ವಿವಾದಿತ ಟಿಪ್ಪು ಜಯಂತಿ ಕೈಬಿಟ್ಟ ಕನ್ನಡ ಮತ್ತು ಸಂಸ್ಕೃತಿ ಇಲಾಖೆ; ಯಾವೆಲ್ಲ ಜಯಂತಿಗಳಿವೆ?
ಬೆಂಗಳೂರು, ಮೇ 24: 2023 ಕರ್ನಾಟಕ ವಿಧಾನಸಭೆ ಚುನಾವನೆಯಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳೊಂದಿಗೆ ಬಹುಮತ ಪಡೆದು ಸರ್ಕಾರ ರಚಿಸಿದ್ದರೆ, 66 ಸ್ಥಾನಗಳಲ್ಲಿ ಗೆದ್ದಿರುವ ಬಿಜೆಪಿ ವಿಪಕ್ಷ ಸ್ಥಾನದಲ್ಲಿ ಕುಳಿತಿದೆ.
ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿವಾದಿತ ಟಿಪ್ಪು ಜಯಂತಿ ಆಚರಣೆ ಕೈ ಬಿಟ್ಟಿದೆ.

ಈ ಬಾರಿ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿರುವ ಕಾಂಗ್ರೆಸ್, ಮತ್ತೆ ಟಿಪ್ಪು ಜಯಂತಿ ಆಚರಿಸಿ ವಿವಾದ ಮೈಮೇಲೆ ಎಳೆದುಕೊಳ್ಳದಿರಲು ತೀರ್ಮಾನಿಸಿದಂತಿದೆ. ಕಳೆದ ಬಾರಿ 2013ರಿಂದ 2018ರವರೆಗೆ ಇದ್ದ ಅಧಿಕಾರವಧಿಯಲ್ಲಿ ಟಿಪ್ಪು ಜಯಂತಿ ಆಚರಿಸಿ ರಾಜ್ಯದಲ್ಲಿ ಹಿಂದೂಗಳ ಆಕ್ಷೇಪಕ್ಕೆ ಕಾರಣವಾಗಿದ್ದರು.
2023ರ ಏಪ್ರಿಲ್ನಿಂದ 2024ರ ಮಾರ್ಚ್ ತಿಂಗಳವರೆಗಿನ ಮಹಾಪುರಷರ ಜಯಂತಿ ಹಾಗೂ ಆಚರಣೆ ಕಾರ್ಯಕ್ರಮಗಳ ಒಟ್ಟು 31 ಜಯಂತಿಗಳ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಿಡುಗಡೆ ಮಾಡಿದೆ.

ರಾಜ್ಯ ಸರ್ಕಾರದ ವತಿಯಿಂದ ಆಚರಿಸುವ ಜಯಂತಿಗಳ ಪಟ್ಟಿ ಹಾಗೂ ಆಚರಿಸುವ ದಿನ ಮತ್ತು ಸ್ಥಳವನ್ನು ನಿಗದಿ ಮಾಡಲಾಗಿದೆ. ಅಲ್ಪಸಂಖ್ಯಾತ ನಿಗಮ ಮಂಡಳಿಯಿಂದ ಟಿಪ್ಪು ಜಯಂತಿ ಆಚರಿಸದಿರಲು ನಿರ್ಧರಿಸಲಾಗಿದೆ.
ಮಹಾಪುರುಷರ ಮೊದಲ ರಾಜ್ಯಮಟ್ಟದ ಜಯಂತಿಯನ್ನು ಬೆಂಗಳೂರಿನಲ್ಲಿ ತದನಂತರ ವರ್ಷಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ಆಚರಿಸಲು ಮತ್ತು ರಾಜ್ಯಮಟ್ಟದ ಜಯಂತಿ ಕಾರ್ಯಕ್ರಮಕ್ಕೆ ಆಯಾ ಜಿಲ್ಲಾಧಿಕಾರಿಗಳಿಗೆ 5 ಲಕ್ಷ ರೂ. ಜಿಲ್ಲಾಮಟ್ಟದ ಜಯಂತಿ ಆಚರಣೆಗೆ 50 ಸಾವಿರ ರೂ. ಹಾಗೂ ತಾಲ್ಲೂಕು ಮಟ್ಟದ ಜಯಂತಿಗೆ 20 ಸಾವಿರ ರೂ. ನಿಗದಿಪಡಿಸಿ ಆದೇಶಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಮಾಜ ಸುಧಾರಕರು, ವಚನಕಾರರು, ಧಾರ್ಮಿಕ ಪುರುಷರು, ಪುರಾಣ ಪ್ರಸಿದ್ಧ ವ್ಯಕ್ತಿಗಳು ಸೇರಿದಂತೆ 31 ಮಹಾಪುರುಷರ ಜಯಂತಿಗಳನ್ನು ಆಚರಿಸಲಾಗುತ್ತಿದೆ.
ಮೈಸೂರು ಸಂಸ್ಥಾನವನ್ನಾಳಿದ ಅರಸರಲ್ಲಿ ಟಿಪ್ಪು ಸುಲ್ತಾನ್ ಕೂಡ ಒಬ್ಬರು. ಟಿಪ್ಪು ಜಯಂತಿ ಆಚರಣೆ ಈ ಹಿಂದೆ ರಾಜ್ಯದಲ್ಲಿ ದೊಡ್ಡ ವಿವಾದ ಸೃಷ್ಟಿಸಿತ್ತು. ಟಿಪ್ಪು ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಲಾಗಿತ್ತು. ಇದಕ್ಕೆ ವಿರೋಧವೂ ವ್ಯಕ್ತವಾಗಿತ್ತು. ನಂತರ ಬಂದ ಬಿಜೆಪಿ ಸರ್ಕಾರ ಈ ಆಚರಣೆಗೆ ಬ್ರೇಕ್ ಹಾಕಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications