ಕರ್ನಾಟಕ ಮತ್ತು ಕನ್ನಡಿಗರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ಗೋವಿಂದ ಕಾರಜೋಳ
ಬೆಂಗಳೂರು, ಸೆಪ್ಟೆಂಬರ್ 23: ಕರ್ನಾಟಕ ಮತ್ತು ಕನ್ನಡಿಗರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕಿಡಿಕಾರಿದರು.
ಈ ಕುರಿತು ಶನಿವಾರ ಕಾವೇರಿ ನೀರಿನ ವಿಚಾರವೂ ಸೇರಿ ವಿವಿಧ ರಂಗಗಳಲ್ಲಿ ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಗೋವಿಂದ ಕಾರಜೋಳ ಮಾತನಾಡಿ, ಡಿಎಂಕೆ ಸರಕಾರ ಮತ್ತು ಐಎನ್ಡಿಐಎ ಒಕ್ಕೂಟವನ್ನು ಮೆಚ್ಚಿಸುವ ಉದ್ದೇಶದಿಂದ ರಾಜ್ಯದ ಕಾಂಗ್ರೆಸ್ ಸರಕಾರವು ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಿದೆ ಎಂದು ಕಿಡಿಕಾರಿದರು.

ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಅವರು ಆಗ್ರಹಿಸಿದ ಅವರು, ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಲು ಅವರು ಒತ್ತಾಯಿಸಿದರು. ಕಾವೇರಿ ಜಲಾನಯನ ಪ್ರದೇಶದ ಜನರು ನೀರಿಗಾಗಿ ಗುಳೆ ಹೋಗುವ ಸ್ಥಿತಿ ಬರಲಿದೆ ಎಂದು ಅವರು ಎಚ್ಚರಿಸಿದರು.
ಕರ್ನಾಟಕ ಮತ್ತು ಕನ್ನಡಿಗರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರವು ಸಂಪೂರ್ಣ ವಿಫಲವಾಗಿದೆ. ಅಲ್ಲದೇ ರಾಜ್ಯದ ಜನರನ್ನು ಬಲಿ ಕೊಡಲು ಈ ಸರಕಾರ ವಿಫಲವಾಗಿದೆ. ತಮಿಳುನಾಡಿನಲ್ಲಿ ಉತ್ತಮ ಮಳೆ ಆಗಿದ್ದರೂ, ಇಲ್ಲಿ ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಟೀಕಿಸಿದರು.
ಒಂದೆಡೆ ಖಾಲಿ ಕೊಡ ಹಿಡಿಯುವ ಸ್ಥಿತಿ ಇದೆ. ಇನ್ನೊಂದೆಡೆ ಬ್ರ್ಯಾಂಡ್ ಬೆಂಗಳೂರು ಎಂದು ತಿಳಿಸಿದರೆ ಹೇಗೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ಸಿನ ನಡತೆ ಖಂಡನೀಯ ಎಂದು ತಿಳಿಸಿದರು. ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಜೆಪಿಯ 3 ಮಹಾನಗರ ಜಿಲ್ಲೆಗಳ ಅಧ್ಯಕ್ಷರು, ನಗರಪಾಲಿಕೆ ಮಾಜಿ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications