ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಗೆ ಶಿಫ್ಟ್ ಆಗಿರುವ ಕಾಂಗ್ರೆಸ್ ಟಿಕೆಟ್ ರಾಜಕೀಯ

By Manjunatha
|
Google Oneindia Kannada News

ನವದೆಹಲಿ, ಏಪ್ರಿಲ್ 10: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಸಿದ್ದರಾಮಯ್ಯ ಮತ್ತು ಪರಮೇಶ್ವರ್‌ ದ್ವಯರು ದೆಹಲಿಗೆ ತೆರಳಿರುವ ಬೆನ್ನಲ್ಲೇ ಕಾಂಗ್ರೆಸ್‌ನ ಬಹುತೇಕ ಮುಖಂಡರು, ಟಿಕೆಟ್ ಆಕಾಂಕ್ಷಿಗಳು ದೆಹಲಿ ಸೇರಿದ್ದಾರೆ.

ಬಿಜೆಪಿಯಲ್ಲಿ ಟಿಕೆಟ್ ಬಿಕ್ಕಟ್ಟು, 10 ಕ್ಷೇತ್ರದಲ್ಲಿ ಬಂಡಾಯ ಬಿಜೆಪಿಯಲ್ಲಿ ಟಿಕೆಟ್ ಬಿಕ್ಕಟ್ಟು, 10 ಕ್ಷೇತ್ರದಲ್ಲಿ ಬಂಡಾಯ

ಇಂದು ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸೇರಿದಂತೆ ಹಲವು ಪ್ರಮುಖ ಮುಖಂಡರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್ ಅವರ ಮನೆಗೆ ತೆರಳಿ, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.

ಮಂಡ್ಯ ಟಿಕೆಟ್ ಬಗ್ಗೆ ಸ್ವತಃ ಅಂಬರೀಶ್ ಹೀಗಂದಿದ್ದಾರೆ ಮಂಡ್ಯ ಟಿಕೆಟ್ ಬಗ್ಗೆ ಸ್ವತಃ ಅಂಬರೀಶ್ ಹೀಗಂದಿದ್ದಾರೆ

ಅಲ್ಲಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರ ಮೇಲೆ ಕೊನೆಯ ಭಾರಿ ಪ್ರಭಾವ ಬೀರಲು ವಿವಿಧ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ದೆಹಲಿಗೆ ಹಾರಿದ್ದು, ಅಲ್ಲಿಯೂ ಕೊನೆಯ ಹಂತದ ಪ್ರಯತ್ನಗಳಲ್ಲಿ ನಿರತರಾಗಿದ್ದಾರೆ.

Congress finalizing its contestants list in Delhi

ದೆಹಲಿಯಲ್ಲಿ ತಮ್ಮನ್ನು ಭೇಟಿ ಆದ ಮುಸ್ಲಿಂ ಸಮುದಾಯದ ಟಿಕೆಟ್ ಆಕಾಂಕ್ಷಿಗಳಿಗೆ 'ಅಲ್ಪಸಂಖ್ಯಾತರು ಎಂಬ ಕೋಟಾದಡಿ ಟಿಕೆಟ್ ಕೇಳಬೇಡಿ, ಈಗಾಗಲೇ ಕಾಂಗ್ರೆಸ್‌ ಹಲವು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದೆ, ಎಂಎಲ್‌ಸಿಗಳನ್ನಾಗಿಯೂ ಹಲವರನ್ನು ಆಯ್ಕೆ ಮಾಡಲಾಗಿದೆ' ಎಂದಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ನಾಳೆ ಅಥವಾ ನಾಡಿದ್ದು ಕಾಂಗ್ರೆಸ್‌ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ.

English summary
Congress party finalizing its contestants list in Delhi. Siddaramaiah and KPCC president Parameshwar were in state congress in charge Venugopal's house. many ticket aspirants and congress leaders were in Delhi now .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X