ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ಕೊಟ್ಟ ಕಾಂಗ್ರೆಸ್
ಬೆಂಗಳೂರು, ಮಾರ್ಚ್ 23: ಮಾಜಿ ಸಚಿವ, ಗೋಕಾಕ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಹೋರಾಟವನ್ನು ತೀವ್ರಗೊಳಿಸಿದೆ. ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಇಡಿಗೆ ಮಾಜಿ ಸಚಿವರ ವಿರುದ್ಧ ದೂರು ನೀಡಿದೆ.
ಮಂಗಳವಾರ ಬೆಂಗಳೂರಿನ ಶಾಂತಿ ನಗರದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಕಾಂಗ್ರೆಸ್ ಮುಖಂಡ ಮೋಹನ್ ದೂರು ನೀಡಿದ್ದಾರೆ. ಸಿಡಿ ಪ್ರಕರಣದಲ್ಲಿ ನಡೆದಿರುವ ಹಣದ ವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಸಿಡಿ ಗದ್ದಲಕ್ಕೆ ಮಂಗಳವಾರದ ವಿಧಾನಸಭೆ ಕಲಾಪ ಬಲಿ
ಮಾಧ್ಯಮಗಳ ಜೊತೆ ಮಾತನಾಡಿದ ಮೋಹನ್, "ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿಯಲ್ಲಿ ಸಿಡಿ ತಯಾರು ಮಾಡಲು 5 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ತನಿಖೆ ನಡೆಸಬೇಕು ಎಂದು ಮನವಿ ಮಾಡಲಾಗಿದೆ" ಎಂದು ಹೇಳಿದರು.
ವಿಧಾನಸಭೆ ಕಲಾಪ; ಪಟ್ಟು ಬಿಡದ ಕಾಂಗ್ರೆಸ್, ಜೆಡಿಎಸ್ನಿಂದ ಸಭಾತ್ಯಾಗ
ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಸದಸ್ಯರು ಸದನದಲ್ಲಿಯೂ ಹೋರಾಟ ನಡೆಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರರಕರಣ ದಾಖಲು ಮಾಡಬೇಕು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು. ಕೋರ್ಟ್ ಮೊರೆ ಹೋಗಿರುವ 6 ಸಚಿವರು ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿದೆ.
ರಾಜ್ಯ ರಾಜಕೀಯ ಇತಿಹಾಸದಲ್ಲೇ ಯಾವ ಸಚಿವರೂ ಹೀಗೆ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿಲ್ಲ.
— Karnataka Congress (@INCKarnataka) March 23, 2021
ಸಿಡಿ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದೆ, ನಿಷ್ಪಕ್ಷಪಾತ ತನಿಖೆ ಆಗುತ್ತಿಲ್ಲ.
6 ಮಂದಿ ಸಚಿವರೂ ರಾಜೀನಾಮೆ ನೀಡಬೇಕು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಪ್ರಕರಣದ ತನಿಖೆ ನಡೆಯಬೇಕು.
- @siddaramaiah pic.twitter.com/xAXjRfXjq6
Recommended Video
ಸಿಡಿ ವಿಚಾರದಲ್ಲಿ ಅಪಾರವಾದ ಹಣದ ವಹಿವಾಟು ನಡೆದಿದೆ ಎಂಬ ವರದಿಗಳು ಮಾಧ್ಯಮಗಳಲ್ಲಿಯೂ ಬರುತ್ತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಇಡಿಗೆ ದೂರು ನೀಡಿದೆ. ಸಿಡಿ ಪ್ರರಕಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದ್ದು, ಇದುವರೆಗೂ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲು ಮಾಡಿಲ್ಲ.