ಮಹದಾಯಿ ನದಿಯಿಂದ 3.9 TMC ನೀರನ್ನು ಕಾಂಗ್ರೆಸ್ ಸರ್ಕಾರ ಒದಗಿಸಲಿದೆ: ಡಿಕೆಶಿ ಭರವಸೆ
ಬೆಂಗಳೂರು, ಡಿಸೆಂಬರ್ 29: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕ ಭಾಗದ ಜನರ ದಾಹ ನೀಗಿಸಲು ಮಹದಾಯಿ ನದಿಯಿಂದ 3.9 TMC ನೀರನ್ನು ಒದಗಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿಗೆ ಬದ್ಧ. ಉತ್ತರ ಕರ್ನಾಟಕ ಭಾಗದ ಜನರ ದಾಹ ನೀಗಿಸಲು ಮಹದಾಯಿ ನದಿಯಿಂದ 3.9 TMC ನೀರನ್ನು ಒದಗಿಸಲಿದೆ. ಮೊದಲ ಕ್ಯಾಬಿನೆಟ್ ಸಭೆಯಲ್ಲಿ ₹500 ಕೋಟಿ ಅನುದಾನ ನೀಡಲಿದೆ. ಮಹದಾಯಿ ನದಿ ತಿರುವು ಯೋಜನೆಗೆ ನಿಗದಿತ ಸಮಯಕ್ಕೆ ₹3000 ಕೋಟಿ ಬಿಡುಗಡೆ ಮಾಡಲಿದೆ' ಎಂದು ತಿಳಿಸಿದ್ದಾರೆ.
'ಮೇಕೆದಾಟು ಯೋಜನೆಗೆ ಸಾವಿರ ಕೋಟಿ ರೂ. ನೀಡುವುದಾಗಿ ಯಾಮಾರಿಸಿದ ಬಿಜೆಪಿ ಸರ್ಕಾರ ಈಗ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಕಾಂಗ್ರೆಸ್ ನಡೆಸುತ್ತಿರುವ ಹೋರಾಟಕ್ಕೆ ಹೆದರಿ ತರಾತುರಿಯಲ್ಲಿ ಅನುದಾನ ಘೋಷಿಸಿದೆ. ಇದೂ ಕೂಡ ಈ ಹಿಂದೆ ಘೋಷಿಸಿದ 600 ಸುಳ್ಳು ಭರವಸೆಯ ಸರಣಿಯ ಮುಂದುವರಿದ ಭಾಗ' ಎಂದು ಡಿಕೆಶಿ ಆರೋಪಿಸಿದ್ದಾರೆ.

'ಕಳಸಾ ಭಂಡೂರಿ ಯೋಜನೆಯ ಅನುಮೋದನೆಗಾಗಿ ರಚನಾತ್ಮಕ ಯೋಜನಾ ವರದಿಯನ್ನು ನಿರೂಪಿಸಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಾಗೂ ರಾಜ್ಯದ ನೀರಾವರಿ ಸಚಿವರಾದ ಗೋವಿಂದ ಕಾರಜೋಳ ಅವರಿಗೂ ಅನಂತ ಧನ್ಯವಾದಗಳು' ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಕೇಂದ್ರ ಜಲ ಆಯೋಗದ ಹಸ್ತಪ್ರತಿಯನ್ನೂ ಜೋಶಿ ಟ್ವೀಟ್ ಮಾಡಿದ್ದಾರೆ.
ಕಳಸಾ ಬಂಡೂರಿ DPRಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.

'ಕರ್ನಾಟಕಕ್ಕೆ ಅತ್ಯಂತ ಅವಶ್ಯವಾಗಿರುವ ಕಳಸಾ ಬಂಡೂರಿ ಯೋಜನೆಗಾಗಿ ಶ್ರಮಸಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಕೇಂದ್ರ ಮತ್ತು ರಾಜ್ಯದ ಎಲ್ಲ ಸಚಿವರಿಗೆ, ಸಂಸದರಿಗೆ, ನಾಯಕರಿಗೆ, ಶಾಸಕರಿಗೆ ಅನಂತ ಧನ್ಯವಾದಗಳು' ಎಂದು ಹೇಳಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications