ಸಿದ್ದರಾಮಯ್ಯ ಚಾಮುಂಡೇಶ್ವರಿ ಸ್ಪರ್ಧೆಗೆ ಹೈಕಮಾಂಡ್ ವಿರೋಧ
Recommended Video

ಬೆಂಗಳೂರು, ಏಪ್ರಿಲ್ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರಾ ಎಂಬುದರ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸಿಎಂ ಸ್ಪರ್ಧೆಗೆ ಒಲವು ಹೊಂದಿದ್ದರೆ, ಹೈಕಮಾಂಡ್ ಮಾತ್ರ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.
ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲ್ಲುವುದು ಕಷ್ಟ ಎಂಬ ವರದಿಗಳು ಬರುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳಿಗೆ ಬೇರೆ ಕ್ಷೇತ್ರವನ್ನು ನೀಡಲು ಹೈಕಮಾಂಡ್ ಚಿಂತನೆ ನಡೆಸಿದೆ. ಆದರೆ ಸಿಎಂ ಮಾತ್ರ ತಮ್ಮ ನೆಚ್ಚಿನ ಚಾಮುಂಡೇಶ್ವರಿಯಲ್ಲೇ ಸ್ಪರ್ಧಿಸಲು ಒಲವು ಹೊಂದಿದ್ದು, ಇಲ್ಲಿ ಸ್ಪರ್ಧಿಸುವುದರಿಂದ ಪಕ್ಷಕ್ಕೆ ಲಾಭವಾಗಲಿದೆ ಎಂದು ಹೈಕಮಾಂಡ್ ಗೆ ಮನವರಿಕೆ ಮಾಡುತ್ತಿದ್ದಾರೆ.
ಆದರೆ ವಿರೋಧ ಪಕ್ಷಗಳೆಲ್ಲಾ ಸೇರಿ ಸಿದ್ದರಾಮಯ್ಯರನ್ನು ಸೋಲಿಸಬಹುದು ಎಂಬುದು ಹೈಕಮಾಂಡ್ ನ ಚಿಂತೆಯಾಗಿದೆ. ಅದರಲ್ಲೂ ಜೆಡಿಎಸ್ ನ ಜಿಟಿ ದೇವೇಗೌಡ ಮತದಾರರನ್ನು ದೊಡ್ಡ ಮಟ್ಟಕ್ಕೆ ಸೆಳೆಯುತ್ತಿರುವುದು ಹೈಕಮಾಂಡ್ ಗೆ ತಲೆನೋವಾಗಿದೆ. ಕ್ಷೇತ್ರದಲ್ಲಿ 2.5 ಲಕ್ಷ ಮತದಾರರಿದ್ದು ಇದರಲ್ಲಿ 70,000 ಒಕ್ಕಲಿಗ ಮತಗಳಿವೆ. ದೇವೇಗೌಡರು ಒಕ್ಕಲಿಗರ ಕಣ್ಮಣಿಯಾಗಿ ಕ್ಷೇತ್ರದಲ್ಲಿ ಮೂಡಿ ಬಂದಿರುವುದು ಸಿಎಂ ಗೆಲುವಿಗೆ ತೊಡರುಗಾಲು ಆಗಬಹುದು ಎನ್ನಲಾಗಿದೆ.

ಇದರ ಬದಲು ಹೈಕಮಾಂಡ್ ಬಾಗಲಕೋಟೆ ಜಿಲ್ಲೆಯ ಬದಾಮಿಯಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದೆ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕುರುಬ ಮತದಾರರು ಇರುವುದೇ ಇದಕ್ಕೆ ಕಾರಣ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಆದರೆ ಸಿದ್ದರಾಮಯ್ಯ ಎಸ್.ಎಂ. ಕೃಷ್ಣ ಉದಾಹರಣೆಯನ್ನು ನೀಡಿ ಹೈಕಮಾಂಡ್ ನ್ನು ಎಚ್ಚರಿಸಿದ್ದಾರೆ. 2004ರಲ್ಲಿ ಕೃಷ್ಣ ಮಂಡ್ಯದ ಮದ್ದೂರು ಬಿಟ್ಟು ಚಾಮರಾಜಪೇಟೆ ಸ್ಪರ್ಧಿಸಿದರು ಇದರಿಂದ ಜನರಲ್ಲಿ ಕೆಟ್ಟ ಅಭಿಪ್ರಾಯ ಸೃಷ್ಟಿಯಾಗಿ ಕಾಂಗ್ರೆಸ್ ಸೋಲಬೇಕಾಯಿತು ಎಂದು ಹೇಳಿದ್ದಾರೆ. ಇದೀಗ ಹೈಕಮಾಂಡ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ನಿರ್ಧಾರ ಸೇರಿದಂತೆ ಈ ಕುರಿತು ತೀರ್ಮಾನ ತೆಗೆದುಕೊಳ್ಳಲು ಸಿದ್ದರಾಮಯ್ಯನವರಿಗೆ ಸ್ವಾತಂತ್ರ್ಯ ನೀಡಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications