‘ಬಿಜೆಪಿ ಹೈಕಮಾಂಡಿಗೆ ಆಪರೇಷನ್ ಕಮಲಕ್ಕಿರುವ ಆಸಕ್ತಿ ವಿಪಕ್ಷ ನಾಯಕನ ಆಯ್ಕೆಯಲ್ಲಿಲ್ಲ’
ಬೆಂಗಳೂರು: ಬಿಜೆಪಿ ನಾಯಕರು ಕಾಂಗ್ರೆಸ್ ತೋಡಿದ ಖೆಡ್ಡಾಗಿ ಬಿದ್ದಂತೆ ಕಾಣುತ್ತಿದೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದು ರಿಸಲ್ಟ್ ಕೂಡ ಬಂದಾಗಿದೆ. ಅಲ್ಲದೆ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿ ಸುಮಾರು ಒಂದೂವರೆ ತಿಂಗಳು ಕಳೆದಿದೆ. ಇಷ್ಟಾದ್ರೂ ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ಮಾಡಲಾಗಿಲ್ಲ, ಹೀಗೆ ಆಂತರಿಕ ಕಿತ್ತಾಟದ ಬೇಗುದಿಯಲ್ಲಿ ಬೆಂದು ಹೋಗಿರುವ ಕಮಲ ಪಡೆಯನ್ನ ಕಾಂಗ್ರೆಸ್ ಪದೇ ಪದೆ ಕೆಣಕುತ್ತಿದೆ.
ವಿರೋಧ ಪಕ್ಷದ ನಾಯಕ ಇಲ್ಲದೆ ಇಂದಿನಿಂದ ವಿಧಾನಸಭೆ ಅಧಿವೇಶನ ಶುರುವಾಗುತ್ತಿದೆ. ಕಾಂಗ್ರೆಸ್ ನಾಯಕರು ಇದೇ ವಿಚಾರ ಹಿಡಿದು ಬಿಜೆಪಿ ವಿರುದ್ಧ ತಿರುಗೇಟು ನೀಡುತ್ತಿದ್ದಾರೆ. ಹೀಗೆ 'ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, dear @BJP4Karnataka, ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ!' ಎಂದು ಕಾಂಗ್ರೆಸ್ ಬಿಜೆಪಿ ನಾಯಕರನ್ನ ಕೆಣಕಿದೆ. ಅಲ್ಲದೆ ಸರಣಿ ಟ್ವೀಟ್ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡುತ್ತಿದೆ.

'ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇಲ್ವಾ?'
ಇನ್ನು ಮತ್ತೊಂದು ಟ್ವೀಟ್ ಮೂಲಕ, 'ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. @BJP4Karnataka ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ.' ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು.
— Karnataka Congress (@INCKarnataka) July 3, 2023
ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು.@BJP4Karnataka ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ…
'ವಿಪಕ್ಷ ನಾಯಕನ 'ಗ್ಯಾರಂಟಿ' ಇಲ್ಲ!'
ಇಷ್ಟುದಿನ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಮಾಡುತ್ತಿದ್ದ ಆರೋಪಗಳಿಗೆಲ್ಲ ಕಾಂಗ್ರೆಸ್ ಈಗ ತಿರುಗೇಟು ನೀಡುತ್ತಿದೆ. ಅದರಲ್ಲೂ ವಿಪಕ್ಷ ನಾಯಕನ ಆಯ್ಕೆಯ ಕುರಿತು ಉಂಟಾಗಿರುವ ಗೊಂದಲ ಬಗ್ಗೆ, 'ಬಿಜೆಪಿಗೆ ವಿರೋಧ ಪಕ್ಷದ ನಾಯಕನ 'ಗ್ಯಾರಂಟಿ'ಯೂ ಇಲ್ಲ! ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ.' ಎಂದಿದೆ ಕಾಂಗ್ರೆಸ್.
ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ!
— Karnataka Congress (@INCKarnataka) July 3, 2023
ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ.
ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ.
ವಿಪಕ್ಷ ನಾಯಕನ ಹುದ್ದೆ ಮಾರಾಟ ಆರೋಪ!
ಇಷ್ಟೆಲ್ಲದರ ನಡುವೆ ಇನ್ನೊಂದು ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್, 'ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಫಿಕ್ಸ್ ಮಾಡಲಾಗಿತ್ತು, ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? @BJP4Karnataka ಉತ್ತರಿಸಬೇಕು.' ಎಂದು ಕಮಲ ಪಡೆಯನ್ನ ಕೆಣಕಿದೆ.
ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ?
— Karnataka Congress (@INCKarnataka) July 3, 2023
ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಫಿಕ್ಸ್ ಮಾಡಲಾಗಿತ್ತು,
ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ?
ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ?@BJP4Karnataka ಉತ್ತರಿಸಬೇಕು.
ಇತಿಹಾಸದಲ್ಲಿಯೇ ಅತ್ಯಂತ ಶೋಚನಿಯ ಸಂಗತಿ!
ಇನ್ನೊಂದ್ಕಡೆ ಸದನ ಆರಂಭವಾಗುವ ಮೊದಲೇ ವಿಪಕ್ಷ ನಾಯಕನ ಆಯ್ಕೆ ಪಕ್ಕಾ ಎಂದು ರಾಜ್ಯ ಬಿಜೆಪಿ ಘಟಕ ಭರವಸೆ ನೀಡಿ ಟ್ವೀಟ್ ಮಾಡಿತ್ತು, ಈಗ ನೋಡಿದ್ರೆ ವಿಪಕ್ಷ ನಾಯಕ ಆಯ್ಕೆ ಆಗಿಲ್ಲ. ಹೀಗಾಗಿ ಅದೇ ಟ್ವೀಟ್ ಬಗ್ಗೆ ತಿರುಗೇಟು ನೀಡಿರುವ ಕಾಂಗ್ರೆಸ್, 'ಸದನ ಪ್ರಾರಂಭವಾಗುವ ಮೊದಲೇ ವಿರೋಧ ಪಕ್ಷದ ನಾಯಕನನ್ನು ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದು ಗ್ಯಾರಂಟಿ ನೀಡಿದ್ದಿರಿ. ನಿಮ್ಮ ಹೈಕಮಾಂಡ್ ಕನಿಷ್ಠ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲೂ ನಿಮಗೆ ಗ್ಯಾರಂಟಿ ನೀಡದಿರುವುದು ರಾಜಕೀಯ ಇತಿಹಾಸದಲ್ಲಿಯೇ ಅತ್ಯಂತ ಶೋಚನಿಯ ಸಂಗತಿ. ಪಾಪ!' ಎಂದಿದೆ.
Dear @BJP4Karnataka ,
— Karnataka Congress (@INCKarnataka) July 3, 2023
ಸದನ ಪ್ರಾರಂಭವಾಗುವ ಮೊದಲೇ ವಿರೋಧ ಪಕ್ಷದ ನಾಯಕನನ್ನು ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದು ಗ್ಯಾರಂಟಿ ನೀಡಿದ್ದಿರಿ.
ನಿಮ್ಮ ಹೈಕಮಾಂಡ್ ಕನಿಷ್ಠ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲೂ ನಿಮಗೆ ಗ್ಯಾರಂಟಿ ನೀಡದಿರುವುದು ರಾಜಕೀಯ ಇತಿಹಾಸದಲ್ಲಿಯೇ ಅತ್ಯಂತ ಶೋಚನಿಯ ಸಂಗತಿ.
ಪಾಪ! pic.twitter.com/YW4RqHPJD2
ಒಟ್ನಲ್ಲಿ ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಅನ್ನೋ ಹಾಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಫೈಟ್ ಮುಂದುವರಿದಿದೆ. ಅದ್ರಲ್ಲೂ ಟ್ವೀಟ್ ವಾರ್ ಬಲು ಜೋರಾಗುತ್ತಿದ್ದು, ಆ ಕಡೆ ಬಿಜೆಪಿ ಮಾಡುವ ಟ್ವೀಟ್ಗೆ ಕಾಂಗ್ರೆಸ್ ಉತ್ತರ ಕೊಡುತ್ತಿದೆ, ಇತ್ತ ಕಾಂಗ್ರೆಸ್ ಮಾಡುವ ಟ್ವೀಟ್ಗೆ ಬಿಜೆಪಿ ಉತ್ತರ ಕೊಡುತ್ತಿದೆ. ಇಷ್ಟೆಲ್ಲದರ ನಡುವೆ ಇವರಿಬ್ಬರ ಈ ಟ್ವೀಟ್ ವಾರ್ ಸೋಷಿಯಲ್ ಮೀಡಿಯಾ ಮಂದಿಯನ್ನೂ ಎಂಟರ್ಟೈನ್ ಮಾಡುತ್ತಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications