ಬಿಜೆಪಿ ಕೈಹಿಡಿಯಲಿರುವ ಮಾಜಿ ಸಂಸದೆ ತೇಜಸ್ವಿನಿ

ಆದರೆ ಇತ್ತೀಚೆಗೆ ಸಿದ್ದರಾಮಯ್ಯ ಮಂತ್ರಿಮಂಡಲ ಸೇರಿಕೊಂಡ ನಂತರ ಡಿಕೆ ಶಿವಕುಮಾರ್ ತಮ್ಮ ಪ್ರಭಾವ ಮತ್ತಷ್ಟು ಹೆಚ್ಚಿಸಿಕೊಂಡಿರುವುದು ಮಾಜಿ ಸಂಸದೆ ತೇಜಸ್ವಿನಿಗೆ ಮುಳುಗುನೀರು ತಂದಂತಿದೆ. ಹಾಗಾಗಿ ಕಾಂಗ್ರೆಸ್ಸಿನಲ್ಲಿ ಅನ್ಯಮಾರ್ಗವಿಲ್ಲದೆ ಅವರು ಅನ್ಯ ಪಕ್ಷಗಳತ್ತ ಕಣ್ಣಿಟ್ಟಿದ್ದಾರೆ ಎನ್ನುತ್ತಿವೆ ಪಕ್ಷದ ಮೂಲಗಳು. ( ತೇಜಸ್ವಿನಿ: ಬೆಂ.ದಕ್ಷಿಣ ಕ್ಷೇತ್ರದ ಸ್ವಘೋಷಿತ ಅಭ್ಯರ್ಥಿ )
ಹಾಗೆ ನೊಡಿದರೆ, ತೇಜಸ್ವಿನಿ ಶ್ರೀರಮೇಶ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಸಾಕಷ್ಟು ಕಸರತ್ತು ನಡೆಸಿದ್ದರು. ರಾಹುಲ್ ಗಾಂಧಿ ಮತ್ತು ಸೋನಿಯಾ ಮೇಡಂ ತಮಗೆ ಬಲು ಕ್ಲೋಸು ಎನ್ನುತ್ತಾ ತೇಜಸ್ವಿನಿ ಅವರ ಬಳಿ ಸುಳಿದಾಡಿದರಾದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಮತ್ತು ಮುಂದಿನ ಲೋಕಸಭೆ ವೇಳೆಗೆ ಬೇರೆ ಪಕ್ಷ ಸೇರಿಕೊಳ್ಳಬೇಕು ಎಂದು ತೇಜಸ್ವಿನಿ ಆಗಲೇ ನಿರ್ಧರಿಸಿಯಾಗಿತ್ತು ಅನ್ನುವವರೂ ಇದ್ದಾರೆ.
ಈ ಮಧ್ಯೆ, ಬೆಂಗಳೂರು ಗ್ರಾಮಾಂತರಕ್ಕೆ ಹಾಲಿ ಸಂಸದ ಡಿಕೆ ಸುರೇಶ್ ಅವರು ಕಾಯಂ ಆಗಿದ್ದು, ಬೆಂಗಳೂರು ದಕ್ಷಿಣದಿಂದ ನಂದನ್ ನೀಲೇಕೇಣಿ ಅವರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ತಮಗೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ದಕ್ಕದು ಎಂದೆಣೆಸಿದ ತೇಜಸ್ವಿನಿ ಶ್ರೀರಮೇಶ್, ಅನಿವಾರ್ಯವಾಗಿ ಅನ್ಯ ಪಕ್ಷಗಳತ್ತ ಮುಖ ಮಾಡುವಂತಾಗಿದೆ.
ಅತಂತ್ರ ತೇಜಸ್ವಿನಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ: ಇದೇ ಸಂರ್ದಭದಲ್ಲಿ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು 'ಕಾಂಗ್ರೆಸ್ಸಿನ ತೇಜಸ್ವಿನಿ ಅವರು ಬಿಜೆಪಿ ಸೇರುವುದು ಖಚಿತವಾಗಿದೆ' ಎಂದು ಪುತ್ತೂರಿನಲ್ಲಿ ಶನಿವಾರ ಹೇಳಿರುವುದು ಇಂಟರೆಸ್ಟಿಂಗ್ ಆಗಿದೆ.
'ಮಾಜಿ ಕಾಂಗ್ರೆಸ್ ಸಂಸದೆ ತೇಜಸ್ವಿನಿ ರಮೇಶ್ ಬಿಜೆಪಿ ಸೇರುವ ಕುರಿತಂತೆ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನಾಯಕರು ಕೂಡ ಒಪ್ಪಿಗೆ ನೀಡಿದ್ದಾರೆ' ಎಂದು ಸದಾನಂದಗೌಡ ಹೇಳಿದ್ದಾರೆ. ಇದು ಒಕ್ಕಲಿಗ ಮತಗಳನ್ನು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೆಳೆಯಲು ಸಹಕಾರಿಯಾಗಬಹುದಾಗಿದೆ ಎಣಿಕೆ ಬಿಜೆಪಿಯದ್ದಾಗಿದೆ.
ಎಲ್ಲವೂ ಅಂದುಕೊಂಡಂತೆ ಆದರೆ ಸಂಕ್ರಾತಿ ಮುಗಿಯುತ್ತಿದ್ದಂತೆ ತೇಜಸ್ವಿನಿ ರಮೇಶ್ ಅವರು ಬಿಜೆಪಿ ಸೇರುವುದು ಆಖೈರಾಗಲಿದೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications