ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ: ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಡಿಸೆಂಬರ್ 03: ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಘಡಗಳಲ್ಲಿ ಹಿನ್ನಡೆ ಆಗಿದೆ. ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮ ದ ದೊಡ್ಡ ಪಾತ್ರ ಇದೆ.

ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ . ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು.
ಬಿಜೆಪಿ ಬಿಆರ್ ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು ಕೂಡಾ ನಮ್ಮ ಗೆಲುವಿಗೆ ಕಾರಣ.
ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು ಮುಂದುವರಿಸಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ
ರಾಜಸ್ತಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು ಬದಲಾಯಿಸುವ ಕಾರಣದಿಂದಾಗಿ ಅಶೋಕ್ ಗೆಹ್ಲೋತ್ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ. ರಾಜಸ್ತಾನ ಮತ್ತು ಚತ್ತೀಸ್ ಘಡ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ತಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು ಮುಂದುವರಿಸಿದ್ದಾರೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications