ಬಿತ್ತನೆ ಬೀಜದ ದರ ಶೇ.60ರಷ್ಟು ಹೆಚ್ಚಳ; 'ಕೃಷಿ ಸಚಿವರೇ.. ಎಲ್ಲಿದ್ದೀರಪ್ಪ?'

ಬೆಂಗಳೂರು, ಮೇ 28: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಉತ್ತಮ ಮಳೆಯಾಗುತ್ತಿದೆ. ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಆದರೆ ಬಿತ್ತನೆ ಬೀಜಗಳ ದರ ಮಾತ್ರ ಗಗನಕ್ಕೇರಿದ್ದು ಶೇ. 60 ರಷ್ಟು ಬೆಲೆ ಹೆಚ್ಚಳವಾಗಿದೆ.

ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ತಿಂಗಳ ಮುಂಚಿತವಾಗಿಯೇ ಮಳೆಯ ಮೂನ್ಸೂಚನೆ ದೊರೆತಿದ್ದು ವಿವಿಧ ಕಡೆ ರೈತರು ಮುಂಗಾರು ಬಿತ್ತನೆಗೆ ಸಜ್ಜಾಗುತ್ತಿದ್ದಾರೆ. ಕಳೆದ ವರ್ಷ ಮಳೆ ಕೊರತೆಯಿಂದ ಬೀಜೋತ್ಪನ್ನ ಪ್ರಮಾಣ ತೀವ್ರ ಕಡಿಮೆಯಾಗಿತ್ತು. ಇದರ ಪರಿಣಾಮ ಈ ವರ್ಷ ಬೀಜಗಳ ಬೆಲೆ ಮಾತ್ರ ರೈತರಿಗೆ ಕೈಗೆಟಕುವ ದರದಲ್ಲಿ ದೊರೆಯುವುದು ಕಷ್ಟಕರವಾಗಿದೆ. ಬಿತ್ತನೆ ಬೀಜದ ದರ ಶೇ 60 ರಷ್ಟು ಹೆಚ್ಚಳದ ಕುರಿತು ಜೆಡಿಎಸ್‌ ರಾಜ್ಯ ಘಟಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

Congress Government JDS lashed out at 60 increase in the price of sowing seeds

ಪಂಚ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡಿದೆ ಎಂದು ಬೀಗುವ ಕಾಂಗ್ರೆಸ್‌ ಸರಕಾರ ಮಾಡಿರುವ ಘನಕಾರ್ಯ ಇದು. ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ ಮಾಡುತ್ತಿರುವ ಘನಕಾರ್ಯವಿದು! ಕೊಟ್ಟ ಹಾಗೆ ಕೊಟ್ಟು ಜನರಿಗೆ ಗೊತ್ತೇ ಆಗದಂತೆ ಜೇಬಿಗೆ ಕೈ ಹಾಕಿ ಪಿಕ್ ಪಾಕೆಟ್ ಮಾಡುತ್ತಿರುವ ಕಿಡಿಗೇಡಿ ಕೆಲಸ ಇದು ಎಂದು ಕಿಡಿಕಾರಿದೆ.

ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಲಭ್ಯವಿದ್ದ ಬಿತ್ತನೆ ಬೀಜದ ಬೆಲೆ ಏರಿಕೆಯಾದ ಪರಿಣಾಮ, ಮುಕ್ತ ಮಾರುಕಟ್ಟೆಯಲ್ಲಿಯೂ ದರ ದುಪ್ಪಟ್ಟಾಗಿದೆ. ತಕ್ಷಣವೇ ಸರಕಾರ ಬಿತ್ತನೆ ಬೀಜದ ದರ ಇಳಿಕೆಗೆ ಕ್ರಮ ಕೈಗೊಳ್ಳಬೇಕು ಮತ್ತು ಮುಕ್ತ ಮಾರುಕಟ್ಟೆಯಲ್ಲಿ ದರ ಏರಿಕೆಗೆ ನಿಯಂತ್ರಣ ವಿಧಿಸಬೇಕು. ಕೃಷಿ ಸಚಿವರೇ.. ಎಲ್ಲಿದ್ದೀರಪ್ಪ? ಎಂದು ಜೆಡಿಎಸ್‌ ರಾಜ್ಯ ಘಟಕ ಪ್ರಶ್ನಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+