ಮತಾಂತರ ನಿಷೇಧ ಕಾಯಿದೆಯನ್ನು ವಿರೋಧಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷ ನಿರ್ಧಾರ
ಬೆಳಗಾವಿ, ಡಿ.15: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೂ ಪೂರ್ವಭಾವಿಯಾಗಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿತು. ಈ ಸಂದರ್ಭದಲ್ಲಿ ವಿಧಾನ ಪರಷತ್ತಿಗೆ ಹೊಸದಾಗಿ ಆಯ್ಕೆಯಾದ ಎಲ್ಲ ಸದಸ್ಯರಿಗೂ ಅಭಿನಂದನೆ ಸಲ್ಲಿಸಲಾಯಿತು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಿಎಲ್ಪಿ ಸಭೆಯಲ್ಲಿ, ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆಯನ್ನು ತೀವ್ರವಾಗಿ ವಿರೋಧಿಸುವ ತೀರ್ಮಾ ಕೈಗೊಳ್ಳಲಾಯಿತು.
ಒಂದು ಜಾತಿ ಹಾಗೂ ಧರ್ಮದ ಗುರಿ
ಸಭೆಯ ಆರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಮತಾಂತರ ಕಾಯ್ದೆ ಭಾವನಾತ್ಮಕ ವಿಷಯ. ಒಂದು ಜಾತಿ ಹಾಗೂ ಧರ್ಮವನ್ನು ಗುರಿಯಾಗಿಟ್ಟುಕೊಂಡು ಸರ್ಕಾರ ಕಾಯಿದೆ ಜಾರಿಗೆ ತರಲು ಮುಂದಾಗಿದೆ. ಇದನ್ನು ತೀವ್ರವಾಗಿ ವಿರೋಧಿಸಬೇಕಾಗಿದೆ. ರಾಜಕೀಯ ಕಾರಣಕ್ಕಾಗಿ ಸರ್ಕಾರ ಮತಾಂತರ ನಿಷೇಧ ಕಾಯಿದೆ ಜಾರಿಗೊಳಿಸಲು ಹೊರಟಿದೆ. ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇದೂ ಸಹ ಆ ಪಕ್ಷದ ರಹಸ್ಯ ಕಾರ್ಯಸೂಚಿಯಾಗಿದೆ. ಈ ಹಿನ್ನೆಲೆಯಲ್ಲಿ ಕಾಯಿದೆಯನ್ನು ವಿರೋಧಿಸಬೇಕಿದೆ' ಎಂದು ಸಿದ್ದರಾಮಯ್ಯ ಅವರು ಹೇಳಿದಾಗ ಸಭೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿತು.

ರಾಜ್ಯದಲ್ಲಿ ಮೂರು ಬಾರಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇದರಿಂದ ತೀವ್ರ ಹಾನಿ ಆಯಿತು. ಜೊತೆಗೆ 23 ಜಿಲ್ಲೆಗಳಲ್ಲಿ ರೈತರ ಬೆಳೆ ಹಾನಿಗೊಳಗಾಗಿದೆ. ಲಕ್ಷಾಂತರ ಮನೆಗಳು ಮಳೆಯಿಂದಾಗಿ ಕುಸಿದಿವೆ. ಆದರೆ, ಸರ್ಕಾರ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ರಾಜ್ಯ ಸರ್ಕಾರ ನಾಲ್ಕು ಬಾರಿ ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ಈ ವರೆಗೆ ನಯಾಪೈಸೆ ಪರಿಹಾರ ಕೊಟ್ಟಿಲ್ಲ. ಈ ಬಗ್ಗೆಯೂ ಮುಂದಿನ ದಿನಗಳಲ್ಲಿ ಹೋರಾಟ ಕೈಗೆತ್ತಿಕೊಳ್ಳಬೇಕಿದೆ ಎಂದರು.
ರಾಜ್ಯದಲ್ಲಿ 18 ಸಾವಿರ ಕೋಟಿ ರೂ.ಗಳಷ್ಟು ಹಾನಿಯಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಹಾ ಮೋಸ ಮಾಡಿದೆ. ಆದರೂ ರಾಜ್ಯ ಸರ್ಕಾರ ಪರಿಹಾರ ನೀಡುವ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ. ಸತ್ಯಾಂಶವನ್ನು ಜನರ ಮುಂದಿಡುವ ಕೆಲಸವನ್ನು ನಮ್ಮ ಶಾಸಕರು ಮಾಡಬೇಕಿದೆ ಎಂದು ಹೇಳಿದರು.
ಜೊತೆಗೆ ಎಪಿಎಂಸಿ, ಭೂ ಸುಧಾರಣೆ ಮತ್ತು ಜಾನುವಾರು ನಿಷೇಧ ಹತ್ಯೆಗೆ ಸಂಬಂಧಿಸಿದ ಕಾಯಿದೆಗಳನ್ನು ವಾಪಸ್ ಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಲು ಸಭೆ ತೀರ್ಮಾನಿಸಿತು. ಈ ಕುರಿತು ನಿಲುವಳಿ ಸೂಚನೆ ಮಂಡಿಸುವುದಾಗಿ ಸಿದ್ದರಾಮಯ್ಯು ಅವರು ಸಭೆಗೆ ತಿಳಿಸಿದರು.

ವಿಧಾನ ಮಂಡಲದ ಕಲಾಪಗಳಲ್ಲಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಿದ್ದರಾಮಯ್ಯ ಅವರು ಇದೇ ವೇಳೆ ಮನವಿ ಮಾಡಿದರು.
ಮೇಕೆದಾಟು ಪಾದಯಾತ್ರೆ
ಮೇಕೆದಾಟು ಯೋಜನೆ ಜಾರಿಗೆ ತರುವಂತೆ ಸರ್ಕಾರವನ್ನು ಒತ್ತಾಯಿಸಿ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಪಾದಯಾತ್ರೆಯ ರೂಪುರೇಷೆ ವಿವರಿಸಿದ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು, ಶೀಘ್ರದಲ್ಲಿಯೇ ಪಾದಯಾತ್ರೆಯ ದಿನಾಂಕ ಘೋಷಿಸುವುದಾಗಿ ತಿಳಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಪಕ್ಷದ ಅಭ್ಯರ್ಥಿಗಳಿಗೆ ಸಭೆ ಇದೇ ವೇಳೆ ಅಭಿನಂದನೆ ಸಲ್ಲಿಸಿತು. ಸಭೆಯಲ್ಲಿ ಹಾಜರಿದ್ದ ನೂತನ ಸದಸ್ಯರಾದ ಸಲೀಂ ಅಹಮದ್ ಮತ್ತು ಚನ್ನರಾಜ್ ಅವರನ್ನು ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿ ಶುಭ ಹಾರೈಸಿದರು.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಹಿರಿಯ ಮುಖಂಡರಾದ ರಮೇಶ್ ಕುಮಾರ್, ಡಾ. ಈ. ಪರಮೇಶ್ವರ, ಎಚ್.ಕೆ. ಪಾಟೀಲ್, ಸಿ.ಎಂ. ಇಬ್ರಾಹಿಂ, ಬಿ.ಕೆ. ಹರಿಪ್ರಸಾದ್ ಮತ್ತಿತರರು ಹಾಜರಿದ್ದರು.
Recommended Video
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications