ಕರ್ನಾಟಕದ ಕಾಂಗ್ರೆಸ್ ಸರ್ಕಾರ 3 ತಿಂಗಳಲ್ಲಿ ಪತನವಾಗಲಿದೆ: ಕೆಎಸ್ ಈಶ್ವರಪ್ಪ

ದಾವಣಗೆರೆ, ಜುಲೈ 5: ಇನ್ನು ಮೂರೇ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಅವರ 71ನೇ ಜನ್ಮದಿನದ ಅಂಗವಾಗಿ ಬುಧವಾರ ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಈಶ್ವರಪ್ಪ, ಸುಳ್ಳು ಭರವಸೆ ನೀಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕದಲ್ಲೂ ಪ್ರಮುಖ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಭವಿಷ್ಯ ನುಡಿದಿದ್ದಾರೆ.

Congress government in Karnataka will fall in 3 months: KS Eshwarappa

ಎನ್‌ಸಿಪಿ ನಾಯಕ ಅಜಿತ್ ಪವಾರ್ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರಿಂದ ಕೆಲವು ಕಾಂಗ್ರೆಸ್ ನಾಯಕರು ಪಕ್ಷವನ್ನು ತೊರೆಯಲಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆಯಸ್ಸು ಮೂರು ತಿಂಗಳಿಗಿಂತ ಹೆಚ್ಚು ಇರುವುದಿಲ್ಲ. ಮುಂದಿನ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಹಲವು ಬೆಳವಣಿಗೆಗಳು ನಡೆಯಲಿವೆ ಎಂದು ಕಾದು ನೋಡಿ ಎಂದರು.

ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬದ ಬಗ್ಗೆ ಪ್ರಶ್ನಿಸಿದಾಗ, ಈಶ್ವರಪ್ಪ ಪಕ್ಷವು ಎಲ್‌ಒಪಿಗೆ ಕರೆ ಮಾಡಲಿದೆ ಮತ್ತು ಶೀಘ್ರದಲ್ಲೇ ರಾಜ್ಯ ಬಿಜೆಪಿ ಘಟಕಕ್ಕೆ ಹೊಸ ಮುಖ್ಯಸ್ಥರನ್ನು ನೇಮಿಸುತ್ತದೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ಎರಡೂ ಸ್ಥಾನಗಳಿಗೆ ಸಮರ್ಥ ನಾಯಕನನ್ನು ಆಯ್ಕೆ ಮಾಡಲಿದೆ ಎಂದು ಈಶ್ವರಪ್ಪ ಹೇಳಿದರು.

ರಾಜ್ಯದಲ್ಲಿ ಜನರಿಗೆ ಚುನಾವಣಾ ಪೂರ್ವದಲ್ಲಿ ಕೊಟ್ಟ ನಿಮ್ಮ ಗ್ಯಾರಂಟಿಗಳಿಂದಾಗಿ ಯಾಕಾದರೂ ಈ ಕಾಂಗ್ರೆಸ್‌ಗೆ ಮತ ನೀಡಿದೆವೋ ಎಂದು ರಾಜ್ಯದ ಜನರು ಶಾಪ ಹಾಕುತ್ತಿದ್ದಾರೆ. ಕರ್ನಾಟಕದ ನಿರುದ್ಯೋಗಿ ಪದವೀಧರರಿಗೆ ಕಾಂಗ್ರೆಸ್‌ ಮಾಡಿದ ಮೋಸವನ್ನು ಇಡೀ ದೇಶದ ಯುವಕರು ನೋಡುತ್ತಿದ್ದಾರೆ. ಉದ್ಯೋಗ ಸಿಗುವ ವರೆಗೂ ಕಾಂಗ್ರೆಸ್‌ ನೆರವು ನೀಡಲಿದೆಯೇನೋ ಎನ್ನುವ ರೀತಿಯಲ್ಲಿ ಗೌರವ ಪೂರ್ವಕವಾಗಿ ನೋಡಲಾಗುತ್ತಿತ್ತು. ಆದರೆ, ನಾವು ಎಲ್ಲ ನಿರುದ್ಯೋಗಿ ಪದವೀಧರರಿಗೆ ಪ್ರೋತ್ಸಾಹಧನ ನೀಡುವುದಿಲ್ಲ, 2022-23ರಲ್ಲಿ ಪಾಸಾಗಿರಬೇಕು. ಆರು ತಿಂಗಳು ನಿರುದ್ಯೋಗಿಗಳಾಗಿರಬೇಕು ಎಂದು ಷರತ್ತು ವಿಧಿಸಿದ್ದಾರೆ. ಹಾಗಾದರೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಮತ ನೀಡಿದವರ ಕತೆ ಏನು ಎಂದು ಪ್ರಶ್ನಿಸಿದರು.

ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಪ್ರಕಾರ ಜುಲೈ 7 ರಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮಂಡನೆ ಮಾಡುವ ಬಜೆಟ್‌ನಲ್ಲಿ ನಿರುದ್ಯೋಗಿ ಪದವೀಧರರಿಗೆ ಪರಿಹಾರವನ್ನು ನೀಡಬೇಕು. ಇಲ್ಲದಿದ್ದರೆ ನಿರುದ್ಯೋಗಿ ಪದವೀಧರರನ್ನು ಸಂಘಟಿಸಿ, ಬಿಜೆಪಿ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾವುದು ಎಂದು ಎಚ್ಚರಿಕೆ ನೀಡಿದರು.

ಮಾಜಿ ಸಚಿವ ಎನ್‌ ಮಹೇಶ್‌ ಮಾತನಾಡಿ, ಕಳೆದ 75 ವರ್ಷಗಳಲ್ಲಿ 60 ವರ್ಷ ದೇಶದಲ್ಲಿ ಕಾಂಗ್ರೆಸ್‌ ಆಡಳಿತ ನಡೆಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಹೇಗೆ ಬಡವರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೆ ಬಂದ್ರೋ, ಹಾಗೇ ಹಿಂದಿನ 60 ವರ್ಷದಲ್ಲಿಯೂ ಕಾಂಗ್ರೆಸ್‌ ಮಾಡಿದೆ. ಬಡವರನ್ನು ಬಡವರಾಗಿಯೇ ಇಟ್ಟು, ಬಡತನದ ಹೆಸರಿನಲ್ಲಿ ಮತಗಳಿಕೆ ಮಾಡುವ ಕೆಲಸ ಮಾಡಿದ್ದಾರೆ. ಜೊತೆಗೆ ಸುಳ್ಳು ಹೇಳುವುದೇ ಇವರ ರೀತಿ ನೀತಿ ಎಂದು ಆರೋಪ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+