ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಂದ ಹಣ ಕೀಳುತ್ತಿರುವ ಪರಿ: ಬಿಜೆಪಿ
ಬೆಂಗಳೂರು, ಜನವರಿ 09: ಸ್ವಯಂಘೋಷಿತ ಆರ್ಥಿಕ ತಜ್ಞ ಅಲಿಯಾಸ್ ಮಜವಾದಿ ಸಿದ್ದರಾಮಯ್ಯ ಅವರು ಗ್ಯಾರಂಟಿಗಳನ್ನು ಘೋಷಿಸಿ, ಅವೈಜ್ಞಾನಿಕವಾಗಿ ಅನುಷ್ಠಾನ ಮಾಡಿ, ಅದಕ್ಕಾಗಿ ಬೆಲೆ ಏರಿಕೆ ಮಾಡಿ ಫಲಾನುಭವಿಗಳ ಖಾತೆಗೆ ಇನ್ನೂ ಹಣ ಹಾಕದೆ ಕಿವಿ ಮೇಲೆ ಹೂವಿಟ್ಟು ಯಮಾರಿಸಿದ್ದೂ ಅಲ್ಲದೆ ಖಜಾನೆ ಖಾಲಿ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದರು.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಗ್ಯಾರಂಟಿಗಳ ಗಿಮಿಕ್ನಿಂದ ಖಜಾನೆ ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಂದ ಹಣ ಕೀಳುತ್ತಿರುವ ಪರಿ ಎಂದು ಕರ್ನಾಟಕ ಬಿಜೆಪಿ, ರಾಜ್ಯ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

▪️ಯುವ ನಿಧಿ : ಪದವಿ ಶಿಕ್ಷಣ ಶುಲ್ಕ ಹೆಚ್ಚಳ
▪️ಗೃಹ ಜ್ಯೋತಿ : ವಿದ್ಯುತ್ ದರ ಮತ್ತೆ ಏರಿಕೆ ತಾಕೀತು
▪️ಅನ್ನಭಾಗ್ಯ : ಅಕ್ಕಿಯೂ ಇಲ್ಲ, ದುಡ್ಡು ಇಲ್ಲ
▪️ಶಕ್ತಿ : ಬಸ್ ದರಗಳ ಏರಿಕೆ ನಿಗಮಗಳು ಬರ್ಬಾದ್
▪️ಗೃಹ ಲಕ್ಷ್ಮಿ : ಪ.ಜಾತಿ/ಪ.ಸಮುದಾಯ ಅನುದಾನ ಬಳಕೆ
ಗ್ಯಾರಂಟಿಗಳ ಗಿಮಿಕ್ನಿಂದ ಖಜಾನೆ ಖಾಲಿ ಮಾಡಿರುವ @INCKarnataka ಸರ್ಕಾರ ರಾಜ್ಯದ ಜನರಿಂದ ಹಣ ಕೀಳುತ್ತಿರುವ ಪರಿ:
— BJP Karnataka (@BJP4Karnataka) January 9, 2024
▪️ಯುವ ನಿಧಿ : ಪದವಿ ಶಿಕ್ಷಣ ಶುಲ್ಕ ಹೆಚ್ಚಳ
▪️ಗೃಹ ಜ್ಯೋತಿ : ವಿದ್ಯುತ್ ದರ ಮತ್ತೆ ಏರಿಕೆ ತಾಕೀತು
▪️ಅನ್ನಭಾಗ್ಯ : ಅಕ್ಕಿಯೂ ಇಲ್ಲ, ದುಡ್ಡು ಇಲ್ಲ
▪️ಶಕ್ತಿ : ಬಸ್ ದರಗಳ ಏರಿಕೆ ನಿಗಮಗಳು ಬರ್ಬಾದ್
▪️ಗೃಹ ಲಕ್ಷ್ಮಿ :…
ಇನ್ನೂ ರಾಮ ಮಂದಿ ವಿಚಾರವಾಗಿ ಕಾಂಗ್ರೆಸ್ ಟ್ವೀಟ್ ಗೆ ತಿರುಗೇಟು ನೀಡಿದ ಬಿಜೆಪಿ, ಹಳ್ಳಿ ಹಳ್ಳಿಗಳಲ್ಲಿ ರಾಮ ಮಂದಿರ ನಿರ್ಮಾಣವಾಗಿದ್ದು ರಾಮ ಭಕ್ತರಿಂದ, ಆದರೆ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಿ ಅದರಿಂದ ಬರುವ ಆದಾಯವನ್ನು ದೋಚಿದ್ದು ನೀವು! ಮಹಾತ್ಮಾ ಗಾಂಧಿಯವರ ರಾಮರಾಜ್ಯದ ಕಲ್ಪನೆಯನ್ನು ಮೂಲೆಗೆ ಸೇರಿಸಿದ್ದು ಕಾಂಗ್ರೆಸ್, ಆದರೆ ಇಂದು ರಾಮ ಮಂದಿರ ನಿರ್ಮಿಸಿ ಅವರ ಕಲ್ಪನೆಗೆ ಜೀವ ತುಂಬಿದ್ದು ಮೋದಿ ಸರ್ಕಾರ ಎಂದು ಹೇಳಿದೆ.

ರಾಮ ಮಂದಿರದ ಬೀಗ ತೆಗಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದು ರಾಜೀವ್ ಗಾಂಧಿಯಾದರೆ..!? ರಾಮ ಮಂದಿರದ ವಿರುದ್ಧವಾಗಿ ನ್ಯಾಯಾಲಯದಲ್ಲಿ ದಾವೆ ಹೂಡಲು ಕಪಿಲ್ ಸಿಬಲ್ರನ್ನು ಕಳುಹಿಸಿದ್ದು ಯಾರು ? ಸ್ವಾತಂತ್ರ್ಯ ದೊರಕಿದಾಗಿನಿಂದ ರಾಮ ಮಂದಿರದ ಕಲ್ಪನೆ ದೇಶದ ಜನರಲ್ಲಿತ್ತು, ಅಂದಿನಿಂದ ಇಂದಿನವರೆಗೂ ನಿರ್ಮಾಣವಾಗದ ರಾಮ ಮಂದಿರ ನಿಮ್ಮ ರಾಜೀವ್ ಗಾಂಧಿ ಕಾಲಘಟ್ಟದಲ್ಲಿ ಯಾಕೆ ಆಗಲಿಲ್ಲ ? ತಡೆದವರು ಯಾರು ? ಎಂದು ಪ್ರಶ್ನಿಸಿದೆ.
ರಾಮ ಮತ್ತು ರಾಮನ ಆದೇಶವನ್ನು ಪಾಲಿಸುತ್ತಾ ಬಂದಿದ್ದರೆ ಕಾಂಗ್ರೆಸ್ ಪಕ್ಷ ರಾಮನನ್ನು ಕೇವಲ ಕಾಲ್ಪನಿಕ ಎಂದು ಏಕೆ ವ್ಯಂಗ್ಯ ಮಾಡುತ್ತಿತ್ತು ? ಕಳೆದ 70 ವರ್ಷಗಳಿಂದಲೂ ಹಿಂದುಗಳ ಆದರ್ಶ ಪುರುಷನಾದ ಶ್ರೀ ರಾಮನ ಮಂದಿರ ನಿರ್ಮಾಣ ಮಾಡಲು ಮೀನಾಮೇಷ ಎಣಿಸಿದ್ದು ಕಾಂಗ್ರೆಸ್ಸಿನಿಂದ ಜನರ ನಂಬಿಕೆಗೆ ಆದ ದುರಂತ! ರಾಮಾಯಣ ಹೇಗೆ ಜನರ ಮನದಲ್ಲಿದೆಯೋ ಹಾಗೆಯೇ ಕಾಂಗ್ರೆಸ್ಸಿಗರ ಸುಳ್ಳಿನ ಸರಪಳಿ ದೇಶದ ಜನತೆಯ ಮನಸ್ಸಿನಲ್ಲಿ ಆಳವಾಗಿದೆ ಎಂದು ಬಿಜೆಪಿ ಹೇಳಿದೆ.
-
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ











Click it and Unblock the Notifications