆ ಬಾಂಬ್ ಸ್ಫೋಟ ನಡೆದ ವಿಷಯದಲ್ಲಿ ಕಾಂಗ್ರೆಸ್ ಆರೋಪಗಳ ಬಗ್ಗೆ ಅವರು ಪ್ರತಿಕ್ರಿಯಿಸಿದರು. 'ಬಾಂಬ್ ಬ್ಲಾಸ್ಟ್ಗೆ ಚುನಾವಣೆಗೆ ಸಂಬಂಧವಿಲ್ಲ. ಕಾಂಗ್ರೆಸ್ ಎಲ್ಲ ವಿಷಯದಲ್ಲೂ ರಾಜಕಾರಣ ಮಾಡಲು ನೋಡುತ್ತದೆ. ಜನರು ಮೂರ್ಖರಲ್ಲ' ಎಂದರು.
ಮುಧೋಳದಲ್ಲಿ ಕಬ್ಬು ದರ ಕುರಿತು ರೈತರು ನಡೆಸಿದ ಪ್ರತಿಭಟನೆ ನಡೆದಿದೆ. ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಲಾಗಿದೆ. ಸರ್ಕಾರ ಬೆಳಗಾವಿಯಲ್ಲಿ ತೋರಿಸಿದ ಆಸಕ್ತಿ ಮುಧೋಳದಲ್ಲಿ ತೋರಿಸಿಲ್ಲ. ಸರಿಯಾದ ಸಮಯದಲ್ಲಿ ಮಧ್ಯಪ್ರವೇಶಿಸಿದ್ದರೆ ಗಲಾಟೆ ತಪ್ಪಿಸಬಹುದು. ರೈತರಿಗೆ ಆದ ನಷ್ಟವನ್ನು ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications