ಕಾಂಗ್ರೆಸ್ ಸರ್ಕಾರಕ್ಕೆ ಡಿಎಂಕೆ ಇಂಡಿಯಾ ಬಣದಿಂದ ಹೊರಬರುವ ಆತಂಕ: ವಾಟಾಳ್ ನಾಗರಾಜ್
ಬೆಂಗಳೂರು, ಅಕ್ಟೋಬರ್ 11: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಂಘಟನೆಯ ಸದಸ್ಯರು ಬುಧವಾರ ರಾಜಭವನ ಘೇರಾವ್ ಪ್ರತಿಭಟನೆ ನಡೆಸಿದರು.
ಕಾವೇರಿ ನೀರು ನಿರ್ವಹಣಾ ಮಂಡಳಿಯ ನಿರ್ದೇಶನವನ್ನು ವಿರೋಧಿಸಿ ಕರ್ನಾಟಕ ಸರ್ಕಾರವು ನೆರೆಯ ತಮಿಳುನಾಡಿಗೆ ನೀರು ಹಂಚಿಕೆ ಮಾಡುವಂತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ''ಕಾವೇರಿ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮೌನವಾಗಿದ್ದು, ತಮಿಳುನಾಡಿನಲ್ಲಿ (ಎಂಕೆ) ಸ್ಟಾಲಿನ್ ಸರ್ಕಾರವು ಡಿಎಂಕೆಯನ್ನು ಇಂಡಿಯಾ ಬಣದಿಂದ ಹಿಂದೆಗೆದುಕೊಳ್ಳಬಹುದು ಎಂಬ ಭಯದಲ್ಲಿದೆ ಮತ್ತು ಆದ್ದರಿಂದ ನೆರೆಯ ರಾಜ್ಯಕ್ಕೆ ಕಾವೇರಿ ನೀರು ಬಿಡಲು ಒಪ್ಪಿಗೆ ನೀಡಿದೆ ಎಂದರು.
ಈ ಸರ್ಕಾರವು ಹೀಗೆ ನೀರು ಬಿಡುವುದನ್ನು ಮುಂದುವರೆಸಿದರೆ, ಬೆಂಗಳೂರಿನ ಜನರಿಗೆ ಶೀಘ್ರದಲ್ಲೇ ನೀರು ಇರಲ್ಲ. ಈಗಲೇ ರೈತರು ತಮ್ಮ ಹೊಲಗಳಿಗೆ ನೀರುಣಿಸಲು ನೀರಿಲ್ಲದೆ ಪರದಾಡುತ್ತಾರೆ. ಹೀಗಾಗಿ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಶೀಘ್ರವಾಗಿ ನಿಲ್ಲಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಅವರು ಹೇಳಿದರು.
ತಮಿಳುನಾಡಿನಲ್ಲಿ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್ ಮಾತನಾಡಿ, ಕರ್ನಾಟಕವು ಕಾವೇರಿಯಿಂದ ನೀರನ್ನು ಬಿಡುಗಡೆ ಮಾಡಬೇಕು. ಯಾವುದೇ ರಾಜ್ಯವು ನದಿಯ ಏಕೈಕ ಮಾಲೀಕತ್ವವನ್ನು ಪಡೆಯಲು ಸಾಧ್ಯವಿಲ್ಲ. ಅವರು ಕಾವೇರಿ ಮಂಡಳಿಯ ಆದೇಶವನ್ನು ಪಾಲಿಸಬೇಕು. ಅಂತರಾಷ್ಟ್ರೀಯವಾಗಿ ಒಪ್ಪಿಕೊಂಡಿರುವ ಒಪ್ಪಂದದ ಪ್ರಕಾರ ಪೂರೈಕೆ ನದಿಯ ತಗ್ಗು ಪ್ರದೇಶಗಳಿಗೆ ನೀರು ಕೊಡಲು ನಿರಾಕರಿಸುವಂತಿಲ್ಲ.
ಡಿಎಂಕೆ ಮತ್ತು ಕಾಂಗ್ರೆಸ್ ನಡುವೆ ಒಡಕು ಮೂಡಿಸಲು ಬಿಜೆಪಿ ಬಯಸಿದೆ. ಇದು ಎರಡು ರಾಜ್ಯಗಳ ನಡುವಿನ ವಿಚಾರ ಮತ್ತು ಎರಡು ಪಕ್ಷಗಳ ನಡುವಿನ ರಾಜಕೀಯ ವಿವಾದವನ್ನಾಗಿ ಪರಿವರ್ತಿಸಲು ಬಿಜೆಪಿ ಬಯಸಿದೆ. ಕೇಂದ್ರ ಜಲ ಆಯೋಗ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನೀರು ಬಿಡುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಪಾಲಿಸಿದ ಕರ್ನಾಟಕವು ತಮಿಳುನಾಡಿಗೆ 3,000 ಕ್ಯೂಸೆಕ್ ಕಾವೇರಿ ನೀರನ್ನು ಬಿಡುತ್ತಿದೆ. ಪ್ರಾಧಿಕಾರವು ಮತ್ತೆ ಸಭೆ ಸೇರುವ ಅಕ್ಟೋಬರ್ 15 ರವರೆಗೆ ಆದೇಶ ಜಾರಿಯಲ್ಲಿರುತ್ತದೆ. ಮಂಗಳವಾರ ಬೆಂಗಳೂರು ಗ್ರಾಮಾಂತರದ ಹೊಸಕೋಟೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನಾಕಾರರು ಹೊಸಕೋಟೆ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ತಮಿಳುನಾಡಿಗೆ ಆಂಧ್ರಪ್ರದೇಶಕ್ಕೆ ಸಂಪರ್ಕ ತಡೆದಿದ್ದರು.
ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಕೆಲ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿತ್ತು. ಇದಕ್ಕೂ ಮುನ್ನ ಅಕ್ಟೋಬರ್ 5 ರಂದು ಕಾವೇರಿ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಸದಸ್ಯರನ್ನು ಮಂಡ್ಯ ಪೊಲೀಸರು ವಶಕ್ಕೆ ಪಡೆದಿದ್ದರು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಸುದೀರ್ಘ ಹಗ್ಗಜಗ್ಗಾಟ ನಡೆಸಿವೆ. ಈ ನದಿಯು ಎರಡು ರಾಜ್ಯಗಳ ಜನರಿಗೆ ಜೀವನಾಧಾರದ ಪ್ರಮುಖ ಮೂಲವಾಗಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications