ಕರ್ನಾಟಕ ಗಲಭೆ ಪೀಡಿತವಾಗಲಿದೆ ಎಂದ ಶಾಗೆ ಕಾಂಗ್ರೆಸ್ ತಿರುಗೇಟು
ಬೆಳಗಾವಿ, ಏಪ್ರಿಲ್ 26: ಕಾಂಗ್ರೆಸ್ ಬಂದರೆ ಕರ್ನಾಟಕವು ಗಲಭೆಗಳಿಂದ ಪೀಡಿತವಾಗಲಿದೆ ಎಂಬ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಬುಧವಾರ ಚುನಾವಣಾ ಪ್ರಚಾರದ ಸಮಯದಲ್ಲಿ ಕನ್ನಡಿಗರಿಗೆ ಶಾ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದೆ.
ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ಮಂಗಳವಾರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಸರ್ಕಾರ ರಚಿಸಿದರೆ ರಾಜ್ಯದ ಅಭಿವೃದ್ಧಿ ರಿವರ್ಸ್ ಗೇರ್ ಆಗಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ವಂಶಾಡಳಿತದ ರಾಜಕೀಯವು ಸಾರ್ವಕಾಲಿಕ ಉತ್ತುಂಗದಲ್ಲಿರುತ್ತದೆ ಮತ್ತು ಕರ್ನಾಟಕವು ಗಲಭೆಗಳಿಂದ ಪೀಡಿತವಾಗಲಿದೆ ಎಂದು ಗೃಹ ಸಚಿವರು ಹೇಳಿದ್ದರು.

ಅಮಿತ್ ಶಾಗೆ ತಿರುಗೇಟು ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದೊಂದು ಬೆದರಿಸುವ ಹೇಳಿಕೆಯಾಗಿದೆ. ಭಾರತದ ಮೊಟ್ಟಮೊದಲ ಗೃಹ ಸಚಿವರಿಂದ ನಿಷೇಧಿಸಲ್ಪಟ್ಟ ಸಂಘಟನೆಯೊಂದಕ್ಕೆ ನಿಷ್ಠರಾಗಿರುವ ಕೇಂದ್ರ ಗೃಹ ಸಚಿವರು ಈಗ ಚುನಾವಣಾ ಪ್ರಚಾರದ ಸಮಯದಲ್ಲಿ ದಿಟ್ಟಿಸಿ ನೋಡಿದಾಗ ಬೆದರಿಕೆ ಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮುಂಬರುವ ಕರ್ನಾಟಕ ಚುನಾವಣೆ ಕೇವಲ ಶಾಸಕರನ್ನು ಆಯ್ಕೆ ಮಾಡಲು ಮಾತ್ರವಲ್ಲದೆ ರಾಜ್ಯದ ಭವಿಷ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕೈಗೆ ಒಪ್ಪಿಸಲು ಮತ ಹಾಕಿ ಎಂದು ಹೇಳಿದ್ದ ಅಮಿತ್ ಶಾ ಅವರ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ಮಂಗಳವಾರ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಶಾ ಅವರ ಹೇಳಿಕೆ 6.5 ಕೋಟಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ವಿರೋಧ ಪಕ್ಷ ಆರೋಪಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದರೆ ಪಿಎಫ್ಐ ನಿಷೇಧ ವಾಪಸ್ ಪಡೆಯುತ್ತಾರೆ. ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕಾಂಗ್ರೆಸ್ ಪಕ್ಷ ಮಾಡಿಲ್ಲ. ಯಾವುದೇ ಪರಿಸ್ಥಿತಿಯಲ್ಲಿಯೂ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ ಎಂದು ಸಹ ಹೇಳಿದ್ದರು.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಸನ್ಮಾನ್ಯ ಗೃಹ ಸಚಿವ ಅಮಿತ್ ಶಾ ಅವರು ಒಂದೋ ತಮ್ಮ ಸುಳ್ಳು ಆರೋಪವನ್ನು ಸಾಬೀತುಪಡಿಸಬೇಕು, ಇಲ್ಲವೇ ತಾವು ಹೇಳಿದ್ದು ಸುಳ್ಳು ಎಂದು ಕ್ಷಮೆ ಕೇಳಬೇಕು. ರಾಜ್ಯದಲ್ಲಿ ಬಿಜೆಪಿ ಪಕ್ಷದ್ದೇ ಸರ್ಕಾರ ಇದೆ. ಯಾವ ಪಿಎಫ್ಐ ಕಾರ್ಯಕರ್ತರ ಮೊಕದ್ದಮೆಗಳನ್ನು ನಮ್ಮ ಸರ್ಕಾರ ವಾಪಾಸ್ ಪಡೆದಿದೆ ಎನ್ನುವುದನ್ನು ಕಡತ ನೋಡಿ ತಿಳಿದುಕೊಳ್ಳಲು ಅಮಿತ್ ಶಾ ಅವರಿಗೇನು ದಾಡಿ? ಸುಮ್ಮನೆ ಸುಳ್ಳು ಉಗುಳುವುದು ಯಾಕೆ?" ಎಂದು ಪ್ರಶ್ನಿಸಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications