ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ನುಡಿದಂತೆ ನಡೆಯಲಿ: ಸಿದ್ದರಾಮಯ್ಯ ಸಲಹೆ

|
Google Oneindia Kannada News

ಬೆಂಗಳೂರು, ಜನವರಿ 19: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವುದಿಲ್ಲ. ನಮ್ಮ ಶಾಸಕರನ್ನು ಬರ ಅಧ್ಯಯನಕ್ಕೆ ಕಳುಹಿಸುತ್ತೇನೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನುಡಿದಂತೆ ನಡೆದುಕೊಳ್ಳಲಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ತನ್ನ ಶಾಸಕರನ್ನು ಹರಿಯಾಣದ ಗುರುಗ್ರಾಮಕ್ಕೆ ಕರೆದೊಯ್ದಿದ್ದ ಬಿಜೆಪಿಯ ರೆಸಾರ್ಟ್ ರಾಜಕಾರಣವನ್ನು ಟೀಕಿಸಿದ್ದ ಕಾಂಗ್ರೆಸ್, ಈಗ ಆಪರೇಷನಲ್ ಕಮಲದ ದಾಳಕ್ಕೆ ಶಾಸಕರು ಬೀಳಲಿದ್ದಾರೆ ಎಂಬ ಭಯದಿಂದ ತನ್ನ ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ದಿದೆ.

ಕಾಂಗ್ರೆಸ್‌ಗೆ ಇನ್ನೂ ಕಾಡುತ್ತಿದೆ 'ಆಪರೇಷನ್' ಭಯ: ಇಂದು ಶಾಸಕರೊಂದಿಗೆ ಮತ್ತೆ ಸಭೆಕಾಂಗ್ರೆಸ್‌ಗೆ ಇನ್ನೂ ಕಾಡುತ್ತಿದೆ 'ಆಪರೇಷನ್' ಭಯ: ಇಂದು ಶಾಸಕರೊಂದಿಗೆ ಮತ್ತೆ ಸಭೆ

ಈ ಬಗ್ಗೆ ಶನಿವಾರ ಬೆಳಿಗ್ಗೆ ಹೇಳಿಕೆ ನೀಡಿರುವ ಯಡಿಯೂರಪ್ಪ, ತಮ್ಮ ಎಲ್ಲ ಶಾಸಕರನ್ನೂ ಬೆಂಗಳೂರಿಗೆ ಬರುವಂತೆ ಸೂಚಿಸಲಾಗಿದೆ. ನಾವು ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಆ ಭಯ ಬೇಡ. ನಾವು ವಿರೋಧ ಪಕ್ಷದಲ್ಲಿಯೇ ಕೆಲಸ ಮಾಡುತ್ತೇವೆ. ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಅಧ್ಯಯನ ನಡೆಸಲು ತೆರಳುವುದು, ಜನರ ಸಮಸ್ಯೆ ಆಲಿಸುವುದ ನಮ್ಮ ಕೆಲಸವಾಗಲಿದೆ ಎಂದು ಹೇಳಿದ್ದರು.

Congress former chief minister Siddaramaiah adviced yeddyurappa to follow what he said

ಯಡಿಯೂರಪ್ಪ ಅವರ ಈ ಹೇಳಿಕೆಯನ್ನು ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ದೆಹಲಿಯಲ್ಲಿದ್ದ ಬಿಜೆಪಿ ಶಾಸಕರನ್ನು ಕರೆಸಿಕೊಂಡು ರಾಜ್ಯದ ಬರನಿರ್ವಹಣೆಯ ಸಮೀಕ್ಷೆಗೆ ಕಳುಹಿಸುವ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರವನ್ನು ಸ್ವಾಗತಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

ಜೊತೆಗೆ ಯಡಿಯೂರಪ್ಪ ನುಡಿದಂತೆ ನಡೆದು ರಾಜ್ಯದ ಜನತೆಯ ನಂಬಿಕೆ ಉಳಿಸಿಕೊಳ್ಳಲಿ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಿಗ್ಗೆ ರೆಸಾರ್ಟ್ ರಾಜಕೀಯಕ್ಕೆ ಛೀ ಎಂದರು, ಸಂಜೆ ತಾವೇ ರೆಸಾರ್ಟ್‌ಗೆ ಹೋದರುಬೆಳಿಗ್ಗೆ ರೆಸಾರ್ಟ್ ರಾಜಕೀಯಕ್ಕೆ ಛೀ ಎಂದರು, ಸಂಜೆ ತಾವೇ ರೆಸಾರ್ಟ್‌ಗೆ ಹೋದರು

'ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ, ಪ್ರತಿಪಕ್ಷವಾಗಿ ಕೆಲಸ ನಿರ್ವಹಿಸುತ್ತೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಭಯ ಬೇಡ' ಎಂದಿರುವ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆಯಲಿ, ರಾಜ್ಯದ ಜನರ ನಂಬಿಕೆ ಉಳಿಸಿಕೊಳ್ಳಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

English summary
Congress leader, former Chief Minister Siddaramaiah welcomed the decision by BJP leader BS Yeddyurappa to go study on draught hit places. Yeddyurappa should adhere to his words, siddaramaiah said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X