Get Updates
Get notified of breaking news, exclusive insights, and must-see stories!

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಪರಿಶೀಲಿಸಲಾಗುತ್ತದೆ: ಸರ್ಕಾರ

ಬೆಂಗಳೂರು, ಮೇ. 24: ಆಮ್ನೆಸ್ಟಿ ಇಂಡಿಯಾ ನಿಷೇಧವನ್ನು ಹಿಂಪಡೆಯಲು ಕೋರಿದ ನಂತರ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯುವ ಬಗ್ಗೆ ಪರಿಶೀಲಿಸುವುದಾಗಿ ಹೇಳಿದೆ. ಹಿಜಾಬ್, ಹಲಾಲ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರು ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ತಕ್ಷಣವೇ ಹಿಂಪಡೆಯುವುದು ಸೇರಿದಂತೆ ಮಾನವ ಹಕ್ಕುಗಳಿಗಾಗಿ ಮೂರು ಆದ್ಯತೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆಮ್ನೆಸ್ಟಿ ಇಂಡಿಯಾ ಮಂಗಳವಾರ ಸರಣಿ ಟ್ವೀಟ್‌ಗಳಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿತ್ತು.

Congress government reaction on revoking hijab ban

ಪ್ರಸ್ತುತ ಜಾರಿಯಲ್ಲಿರುವ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವುದರ ಕುರಿತು, ಕರ್ನಾಟಕದ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಜಿ ಪರಮೇಶ್ವರ ಅವರು ಭವಿಷ್ಯದಲ್ಲಿ ಸರ್ಕಾರವು ಅದನ್ನು ನೋಡಿಕೊಳ್ಳುತ್ತದೆ ಎಂದು ಬುಧವಾರ ಮಾಹಿತಿ ನೀಡಿದ್ದಾರೆ. "ನಾವು ಏನು ಮಾಡಬಲ್ಲೆವು ಎಂಬುದನ್ನು ಭವಿಷ್ಯದಲ್ಲಿ ನಾವು ನೋಡುತ್ತೇವೆ. ಇದೀಗ, ನಾವು ಕರ್ನಾಟಕದ ಜನರಿಗೆ ನೀಡಿದ ಐದು ಗ್ಯಾರಂಟಿಗಳನ್ನು ಈಡೇರಿಸಬೇಕಾಗಿದೆ" ಎಂದು ಪರಮೇಶ್ವರ ಅವರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಸರ್ಕಾರದ ನಿಲುವನ್ನು ಪುನರುಚ್ಚರಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಇದು ನೀತಿ ವಿಷಯವಾಗಿದೆ ಮತ್ತು ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಕಾನೂನು ಮಾರ್ಗಗಳನ್ನು ಅನ್ವೇಷಿಸುತ್ತದೆ ಎಂದು ಹೇಳಿದ್ದಾರೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಶಾಲಾ - ಕಾಲೇಜುಗಳಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿದೆ ಮತ್ತು ಹಿಜಾಬ್ ಧರಿಸಲು ಯಾವುದೇ ವಿನಾಯಿತಿ ನೀಡುವುದಿಲ್ಲ ಎಂದು ಆದೇಶ ಹೊರಡಿಸಿತ್ತು. ಇದಾದ ನಂತರ ಕರ್ನಾಟಕದಲ್ಲಿ ಹಿಜಾಬ್ ವಿವಾದ ಸ್ಫೋಟಗೊಂಡಿತ್ತು. ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು.

Congress government reaction on revoking hijab ban

ಕರ್ನಾಟಕ ಹೈಕೋರ್ಟ್ ನಿರ್ಧಾರವನ್ನು ಮುಸ್ಲಿಂ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅಂತಿಮ ತೀರ್ಪು ಹೊರಬರುವವರೆಗೆ ತರಗತಿಗಳಿಗೆ ಹಾಜರಾಗಲು ನಿರಾಕರಿಸಿದರು. ಈ ವಿಷಯ ಪ್ರಸ್ತುತ ಉನ್ನತ ನ್ಯಾಯಾಲಯದಲ್ಲಿದೆ. ವಿರೋಧ ಪಕ್ಷಗಳ ನಾಯಕರು ಇದಕ್ಕೆ ಭಾರಿ ವಿರೋಧ ವ್ಯಕ್ತಪಡಿಸಿದ್ದರು.

ಕಾಂಗ್ರೆಸ್ ಶಾಸಕ ಎನ್‌ಎ ಹ್ಯಾರಿಸ್ ಹಿಜಾಬ್ ನಿಷೇಧವನ್ನು ಅಸಂವಿಧಾನಿಕ ಎಂದು ಕರೆದಿದ್ದಾರೆ. ಏನನ್ನು ಧರಿಸಬೇಕೆಂದು ನಿರ್ಧರಿಸಲು ವೈಯಕ್ತಿಕ ಸ್ವಾತಂತ್ರ್ಯ ಹಕ್ಕು ಎಂದಿದ್ದಾರೆ. "ಸರ್ಕಾರವು ವೈಯಕ್ತಿಕ ಸ್ವಾತಂತ್ರ್ಯದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ, ಬಿಜೆಪಿ ಹಾಗೆ ಮಾಡಿದ್ದರೆ, ಅದು ಅಸಂವಿಧಾನಿಕ. ನಾವು ಸಂವಿಧಾನವನ್ನು ಎತ್ತಿಹಿಡಿಯಲು ಇಲ್ಲಿದ್ದೇವೆ" ಎಂದು ಹೇಳಿದ ಎನ್‌ಎ ಹ್ಯಾರಿಸ್ ತಿಳಿಸಿದ್ದು, ಈ ವಿಷಯದ ಬಗ್ಗೆ ಯಾವುದೇ ಮುಂದಿನ ಕ್ರಮವನ್ನು ಸಾಂವಿಧಾನಿಕ ಗಡಿಯೊಳಗೆ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಎಐಎಂಐಎಂನ ಅಸಾದುದ್ದೀನ್ ಓವೈಸಿ ಕೂಡ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ಕರೆ ನೀಡಿದ್ದು, ಇದು ಸಾಂಸ್ಕೃತಿಕ ಹಕ್ಕುಗಳ ಉಲ್ಲಂಘನೆ ಎಂದು ಕರೆದಿದ್ದಾರೆ. ಆದರೆ, ಹಿಜಾಬ್ ನಿಷೇಧವನ್ನು ಹಿಂಪಡೆಯುವ ಯಾವುದೇ ಕ್ರಮವನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಸ್ಪಷ್ಟಪಡಿಸಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ನಾವು ವಿರೋಧಿಸುತ್ತೇವೆ ಎಂದು ಬಿಜೆಪಿಯ ಹಿರಿಯ ಮುಖಂಡ ಆರ್.ಅಶೋಕ್ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+