Get Updates
Get notified of breaking news, exclusive insights, and must-see stories!

ಪ್ರಿಯಾಂಕಾ ಗಾಂಧಿ ಹೋದ ಕಡೆ ಕಾಂಗ್ರೆಸ್‌ಗೆ ಸೋಲು, ಬಿಜೆಪಿ ತಾಲೂಕು ಕಚೇರಿ ಉದ್ಘಾಟಿಸಿದ ಡಾ.ಕೆ.ಸುಧಾಕರ್

ಬೆಂಗಳೂರು, ಜನವರಿ 16: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿಯವರು ಹೋದ ಕಡೆಗಳಲ್ಲಿ ಆ ಪಕ್ಷಕ್ಕೆ ಸೀಟುಗಳನ್ನು ಗೆಲ್ಲುವುದಿಲ್ಲ. ರಾಜ್ಯಕ್ಕೆ ಅವರು ಬರದೇ ಇದ್ದಲ್ಲಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಒಂದಷ್ಟು ಸೀಟುಗಳಾದರೂ ದೊರೆಯುತ್ತವೆ ಎಂದು ಕಾಂಗ್ರೆಸ್‌ ಸೋಲಿನ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಲೇವಡಿ ಮಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸೋಮವಾರ ತಾಲೂಕು ನೂತನ ಬಿಜೆಪಿ ಕಚೇರಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶಕ್ಕೆ ಹೋಗದೇ ಇದ್ದಿದ್ದರೆ ಆ ಪಕ್ಷಕ್ಕೆ ಸ್ವಲ್ಪ ಸೀಟುಗಳು ಬರುತ್ತಿತ್ತು. ಅವರು ಅಲ್ಲಿಗೆ ಹೋಗಿದ್ದರಿಂದಲೇ ಸ್ಥಾನಗಳನ್ನು ಕಳೆದುಕೊಳ್ಳಬೇಕಾಯಿತು ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಹಿಳಾ ಸಬಲೀಕರಣಕ್ಕೆ ನೀಡಿರುವ ಆದ್ಯತೆಯನ್ನು ಹಿಂದಿನ ಯಾವ ಸರ್ಕಾರಗಳು ನೀಡಿಲ್ಲ. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮಾಡುವ ಘೋಷಣೆ, ಘೋಷಣೆಯಾಗಿಯೇ ಉಳಿಯುತ್ತದೆ. ಬಿಜೆಪಿಯು ಚುನಾವಣೆಗೆ ಹೋಗುವ ಮುನ್ನ ನಿರ್ದಿಷ್ಟವಾದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಲಿದ್ದಾರೆ. ರಾಜ್ಯದ ಪ್ರತಿ ಮಹಿಳೆಯರ ಸಬಲೀಕರಣಕ್ಕೆ ಅವರು ಉತ್ತಮ ಕಾರ್ಯಕ್ರಮ ನೀಡಲಿದ್ದಾರೆ ಎಂದು ಹೇಳಿದರು.

Congress Faced Defeat Wherever Priyanka Gandhi Went Places, Says Dr.K Sudhakar

ಚುನಾವಣೆ ಸಂದರ್ಭದಲ್ಲಿ ಆರೋಪ ಸಹಜ

ವಿರೋಧ ಪಕ್ಷಗಳು ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಆರೋಪಗಳನ್ನು ಮಾಡಲು ಆರಂಭಿಸಿವೆ. ಚುನಾವಣೆಯ ಹೊಸ್ತಿಲಲ್ಲಿ ಇದು ಸಹಜವಾಗಿದೆ. ಭ್ರಷ್ಟಾಚಾರದ ಆಪಾದನೆಗಳನ್ನು ಯಾರಾದರೂ ಮಾಡಿದರೆ, ಅದನ್ನು ಯಾವ ಪಕ್ಷ ಹಾಗೂ ಯಾವ ಮುಖಂಡರು ಮಾಡಿದ್ದಾರೆ ಎಂದು ತಿಳಿದುಕೊಂಡು ತನಿಖೆ ಮಾಡಬೇಕು. ಹಿಂದಿನ ಸರ್ಕಾರದ್ದೂ ತನಿಖೆ ಮಾಡಬೇಕು. ಆಗ ಮಾತ್ರ ಯಾವುದು ಸತ್ಯ, ಅಸತ್ಯ ಎಂದು ತಿಳಿದುಬರುತ್ತದೆ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.

ನೆಲಮಂಗಲದ ಅಪಘಾತ ಆರೈಕೆ ಆಸ್ಪತ್ರೆಯಲ್ಲಿ ಸಿಬ್ಬಂದಿ ನೇಮಕಾತಿಯ ಪ್ರಕ್ರಿಯೆ ಆರಂಭವಾಗಿದೆ. ನೆಲಮಂಗಲದ ಮೇಲೆ ವಿಶೇಷ, ಕಾಳಜಿ, ಅಭಿಮಾನ ಇರುವುದರಿಂದಲೇ ಈ ಕ್ರಮ ವಹಿಸಲಾಗಿದೆ. ಆದರೆ ಇಲ್ಲಿನ ಶಾಸಕರು ನೇಮಕಾತಿ ಬಗ್ಗೆ ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ. ಅವರು ವೈದ್ಯರಾಗಿಯೂ ಇಷ್ಟು ವರ್ಷಗಳಲ್ಲಿ ಏನೂ ಮಾಡಿಲ್ಲ ಎಂದು ಸಚಿವ ಸುಧಾಕರ್ ದೂರಿದರು.

Congress Faced Defeat Wherever Priyanka Gandhi Went Places, Says Dr.K Sudhakar

ಉದ್ಘಾಟನೆ ಸಮಾರಂಭದಲ್ಲಿ ನೆಲಮಂಗಲದ ಸ್ಥಳೀಯ ಬಿಜೆಪಿ ಮುಖಂಡರು ಸಚಿವರನ್ನು ಸನ್ಮಾನಿಸಿದರು. ಪಕ್ಷ ಸಂಘಟನೆ, ಮುಂದಿನ ಚುನಾವಣೆ ಕುರಿತು ಕಾರ್ಯಕರ್ತರು, ನಾಯಕರ ಜೊತೆ ಸುಧಾಕರ್ ಚರ್ಚಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+