Get Updates
Get notified of breaking news, exclusive insights, and must-see stories!

ಸ್ಮೃತಿ ಇರಾನಿ ಅವರ ಪದವಿ ಹುಡುಕಿ ತನ್ನಿ: ಕಾಂಗ್ರೆಸ್ ಚಾಲೆಂಜ್!

ಬೆಂಗಳೂರು: ಇಷ್ಟುದಿನ ಕಾಂಗ್ರೆಸ್ ತನ್ನ ಗ್ಯಾರಂಟಿ ಘೋಷಣೆ ಮಾಡಲು ಆಗಲ್ಲ ಅಂತಿದ್ದ ಬಿಜೆಪಿ ನಾಯಕರು, ಇದೀಗ ಗ್ಯಾರಂಟಿ ಘೋಷಣೆ ಆಗುತ್ತಿದ್ದಂತೆ ಅದರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ನಿನ್ನೆಯಿಂದ ಶುರುವಾದ ಈ ಯುದ್ಧಕ್ಕೆ ಇದೀಗ ರಾಹುಲ್ ಗಾಂಧಿ ಮತ್ತು ಸ್ಮೃತಿ ಇರಾನಿ ಅವರ ಹೆಸರು ಕೂಡ ಎಂಟ್ರಿಯಾಗಿದೆ! ಹೇಗೆ ಅಂತೀರಾ? ಇಲ್ಲಿದೆ ಮಾಹಿತಿ.

ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ನಿನ್ನೆ ತೀರ್ಮಾನ ಕೈಗೊಂಡು 5 ಗ್ಯಾರಂಟಿ ಜಾರಿಗೆ ಆದೇಶ ಹೊರಬಿದ್ದಿತ್ತು. ಇದಾದ ಬಳಿಕ ಕಾಂಗ್ರೆಸ್ ಟ್ವೀಟ್ ಮಾಡಿ, '@nalinkateel ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ @BSBommai ಅವರೇ, ನಿಮ್ಮ ಮನೆಗೂ ಫ್ರೀ! @ShobhaBJP ಅವರೇ, ನಿಮಗೂ ಪ್ರಯಾಣ ಫ್ರೀ!, @CTRavi_BJP ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ!, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ.' ಎಂದಿತ್ತು. ಇದೇ ಟ್ವೀಟ್ ಬಗ್ಗೆ ಬಿಜೆಪಿ ತಿರುಗೇಟು ನೀಡಲು ಹೋಗಿ ಟ್ವೀಟ್ ವಾರ್ ಶುರುಮಾಡಿದೆ.

Congress challenged BJP

ರಾಹುಲ್ ಗಾಂಧಿ ಬಗ್ಗೆ ಬಿಜೆಪಿ ಲೇವಡಿ!

ನಿನ್ನೆ ಬಿಜೆಪಿ ನಾಯಕರ ಕುರಿತು ಕಾಂಗ್ರೆಸ್ ಮಾಡಿದ್ದ ಟ್ವೀಟ್‌ಗೆ ಬಿಜೆಪಿ ತಿರುಗೇಟು ನೀಡಿ, 'ಖಂಡಿತಾ ಸ್ವಾಮಿ.... ಹಾಗೆಯೇ ನಿರುದ್ಯೋಗ ಭತ್ಯೆಯನ್ನು ಶ್ರೀ @RahulGandhi ಯವರಿಗೂ (ಪದವೀಧರರಾಗಿದ್ದರೆ ಮಾತ್ರ) ಹಾಗೂ ಡಾ|| ಯತೀಂದ್ರ ಸಿದ್ದರಾಮಯ್ಯನವರಿಗೂ ದಯಪಾಲಿಸಿ.' ಎಂದು ಟ್ವೀಟ್ ಪೋಸ್ಟ್ ಮಾಡಿತ್ತು. ಇದೀಗ ಇದೇ ಟ್ವೀಟ್‌ಗೆ ಕಾಂಗ್ರೆಸ್ ಕೂಡ ರೀಪ್ಲೇ ನೀಡಿದೆ. ಆ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಭರ್ಜರಿಯಾಗಿ ನಡೆಯುತ್ತಿದೆ. ಹಾಗಾದ್ರೆ ಕಾಂಗ್ರೆಸ್ ಉತ್ತರ ಕೊಟ್ಟಿದ್ದೇನು? ಸ್ಮೃತಿ ಇರಾನಿ ಅವರ ಬಗ್ಗೆ ಕಾಂಗ್ರೆಸ್ ಹೇಳಿದ್ದೇನು? ಮುಂದೆ ಓದಿ.

'ಸ್ಮೃತಿ ಇರಾನಿ ಅವರ ಪದವಿ ಹುಡುಕಿ ತನ್ನಿ'

ಅಷ್ಟಕ್ಕೂ ಬಿಜೆಪಿ ಮಾಡಿದ್ದ ಟ್ವೀಟ್‌ಗೆ ಸವಾಲು ಹಾಕಿರುವ ಕಾಂಗ್ರೆಸ್ 'ರಾಹುಲ್ ಗಾಂಧಿಯವರು ಪದವೀಧರರಿದ್ದಾರೆ ಸರಿ, @Dr_Yathindra_S ಅವರೂ ನೀವೇ ಹೇಳಿದಂತೆ ಡಾಕ್ಟರ್ ಆಗಿದ್ದಾರೆ. @smritiirani ಅವರ ಪದವಿ ಹುಡುಕಿ ತನ್ನಿ, ಹಾಗೆಯೇ ವಿಶ್ವದಲ್ಲಿ ಯಾವ ಯುನಿವರ್ಸಿಟಿಯಲ್ಲಿ "ಎಂಟೈರ್ ಪೊಲಿಟಿಕಲ್ ಸೈನ್ಸ್" ಪದವಿ ಇದೆ ಎಂಬುದನ್ನೂ ಹುಡುಕಿ ತನ್ನಿ. ಅವರಿಗೂ ಭತ್ಯೆ ಕೊಡುವ ಬಗ್ಗೆ ಚಿಂತಿಸೋಣ! (ವಿ ಸೂ - ವಾಟ್ಸಾಪ್ ಯೂನಿವರ್ಸಿಟಿಯ ಪದವಿಯನ್ನು ಪರಿಗಣಿಸುವುದಿಲ್ಲ)' ಎಂದು ರಣವೀಳ್ಯ ನೀಡಿದೆ.

'ನಾವು ನುಡಿದಂತೆ ನಡೆಯುವವರು'

ಹಾಗೇ ಮತ್ತೊಂದ್ಕಡೆ ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳ ಬಗ್ಗೆ ನಿನ್ನೆ ಇನ್ನೊಂದು ಟ್ವೀಟ್ ಮಾಡಿ, 'ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿ ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ,' ಎನ್ನುವ ಮೂಲಕ ಬಿಜೆಪಿ & ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿತ್ತು. ನಿನ್ನೆ ಶುರುವಾಗಿದ್ದ ಗ್ಯಾರಂಟಿಗಳ ವಾರ್ ಇಂದು ಕೂಡ ತಣ್ಣಗಾಗಿಲ್ಲ. ಜನ ಮಾತ್ರ ಇಬ್ಬರ ಜಗಳದಲ್ಲಿ ಭರ್ಜರಿ ಎಂಟರ್‌ಟೈನ್‌ಮೆಂಟ್ ಪಡೆಯುತ್ತಿರೋದು ಸುಳ್ಳಲ್ಲ.

ಹೀಗೆ 5 ಗ್ಯಾರಂಟಿ ವಿಚಾರದ ಬಗ್ಗೆ ಚರ್ಚೆ ನಡೆಯುವಾಗಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಬಿಜೆಪಿ ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ. 'ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಅರ್ಥಿಕ ಪರಿಸ್ಥಿತಿಯ ಬಗ್ಗೆ ವಿಸ್ತೃತವಾಗಿ ವಿವರಿಸಬೇಕಾಗಿರುವ ಅನಿವಾರ್ಯತೆಯಿದೆ ಎಂದು ತಿಳಿಸಿದ್ದರು. ಈ ಕುರಿತಂತೆ ಸಿದ್ದರಾಮಯ್ಯ ಅವರು ಇಲ್ಲಿಯವರೆಗೂ ತುಟಿ ಬಿಚ್ಚಿಲ್ಲ. ಇಂದು ಆ ಬಗ್ಗೆ ಪತ್ರಕರ್ತರೊಬ್ಬರ ಪ್ರಶ್ನೆಗೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾದ ಶ್ರೀ ಕೆ.ಎಚ್.ಮುನಿಯಪ್ಪ ಅವರು ಉತ್ತರಿಸದೇ 'No Comments' ಎಂದಿದ್ದಾರೆ. ಹಾಗಾದರೆ ಕಾಂಗ್ರೆಸ್‌ ಗ್ಯಾರಂಟಿಗಳ ಪುಂಗಿಯನ್ನು ಪೂರೈಸಲು ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ವಿವರಿಸಲು, ಕ್ರೂಢೀಕರಣದ ಬಗ್ಗೆ ಉತ್ತರಿಸುವವರು ಯಾರು?' ಎಂದು ಪ್ರಶ್ನೆ ಮಾಡಿದೆ ಬಿಜೆಪಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+