ಮೋಸ ಮಾಡಿದ್ದ ಕಾಂಗ್ರೆಸ್ಗೆ ಚುನಾವಣೆ ವೇಳೆ ಲಿಂಗಾಯತರ ಮೇಲೆ ಅಪಾರ ಪ್ರೀತಿ: ಸಿಎಂ ಬೊಮ್ಮಾಯಿ ಕಿಡಿ
ಬಾಗಲಕೋಟೆ, ಏಪ್ರಿಲ್ 18: ಕರ್ನಾಟಕದಲ್ಲಿ ಲಿಂಗಾಯತ ಜಾಗೃತ ಮತದಾರರಿದ್ದು, ಅವರು ಅವರು ಸಕಾಲಕ್ಕೆ ಸೂಕ್ತ ನಿರ್ಧಾರವನ್ನೇ ತೆಗೆದುಕೊಂಡಿದ್ದಾರೆ. ಚುನಾವಣೆ ಬಂದ ಮೇಲೆ ಕಾಂಗ್ರೆಸ್ನ ಲಿಂಗಾತಯರ ಮೇಲೆ ಪ್ರೀತಿ ತೋರಿಸುತ್ತಿದೆ. ಕಾಂಗ್ರೆಸ್ ಲಿಂಗಾಯತರನ್ನೇ ಒಡೆದು ಛಿದ್ರ ಮಾಡಲು ಹೊರಟಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಮಂಗಳವಾರ ನಡೆದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ಹೆಲಿಪ್ಯಾಡ್ ಬಳಿ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು. ಕಾಂಗ್ರೆಸ್ ನ ಒಡೆದು ಆಳುವ ನೀತಿ ಅನಸರಿಸುತ್ತದೆ. ಅದನ್ನು ಯಾರೂ ಎಂದಿಗೂ ಮರೆಯುವಂತಿಲ್ಲ ಎಂದರು.

ಹಿಂದೆ ಲಿಂಗಾಯತರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ವಿರೋಧ ಮಾಡಿತ್ತು. 2009ರಲ್ಲಿ 2ಎ ಸೇರಿಸಲು ವಿರೋಧಿಸಿ, 2016ರಲ್ಲಿ ಅದನ್ನು ತಿರಸ್ಕಾರ ಮಾಡಿದ್ದರು. ನಾವು 2 ಡಿ ವರ್ಗ ರಚನೆ ಮಾಡಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿದೆವು. ಈಗ ಪರೋಕ್ಷವಾಗಿ ಕುಮ್ಮಕ್ಕು ನೀಡಿ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿ ಪ್ರಕರಣ ದಾಖಲಿಸಿದ್ದಾರೆ. ಲಿಂಗಾಯತರ ಪ್ರತಿ ಅಭಿವೃದ್ಧಿಯಲ್ಲೂ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಸಿದ್ದರಾಮಯ್ಯ ಕಾಲದಲ್ಲಿ ಇದ್ದ ಜಿಲೇಬಿ ಫೈಲ್ ಯಾರೂ ಮರೆಯಲ್ಲ ಎಂದು ಅವರು ಲೇವಡಿ ಮಾಡಿದರು.
ಲಿಂಗಾಯತರನ್ನು ಮುಖ್ಯಮಂತ್ರಿ ಆಗಿ ಮಾಡಲಿಲ್ಲ
ಕೃಷ್ಣ ಭಾಗದಲ್ಲಿ ಕಾಂಗ್ರೆಸ್ನಿಂದ ಒಂದು ಎಕರೆ ಭೂಮಿಗೆ ನೀರು ಕೊಡುವುದಕ್ಕೆ ಆಗಲಿಲ್ಲ. ಇಲ್ಲಿ ಯಾವ ರೀತಿಯ ರೈತರಿದ್ದಾರೆ ಎಂಬುದೇ ಗೊತ್ತಿಲ್ಲ. ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಆಡಳಿತಾತ್ಮಕವಾಗಿ ಯಾರಿದ್ದಾರೆ. ಮಂತ್ರಿಮಂಡಲದಲ್ಲಿ ಎಷ್ಟು ಜನರು ಇದ್ದಾರೆ ಎನ್ನುವುದನ್ನು ರಾಜ್ಯದ ಜನರು ಗಮಿನಿಸುತ್ತಾರೆ.
1967ರ ನಂತರ ವೀರೇಂದ್ರ ಪಾಟೀಲರನ್ನು ಬಿಟ್ಟರೆ, ಬೇರೆ ಯಾರು ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಲು ಸಾಧ್ಯವಾಗಿಲ್ಲ. ಅವರನ್ನು ಕೂಡಾ ಅತ್ಯಂತ ಹೀನಾಯವಾಗಿ ನಡೆಸಿಕೊಳ್ಳಲಾಯಿತು. ರಾಜಶೇಖರಮೂರ್ತಿ, ವಿರೂಪಾಕ್ಷಪ್ಪನವರ ಕಥೆ ಏನಾಯಿತು. ಈಗ ಎಸ್. ಆರ್ ಪಾಟೀಲರನ್ನು ಅತ್ಯಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಅವರು ವಿವರಿಸಿದರು.

ಬಿಜೆಪಿ ಯಾರ ಕಪಿಮುಷ್ಠಿಯಲ್ಲಿ ಇಲ್ಲ: ಬೊಮ್ಮಾಯಿ
ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಒಬ್ಬರ ಹಿಡಿತದಲ್ಲಿ ಇಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ನಮ್ಮ ಪಕ್ಷದಲ್ಲಿ ಒಂದು ವ್ಯವಸ್ಥೆ ಇದೆ. ಬಿಜೆಪಿ ಸರ್ವೊಚ್ಚ ನಾಯಕ ಮೋದಿ ನೇತೃತ್ವದಲ್ಲಿ ಪ್ರಜಾಪ್ರಭುತ್ವದ ಮೇಲಿದೆ. ಆರೋಪ ಮಾಡುತ್ತಿರುವವರು ಈ ಹಿಂದೆ ಒಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದರಲ್ಲವೇ? ಎಂದು ಅವರು ಪ್ರಶ್ನಿಸಿದರು.
ಬಾಗಲಕೋಟೆ ಜಿಲ್ಲೆ ಸುತ್ತಮುತ್ತಲಿನ ಭಾಗ ಅಭಿವೃದ್ಧಿಯಾಗಿದ್ದು ಬಿಜೆಪಿ ಪಕ್ಷಯಿಂದ. ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಅಭಿವೃದ್ಧಿ ಮಾಡಿ ಸಾಮಾಜಿಕ ನ್ಯಾಯವನ್ನು ಬಿಜೆಪಿ ಪಕ್ಷ ಕೊಟ್ಟಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾರೇ ಹೋದರು ಯಾವುದೇ ಪರಿಣಾಮ ಆಗುವುದಿಲ್ಲ. ಕರ್ನಾಟಕದಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನದಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದರು.
ಇದೇ ವೇಳೆ ಬಿಜೆಪಿ ಅಭ್ಯರ್ಥಿಗಳ ಪರ ನಟ ಸುದೀಪ್ ಪ್ರಚಾರದ ಬಗ್ಗೆ ರೂಪುರೇಷೆ ಪೂರ್ಣ ಆಗಿಲ್ಲ. ನಾಳೆ ಸುದೀಪ್ ಪ್ರಚಾರದ ಬಗ್ಗೆ ರೂಪುರೇಷೆ ಮಾಡುತ್ತೇವೆ. ಬಳಿಕ ಸುದೀಪ್ ಎಲ್ಲ ಕಡೆಯೂ ಪ್ರಚಾರಕ್ಕೆ ಬರುತ್ತಾರೆ ಎಂದು ಅವರು ತಿಳಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications