ಬಿತ್ತನೆ ಬೀಜದ ದರ ಶೇ.60ರಷ್ಟು ಹೆಚ್ಚಳ; 'ಕೃಷಿ ಸಚಿವರೇ.. ಎಲ್ಲಿದ್ದೀರಪ್ಪ?'
ಬೆಂಗಳೂರು, ಮೇ 28: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಉತ್ತಮ ಮಳೆಯಾಗುತ್ತಿದೆ. ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಆದರೆ ಬಿತ್ತನೆ ಬೀಜಗಳ ದರ ಮಾತ್ರ ಗಗನಕ್ಕೇರಿದ್ದು ಶೇ. 60 ರಷ್ಟು ಬೆಲೆ ಹೆಚ್ಚಳವಾಗಿದೆ.
ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ತಿಂಗಳ ಮುಂಚಿತವಾಗಿಯೇ ಮಳೆಯ ಮೂನ್ಸೂಚನೆ ದೊರೆತಿದ್ದು ವಿವಿಧ ಕಡೆ ರೈತರು ಮುಂಗಾರು ಬಿತ್ತನೆಗೆ ಸಜ್ಜಾಗುತ್ತಿದ್ದಾರೆ. ಕಳೆದ ವರ್ಷ ಮಳೆ ಕೊರತೆಯಿಂದ ಬೀಜೋತ್ಪನ್ನ ಪ್ರಮಾಣ ತೀವ್ರ ಕಡಿಮೆಯಾಗಿತ್ತು. ಇದರ ಪರಿಣಾಮ ಈ ವರ್ಷ ಬೀಜಗಳ ಬೆಲೆ ಮಾತ್ರ ರೈತರಿಗೆ ಕೈಗೆಟಕುವ ದರದಲ್ಲಿ ದೊರೆಯುವುದು ಕಷ್ಟಕರವಾಗಿದೆ. ಬಿತ್ತನೆ ಬೀಜದ ದರ ಶೇ 60 ರಷ್ಟು ಹೆಚ್ಚಳದ ಕುರಿತು ಜೆಡಿಎಸ್ ರಾಜ್ಯ ಘಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಪಂಚ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡಿದೆ ಎಂದು ಬೀಗುವ ಕಾಂಗ್ರೆಸ್ ಸರಕಾರ ಮಾಡಿರುವ ಘನಕಾರ್ಯ ಇದು. ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ ಮಾಡುತ್ತಿರುವ ಘನಕಾರ್ಯವಿದು! ಕೊಟ್ಟ ಹಾಗೆ ಕೊಟ್ಟು ಜನರಿಗೆ ಗೊತ್ತೇ ಆಗದಂತೆ ಜೇಬಿಗೆ ಕೈ ಹಾಕಿ ಪಿಕ್ ಪಾಕೆಟ್ ಮಾಡುತ್ತಿರುವ ಕಿಡಿಗೇಡಿ ಕೆಲಸ ಇದು ಎಂದು ಕಿಡಿಕಾರಿದೆ.
•ಬಿತ್ತನೆ ಬೀಜದ ದರ ಶೇ.60ರಷ್ಟು ಹೆಚ್ಚಳ•
— Janata Dal Secular (@JanataDal_S) May 28, 2024
ಪಂಚ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡಿದೆ ಎಂದು ಬೀಗುವ @INCKarnataka ಸರಕಾರ ಮಾಡಿರುವ ಘನಕಾರ್ಯ ಇದು.
ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ ಮಾಡುತ್ತಿರುವ ಘನಕಾರ್ಯವಿದು! ಕೊಟ್ಟ ಹಾಗೆ ಕೊಟ್ಟು ಜನರಿಗೆ ಗೊತ್ತೇ ಆಗದಂತೆ ಜೇಬಿಗೆ ಕೈ ಹಾಕಿ ಪಿಕ್ ಪಾಕೆಟ್… pic.twitter.com/bYOpL6rrCA
ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಲಭ್ಯವಿದ್ದ ಬಿತ್ತನೆ ಬೀಜದ ಬೆಲೆ ಏರಿಕೆಯಾದ ಪರಿಣಾಮ, ಮುಕ್ತ ಮಾರುಕಟ್ಟೆಯಲ್ಲಿಯೂ ದರ ದುಪ್ಪಟ್ಟಾಗಿದೆ. ತಕ್ಷಣವೇ ಸರಕಾರ ಬಿತ್ತನೆ ಬೀಜದ ದರ ಇಳಿಕೆಗೆ ಕ್ರಮ ಕೈಗೊಳ್ಳಬೇಕು ಮತ್ತು ಮುಕ್ತ ಮಾರುಕಟ್ಟೆಯಲ್ಲಿ ದರ ಏರಿಕೆಗೆ ನಿಯಂತ್ರಣ ವಿಧಿಸಬೇಕು. ಕೃಷಿ ಸಚಿವರೇ.. ಎಲ್ಲಿದ್ದೀರಪ್ಪ? ಎಂದು ಜೆಡಿಎಸ್ ರಾಜ್ಯ ಘಟಕ ಪ್ರಶ್ನಿಸಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications