ಸರ್ಕಾರ ಹಿಜಾಬ್ ನಿಷೇಧ ಸುತ್ತೋಲೆ ಹಿಂಪಡೆಯಲಿದೆ: RSS ನಿಷೇಧದ ಎಚ್ಚರಿಕೆ ಕೊಟ್ಟ ಪ್ರಿಯಾಂಕ್ ಖರ್ಗೆ
ಬೆಂಗಳೂರು, ಮೇ 25: ರಾಜ್ಯದಲ್ಲಿ ಹಿಂಜಾಬ್ ನಿಷೇಧದ ಸುತ್ತೋಲೆಯನ್ನು ಹಿಂಪಡೆಯಲಿರುವ ಕಾಂಗ್ರೆಸ್ ಪಕ್ಷವು, ಶಾಂತಿ ಕದಡುವ ಪ್ರಯತ್ನಿಸಿದರೆ ಅದು ಭಜರಂಗದಳವೇ ಆಗಲಿ, ಸಂಘ ಪರಿಹಾರವೇ (RSS) ಆಗಲಿ ಗಂಭೀರವಾಗಿ ಪರಿಗಣಿಸುತ್ತೇವೆ. ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ನಿಷೇಧ ಸಹ ಮಾಡಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ಹಿಜಾಬ್ ನಿಷೇಧ ಕುರಿತು ಬುಧವಾರ ಮಾತನಾಡಿದ ಅವರು, ಕರ್ನಾಟಕದ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದರು.

ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳವೇ ಆಗಲಿ ಅಂತಹ ಸಂಘಟನೆಗಳನ್ನು ಕಾಂಗ್ರೆಸ್ ಸರ್ಕಾರ ನಿಷೇಧಿಸಲಿದೆ. ನಾವು ಕರ್ನಾಟಕವನ್ನು ಸ್ವರ್ಗವನ್ನಾಗಿ ಮಾಡುವುದಾಗಿ ನಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ. ಶಾಂತಿ ಕದಡಿದರೆ, ಕಾನೂನು ಉಲ್ಲಂಘಿಸಿದರೆ ಅದು ಭಜರಂಗದಳ ಅಥವಾ ಯಾವುದೇ ಸಂಘ ಪರಿವಾರವೇ (RSS) ಆದರೂ ಬಿಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದ್ದಾರೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಕಳೆದ ನಾಲ್ಕು ವರ್ಷಗಳಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಸಮಾಜದಲ್ಲಿ ಮುಕ್ತವಾಗಿ ವಿಹರಿಸುತ್ತಿವೆ. ಇದರಿಂದ ಸಮಾಜಕ್ಕೆ ತೊಂದರೆ ಆದಲ್ಲಿ, ಕೋಮದ್ವೇಷ ಸೃಷ್ಟಿ, ಕಾನೂನು ಉಲ್ಲಂಘಿಸಿದಲ್ಲಿ ಕ್ರಮ ಜರುಗಿಸುತ್ತೇವೆ. ಶಾಂತಿ ಕಾಪಾಡುವ ಸಂಬಂಧ ಕಾಂಗ್ರೆಸ್ ಕೈಗೊಳ್ಳುವ ಕ್ರಮಗಳು ಬಿಜೆಪಿಗೆ ಸ್ವೀಕಾರ್ಹವಾಗದಿದ್ದಲ್ಲಿ ಅವರು ಬೇಕಾದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಪ್ರಿಯಾಂಕ್ ಖರ್ಗೆ ಗುಡುಗಿದರು.
ಇದಷ್ಟೇ ಅಲ್ಲದೇ ಬಿಜೆಪಿ ಸರ್ಕಾರ ಹಿಂದೆ ರಾಜ್ಯದಲ್ಲಿ ಜಾರಿಗೊಳಿಸಿದ್ದ ಗೋಹತ್ಯೆ ಮತ್ತು ಮತಾಂತರ ನಿಷೇಧ ಕಾನೂನುಗಳು ಸೇರಿದಂತೆ ಎಲ್ಲಾ ಕಾನೂನುಗಳ ಹಿಜಾಬ್ ಆದೇಶ ಮತ್ತು ಪಠ್ಯಪುಸ್ತಕಗಳ ಪರಿಷ್ಕರಣೆ ಬಗ್ಗೆ ಕಾಂಗ್ರೆಸ್ ಪರಿಶೀಲಿಸುತ್ತದೆ.

ಈ ಮೇಲಿನ ಕಾಯ್ದೆ, ಕಾನೂನು ಮತ್ತು ಆದೇಶಗಳಲ್ಲಿ ವಿವಾದಾಸ್ಪದ, ಕೋಮುವಾದ ಇಲ್ಲವೇ ಸಾಮಾಜಿಕ ರಚನೆಗೆ, ರಾಜ್ಯದ ಶಾಂತಿಯ ವಿರುದ್ಧವಿವೆ ಎಂಬುದು ಕಂಡು ಬಂದಲ್ಲಿ ಅವುಗಳನ್ನು ರದ್ದುಗೊಳಿಸುವ ಬಗ್ಗೆ ಚಿಂತನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.
ಸರ್ಕಾರದ ನಿರ್ಧಾರ ಎತ್ತಿ ಹಿಡಿದಿದ್ದ ಕೋರ್ಟ್
ಕಳೆದ 2021ರಲ್ಲಿ ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆರು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸಲು ಅನುಮತಿ ನೀಡಲಿಲ್ಲ. ಅಲ್ಲಿಂದ ಶುರುವಾರ ಹಿಜಾಬ್ ವಿವಾದ ಅದೇ ವರ್ಷ ಡಿಸೆಂಬರ್ನಲ್ಲಿ ಪ್ರತಿಭಟನೆ ಸ್ವರೂಪ ಪಡೆಯಿತು. ರಾಜ್ಯಾದ್ಯಂತ ಹಿಜಾಬ್ ಅಲೆ ಸೃಷ್ಟಿಯಾಗಿ ತೀವ್ರ ಚರ್ಚೆಯನ್ನು ಹುಟ್ಟು ಹಾಕಿತು. ಇದರ ಪರಿಣಾಮ ವಿದ್ಯಾಭ್ಯಾಸ, ಪರೀಕ್ಷೆಗಳ ಮೇಲೂ ಬೀರಿತ್ತು.
ಇದೆಲ್ಲದರ ಬೆಳವಣಿಗೆ ನಂತರ ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕರ್ನಾಟಕದ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಸುತ್ತೋಲೆ ಹೊರಡಿಸಿತ್ತು. ಈ ವಿಚಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications