ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದು ಕೈ ಶಾಸಕರ ಸಭೆ, ರೆಸಾರ್ಟ್ ವಾಸ್ತವ್ಯ ಮುಕ್ತಾಯ ಸಾಧ್ಯತೆ

|
Google Oneindia Kannada News

ಬೆಂಗಳೂರು, ಜನವರಿ 21: ರಾಜ್ಯ ಕಾಂಗ್ರೆಸ್‌ ಇನ್ನೂ ಆಪರೇಷನ್ ಕಮಲದ ಭೀತಿಯಿಂದ ಹೊರಬಂದಿಲ್ಲ. ಶಾಸಕರ ರೆಸಾರ್ಟ್‌ ವಾಸ್ತವ್ಯ ಇನ್ನೂ ಮುಗಿದಿಲ್ಲ.

ರೆಸಾರ್ಟ್ ಪಾಲಿಟಿಕ್ಸ್: ಬಿಜೆಪಿ ಕಾಲೆಳೆದ ಮುಖ್ಯಮಂತ್ರಿ ಕುಮಾರಸ್ವಾಮಿ ರೆಸಾರ್ಟ್ ಪಾಲಿಟಿಕ್ಸ್: ಬಿಜೆಪಿ ಕಾಲೆಳೆದ ಮುಖ್ಯಮಂತ್ರಿ ಕುಮಾರಸ್ವಾಮಿ

ಇಂದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯುತ್ತಿದ್ದು, ಇಂದು ಕೈ ನಾಯಕರ ರೆಸಾರ್ಟ್ ವಾಸ್ತವ್ಯ ಅಂತ್ಯವಾಗುವ ಸಾಧ್ಯತೆ ಇದೆ.

ಹೇಳುವುದು ಆಚಾರ, ತಿನ್ನೋದು ಬದನೆಕಾಯಿ: ಬಿಜೆಪಿ ಲೇವಡಿಹೇಳುವುದು ಆಚಾರ, ತಿನ್ನೋದು ಬದನೆಕಾಯಿ: ಬಿಜೆಪಿ ಲೇವಡಿ

ನಿನ್ನೆ ರೆಸಾರ್ಟ್‌ನಲ್ಲಿ ಶಾಸಕ ಆನಂದ್‌ ಸಿಂಗ್ ಮತ್ತು ಗಣೇಶ್ ನಡುವೆ ನಡೆದಿರುವ ಮಾರಾ-ಮಾರಿಯಿಂದ ಕಾಂಗ್ರೆಸ್‌ಗೆ ಮುಜುಗರವಾಗಿದ್ದು, ಆ ನಿಟ್ಟಿನಲ್ಲಿ ಇಂದಿನ ಸಭೆ ಮಹತ್ವದ್ದಾಗಿದೆ.

Congress CLP meeting in Eaglton resort, may end resort stay

ಮೊನ್ನೆ ನಡೆದ ಸಿಎಲ್‌ಪಿ ಸಭೆಗೆ ಗೈರಾದ ನಾಲ್ಕು ಶಾಸಕರ ವಿರುದ್ಧ ಕೈಗೊಳ್ಳುವ ಕ್ರಮದ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆ ಆಗಲಿದೆ. ಸಿದ್ದರಾಮಯ್ಯ ಅವರು ನೇತೃತ್ವದಲ್ಲಿ ಸಭೆ ನಡೆಯಲಿದೆ.

ಬೆಳಿಗ್ಗೆ ರೆಸಾರ್ಟ್ ರಾಜಕೀಯಕ್ಕೆ ಛೀ ಎಂದರು, ಸಂಜೆ ತಾವೇ ರೆಸಾರ್ಟ್‌ಗೆ ಹೋದರುಬೆಳಿಗ್ಗೆ ರೆಸಾರ್ಟ್ ರಾಜಕೀಯಕ್ಕೆ ಛೀ ಎಂದರು, ಸಂಜೆ ತಾವೇ ರೆಸಾರ್ಟ್‌ಗೆ ಹೋದರು

ಬಿಜೆಪಿಯು ರೆಸಾರ್ಟ್ ವಾಸ್ತವ್ಯ ಕೈಬಿಟ್ಟು ಬರ ಪ್ರವಾಸ ಕೈಗೊಂಡಿರುವ ಕಾರಣ, ಆಪರೇಷನ್ ಕಮಲದ ಭೀತಿ ಸ್ವಲ್ಪ ತಿಳಿಯಾಗಿದೆ. ಹಾಗಾಗಿ ಇಂದಿನ ಸಭೆ ಬಳಿಕ ಕಾಂಗ್ರೆಸ್ ನಾಯಕರು ಸಹ ರೆಸಾರ್ಟ್‌ ವಾಸ್ತವ್ಯ ಅಂತಿಮಗೊಳಿಸಬಹುದು ಎಂದು ಅಂದಾಜಿಸಲಾಗಿದೆ.

English summary
Karnataka Congerss MLAs meeting in eaglton resort in Siddaramaiah's leadership. Resort stay of congress MLAs may end today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X