ಅತೃಪ್ತ ಶಾಸಕರಿಗೆ ಮತ್ತೊಂದು ನೋಟಿಸ್ ನೀಡಲಿದೆ ಕಾಂಗ್ರೆಸ್
ಬೆಂಗಳೂರು, ಜನವರಿ 29: ಎಚ್ಚರಿಕೆಯ ಬಳಿಕವೂ ಕಾಂಗ್ರೆಸ್ ಪಕ್ಷ ಶಾಸಕಾಂಗ ಸಭೆಗೆ ಗೈರಾಗಿದ್ದ ನಾಲ್ವರು ಶಾಸಕರಿಗೆ ಈಗಾಗಲೇ ಒಂದು ನೊಟೀಸ್ ನೀಡಲಾಗಿದೆ. ಆದರೆ ಈಗ ಮತ್ತೊಂದು ನೊಟೀಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮೊದಲಿಗೆ ನೀಡಿದ್ದ ನೊಟೀಸ್ಗೆ ಕೇವಲ ಪತ್ರ ಮೂಲಕವಷ್ಟೆ ಶಾಸಕರು ಉತ್ತರಿಸಿದ್ದಾರೆ. ಆದರೆ ಅವರು ಸಿಎಲ್ಪಿ ನಾಯಕರ ಮುಂದೆ ಹಾಜರಾಗಿ ತಮ್ಮ ಗೈರು ಹಾಜರಿಗೆ ಕಾರಣ ಹೇಳಬೇಕು ಹಾಗಾಗಿಯೇ ಮತ್ತೊಂದು ನೊಟೀಸ್ ಅನ್ನು ಅತೃಪ್ತ ಶಾಸಕರಿಗೆ ರವಾನಿಸಲಾಗುವುದು ಎಂದು ಅವರು ಹೇಳಿದರು.
ಜನವರಿ 18 ರಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆದಿತ್ತು. ಎಲ್ಲ ಶಾಸಕರು ಕಡ್ಡಾಯವಾಗಿ ಸಭೆಯಲ್ಲಿ ಹಾಜರಾಗಬೇಕು ಎಂದು ಫರ್ಮಾನು ಹೊರಡಿಸಲಾಗಿತ್ತು. ಆದರೆ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಶಾಸಕ ಉಮೇಶ್ ಜಾಧವ್ ಮತ್ತು ಬಿ.ನಾಗೇಂದ್ರ ಅವರುಗಳು ಶಾಸಕಾಂಗ ಸಭೆಗೆ ಗೈರಾಗಿದ್ದರು.

ಈ ಶಾಸಕರು ಬಿಜೆಪಿಯ ಸಂಪರ್ಕದಲ್ಲಿದ್ದರು, ಮುಂಬೈನ ಹೊಟೆಲ್ ಒಂದರಲ್ಲಿ ವಾಸ್ಥವ್ಯ ಹೂಡಿದ್ದರು ಎನ್ನಲಾಗಿತ್ತು. ಕೆಪಿಸಿಸಿಯು ಈ ನಾಲ್ಕು ಶಾಸಕರಿಗೆ ನೊಟೀಸ್ ಜಾರಿ ಮಾಡಿತು. ನೊಟೀಸ್ಗೆ ಬಹುತೇಕ ಎಲ್ಲರೂ ಲಿಖಿತ ಉತ್ತರ ನೀಡಿದರು. ತಾವು ಪಕ್ಷ ಬಿಡುವುದಿಲ್ಲ ಎಂದು ಸಹ ಹೇಳಿದರು. ಆದರೆ ಇದು ಕೆಪಿಸಿಸಿ ಅಧ್ಯಕ್ಷರಿಗೆ ತೃಪ್ತಿ ತಂದಿಲ್ಲ.
ಕೇವಲ ಲಿಖಿತ ಉತ್ತರ ಬರೆದರಷ್ಟೆ ಸಾಲದು ಶಾಸಕರು ಖುದ್ದಾಗಿ ಶಾಸಕಾಂಗ ಪಕ್ಷದ ಮುಖಂಡರ ಎದುರು ಹಾಜರಾಗಿ ಕಾರಣವನ್ನು ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದು, ಮತ್ತೊಂದು ನೊಟೀಸ್ ಅನ್ನು ನಾಲ್ಕೂ ಶಾಸಕರಿಗೆ ನೀಡಲಾಗುವುದು ಎಂದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications