ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು, ಏಪ್ರಿಲ್ 27: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಗಳಾಗಲಿದೆ ಎಂದು ಹೇಳಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪ್ರಕರಣ ದಾಖಲಿಸಿದೆ.
ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ, ಡಾ ಪರಮೇಶ್ವರ್ ಮತ್ತು ಡಿ ಕೆ ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಮತ್ತು ಬಿಜೆಪಿ ರ್ಯಾಲಿಯ ಆಯೋಜಕರ ವಿರುದ್ಧ "ಪ್ರಚೋದನಕಾರಿ ಹೇಳಿಕೆಗಳು, ದ್ವೇಷ ಮತ್ತು ದ್ವೇಷವನ್ನು ಉತ್ತೇಜಿಸುವ ಮತ್ತು ಪ್ರತಿಪಕ್ಷಗಳನ್ನು ನಿಂದಿಸುವ ಆರೋಪದ ಮೇಲೆ ಗುರುವಾರ ಪೊಲೀಸ್ ದೂರು ದಾಖಲಿಸಿದ್ದಾರೆ.

ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಿನ್ನೆ, ಗೃಹ ಸಚಿವ ಅಮಿತ್ ಶಾ ಅವರು ಹಳೆಯ ಪಕ್ಷವು ಅಧಿಕಾರಕ್ಕೆ ಬಂದರೆ ಕರ್ನಾಟಕವು ಗಲಭೆಗಳಿಂದ ಬಳಲುತ್ತದೆ ಎಂಬ ಹೇಳಿಕೆಯನ್ನು "ನಾಚಿಕೆಯಿಲ್ಲದ ಬೆದರಿಸುವ ಹೇಳಿಕೆ" ಎಂದು ಕಾಂಗ್ರೆಸ್ ಬಣ್ಣಿಸಿತ್ತು. ಚುನಾವಣಾ ಪ್ರಚಾರದ ಸಮಯದಲ್ಲಿ ಅವರು ಬೆದರಿಕೆಗಳನ್ನು ಹಾಕುತ್ತಿದ್ದಾರೆ ಎಂದು ಆರೋಪಿಸಿತ್ತು.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @rssurjewala, ಕೆಪಿಸಿಸಿ ಅಧ್ಯಕ್ಷರಾದ @DKShivakumar ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ನಡೆಯುತ್ತದೆ ಎಂದು ರಾಜ್ಯದ ಮತದಾರರಿಗೆ ಬೆದರಿಕೆ ಒಡ್ಡಿರುವ ಕೇಂದ್ರ ಗೃಹ ಸಚಿವ @AmitShah ಅವರ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು. pic.twitter.com/wi9Z6rzxgL
— Karnataka Congress (@INCKarnataka) April 27, 2023
ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ಮಂಗಳವಾರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಸರ್ಕಾರ ರಚಿಸಿದರೆ ರಾಜ್ಯದ ಅಭಿವೃದ್ಧಿ ರಿವರ್ಸ್ ಗೇರ್ ಆಗಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ವಂಶಾಡಳಿತದ ರಾಜಕೀಯವು ಸಾರ್ವಕಾಲಿಕ ಉತ್ತುಂಗದಲ್ಲಿರುತ್ತದೆ ಮತ್ತು ಕರ್ನಾಟಕವು ಗಲಭೆಗಳಿಂದ ಬಳಲುತ್ತದೆ ಎಂದು ಗೃಹ ಸಚಿವರು ಹೇಳಿದ್ದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಗಳಾಗಲಿದೆ ಎಂದು ಹೇಳಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪ್ರಕರಣ ದಾಖಲಿಸಿದೆ...#news #karnatakacongress #case #homeminister #amitshah #DKShivakumar pic.twitter.com/nHk4AhKfFk
— oneindiakannada (@OneindiaKannada) April 27, 2023
ಇದಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳಾಗುತ್ತವೆ ಎಂಬ ಅಮಿತ್ ಶಾ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಕೇವಲ ರಾಜಕೀಯಕ್ಕಾಗಿ ಕೇಂದ್ರ ಗೃಹ ಸಚಿವರು ಇಷ್ಟು ಕೀಳು ಮಟ್ಟಕ್ಕಿಳಿದಿರುವುದು ನಾಚಿಕೆಗೇಡಿನ ಸಂಗತಿ. ಬಿಜೆಪಿಯಿಂದ ಮಾತ್ರ ಇಂಥ ಅನಾಗರಿಕ ನಡೆ ಸಾಧ್ಯ. ಬಿಜೆಪಿ ಆಡಳಿತಕ್ಕಿಂತ ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ಜನರು ಯಾವಾಗಲೂ ಸುರಕ್ಷಿತವಾಗಿರುತ್ತಾರೆ. ಎಲ್ಲಕ್ಕಿಂತ ಹೆಚ್ಚಾಗಿ ಸಮಾನತೆ ಮತ್ತು ಶಾಂತಿಯನ್ನು ಸಾರಿದ ಬಸವಣ್ಣನವರ ನಾಡಿದು' ಎಂದು ಡಿಕೆಶಿ ತಿರುಗೇಟು ನೀಡಿದ್ದರು.
ಮುಮದುವರೆದು 'ಕೇಂದ್ರ ಗೃಹ ಸಚಿವರು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಅದಕ್ಕೆ ಪ್ರತಿಫಲ ಅನುಭವಿಸುತ್ತಾರೆ. ಬಿಜೆಪಿ ಪಾಪದ ಕೊಡ ತುಂಬಿದೆ. ಮೇ 13ಕ್ಕೆ ತಕ್ಕ ಶಾಸ್ತಿಯಾಗಲಿದೆ. ಅಮಿತ್ ಶಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಕಟ ಕಾಂಗ್ರೆಸ್, 'ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಸಿಕ್ಕರೆ ರಾಜ್ಯದಲ್ಲಿ ಗಲಭೆ ಆಗಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ ಅವರೇ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನೀವೇ ಗಲಭೆ ಸೃಷ್ಟಿಸುವುದಾಗಿ ರಾಜ್ಯದ ಜನತೆಗೆ ಧಮಕಿ ಹಾಕುತ್ತಿದ್ದಿರಾ? ಇಂತಹ ಬೆದರಿಕೆಗೆ ರಾಜ್ಯದ ಪ್ರಜ್ಞಾವಂತ ಜನ ಸೊಪ್ಪು ಹಾಕುವುದಿಲ್ಲ. ನೀವೊಬ್ಬ ಗೃಹ ಸಚಿವ ಎಂಬುದು ನೆನಪಿನಲ್ಲಿಡಿ' ಎಂದು ವಾಗ್ದಾಳಿ ನಡೆಸಿತ್ತು.












Click it and Unblock the Notifications