ಡಿ ಕೆ ಶಿವಕುಮಾರ್ ವಿರುದ್ಧ ಒಂದಾದ ಕೈ ದಲಿತ ನಾಯಕರು: ಎಲ್ಲಾರದ್ದೂ ಒಂದೇ ಗುರಿ!
ಬೆಂಗಳೂರು, ಫೆಬ್ರವರಿ 13: ರಾಜ್ಯ ಕಾಂಗ್ರೆಸ್ನಲ್ಲಿ ಪದೇ ಪದೇ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಕೈ ಪಾಳಯದಲ್ಲಿ ಚರ್ಚೆ ನಡೆಯುತ್ತಿದೆ. ಕಳೆದ ಒಂದು ತಿಂಗಳಿನಿಂದ ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಬದಲಾವಣೆ ಕುರಿತು ಸ್ವಪಕ್ಷದ ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದು, ಹಲವು ಕೈ ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣೀಟ್ಟಿದ್ದಾರೆ.
ಕಾಂಗ್ರೆಸ್ ರಾಜ್ಯ ನಾಯಕ ಬಹಿರಂಗ ಹೇಳಿಕೆಗೆ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಬ್ರೇಕ್ ಹಾಕಿತ್ತು. ಆದರೂ ಸಹ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಬದಲಾವಣೆ ಆಗಬೇಕು ಎಂದು ಕಾಂಗ್ರೆಸ್ ಪಕ್ಷದ ದಲಿತ ನಾಯಕರು ಬಹಿರಂಗವಾಗಿಯೇ ಅಸಮಾಧಾನವನ್ನ ಹೊರಹಾಕುತ್ತಿದ್ದಾರೆ. ಈಗಾಗಲೇ ರಾಷ್ಟ್ರ ರಾಜಧಾನಿ ದೆಹಗಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ರಾಜ್ಯ ಕಾಂಗ್ರೆಸ್ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ರಾಜ್ಯ ಕಾಂಗ್ರೆಸ್ ನಲ್ಲಿ ಮೊದಲಿನಿಂದಲೂ ದಲಿತ ಮುಖ್ಯಮಂತ್ರಿ ವಿಚಾರ ಚರ್ಚೆಯಲ್ಲಿತ್ತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಕೈ ಪಾಳಯದಲ್ಲಿ ಅಸಮಾಧಾನ ಶಮನವಾಗಿತ್ತು. ಲೋಕಸಭಾ ಚುನಾವಣೆಯ ಬಳಿಕ ರಾಜ್ಯಾಧ್ಯಕ್ಷ ಬದಲಾವಣೆ ಕುರಿತು ಹೈಕಮಾಂಡ್ ಮುಂದೆ ಹಲವು ನಾಯಕರು ಒತ್ತಡವನ್ನ ಹಾಕಿದ್ದಾರೆ. ಈಗಾಗಲೇ ದೆಹಲಿ ವರಿಷ್ಠರನ್ನ ರಾಜ್ಯ ಗೃಹ ಸಚಿವರಾದ ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಅವರು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ ಕಾಂಗ್ರೆಸ್ ಹಿನ್ನೆಡೆಯಾಗಲಿದೆ ಎನ್ನುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್ ಹೊಸ ಸಾರಥಿಯನ್ನ ಆಯ್ಕೆ ಮಾಡುವುದಾಗಿ ಹೇಳಿತ್ತು. ಹೀಗಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ವಿರುದ್ಧ ಕಾಂಗ್ರೆಸ್ ನ ದಲಿತ ನಾಯಕರೆಲ್ಲಾ ಒಟ್ಟಿಗಿದ್ದಾರೆ ಎಂದು ಹೇಳಲಾಗಿದೆ.
ಈಗಾಗಲೇ ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೊನೆಗೂ ದಿನಾಂಕ ಹಾಗೂ ಮುಹೂರ್ತ ಕೂಡಿ ಬಂದಿದೆ. ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸುಳಿವು ನೀಡಿದ್ದು, ಶೀಘ್ರದಲ್ಲೇ ರಾಜ್ಯಾಧ್ಯಕ್ಷರ ಬದಲಾವಣೆಯಾಗಲಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಆಗಿರುವ ಡಿ.ಕೆ ಶಿವಕುಮಾರ್ ಅವರಿಗೆ ಭಾರೀ ಪ್ರಭಾವಿ ಇಲಾಖೆ ಹಾಗೂ ರಾಜ್ಯಾಧ್ಯಕ್ಷರ ಹುದ್ದೆಯೂ ಇದೆ ಎಂದು ಕಾಂಗ್ರೆಸ್ನ ಕೆಲವು ಸಚಿವರು ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ ಬಳಿಕ ದಲಿತ ನಾಯಕರೆಲ್ಲಾ ಕೆ ಶಿವಕುಮಾರ್ ವಿರುದ್ಧ ಒಂದಾಗಿದ್ದಾರೆ ಎನ್ನಲಾಗಿದೆ.
ಡಿ ಕೆ ಶಿವಕುಮಾರ್ ಅವರ ವಿರುದ್ಧ ದಲಿತ ನಾಯಕರೆಲ್ಲಾ ಒಂದಾಗಿರುವುದು ಒಂದೇ ಉದ್ದೇಶಕ್ಕಾಗಿ. ಸಿದ್ದರಾಮಯ್ಯ ಅವರ ಎರಡೂವರೆ ವರ್ಷಗಳ ಅಧಿಕಾರಾವಧಿಯ ನಂತರ ಮುಖ್ಯಮಂತ್ರಿ ಹುದ್ದೆಗೇರಲು ಡಿಕೆ.ಶಿವಕುಮಾರ್ ಅವರು ಸಜ್ಜಾಗಿದ್ದಾರೆ. ಆದರೆ, ಸಿಎಂ ಕುರ್ಚಿಯಿಂದ ಡಿಕೆ ಶಿವಕುಮಾರ್ ಅವರನ್ನ ದೂರ ಇಡಲು ಸತೀಶ್ ಜಾರಕಿಹೊಳಿ ಅ್ಯಂಡ್ ಟೀಮ್ ನಿರಂತರವಾಗಿ ಶ್ರಮ ವಹಿಸುತ್ತಿದೆ. ಹೀಗಾಗಿಯೇ ದಲಿತ ಸಮಾವೇಶ, ದಲಿತ ಸಿಎಂ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ.
-
GBA: ನಗರದಲ್ಲಿ ಮತದಾರರ ಪಟ್ಟಿ ಮ್ಯಾಪಿಂಗ್ ಕಾರ್ಯ ಇನ್ನಷ್ಟು ಚುರುಕು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ











Click it and Unblock the Notifications