'ನಾನು ಇಬ್ಬರ ಹತ್ಯೆ ಮಾಡಿದ್ದೇನೆ. ನನ್ನನ್ನು ಬಂಧಿಸಿ': ಬಿಜೆಪಿ ನಾಯಕರ ಪೋಸ್ಟರ್ ರಿಲೀಸ್ ಮಾಡಿದ ಕಾಂಗ್ರೆಸ್
ಬೆಂಗಳೂರು, ಜನವರಿ 05: ರಾಮ ಜನ್ಮಭೂಮಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದು ವಿಪಕ್ಷ ಬಿಜೆಪಿ ಆಕ್ರೋಶಕ್ಕೆ ಕಾರಣವಾಗಿದೆ. ಕರಸೇವಕನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಿದ್ದು, ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಪಾಲರಿಗೂ ದೂರು ನೀಡಿದೆ.
ರಾಜ್ಯ ಸರ್ಕಾರದ ಈ ನಡೆಯನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಪಕ್ಷದ ನಾಯಕರು ನಾನು ಕರಸೇವಕ ನನ್ನನ್ನೂ ಬಂಧಿಸಿ ಅಭಿಯಾನ ನಡೆಸುತ್ತಿದ್ದಾರೆ. ಬಿಜೆಪಿ ನಾಯಕರ ಈ ಅಭಿಯಾನವನ್ನು ಕಾಂಗ್ರೆಸ್ ಲೇವಡಿ ಮಾಡಿದ್ದು, ಬಿಜೆಪಿ ಮುಖಂಡರ ಫೋಟೋ ಜೊತೆಗೆ ನನ್ನನ್ನು ಬಂಧಿಸಿ ಬೋರ್ಡ್ ನೀಡಿ ವ್ಯಂಗ್ಯವಾಡಿದೆ

ಈ ಬಗ್ಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಮೊದಲು ಮಾಜಿ ಸಚಿವ ಸಿ.ಟಿ ರವಿ ಅವರ ಫೋಟೋ ಜೊತೆಗೆ ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ. ನನ್ನನ್ನು ಬಂಧಿಸಿ ಎನ್ನುವ ಎಡಿಟೆಡ್ ಪೋಸ್ಟರ್ ಹಿಡಿದಿರುವ ಫೋಟೋವನ್ನು ಹಂಚಿಕೊಂಡಿದೆ. ಜೊತೆಗೆ ಕರ್ನಾಟಕದ ಬಿಜೆಪಿ ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು. ಸಿ.ಟಿ ರವಿಯವರೇ ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ? ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಪ್ರಶ್ನಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಫೋಟೋ ಜೊತೆಗೆ ನಾನು ಆರ್ಟಿಜಿಎಸ್ ಮೂಲಕ ಲಂಚ ಪಡೆದಿದ್ದೇನೆ. 40,000 ಕೋಟಿಯ ಅಕ್ರಮದಲ್ಲಿ ಪಾಲುದಾರ ನನ್ನನ್ನು ಬಂಧಿಸಿ ಎನ್ನುವ ಎಡಿಟೆಡ್ ಪೋಸ್ಟರ್ ಹಿಡಿದಿರುವ ಫೋಟೋವನ್ನು ಕಾಂಗ್ರೆಸ್ ಹಂಚಿಕೊಂಡಿದೆ. ಬಿ.ವೈ ವಿಜಯೇಂದ್ರ ಅವರು ಈ ಪೋಸ್ಟರ್ ಹಿಡಿದು ಕುಳಿತರೆ ಸೂಕ್ತ. ಬಿಜೆಪಿಗರೆಲ್ಲರೂ "ನನ್ನನ್ನೂ ಬಂಧಿಸಿ" ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿ ಶಾಸಕ ಸುನೀಲ್ ಕುಮಾರ್ ಫೋಟೋ ಹಂಚಿಕೊಂಡಿರುವ ಕಾಂಗ್ರೆಸ್ ನಾನು ಪರಶುರಾಮ ಮೂರ್ತಿಯ ಕಂಚನ್ನು ಕದ್ದಿದ್ದೇನೆ. ಸರ್ಕಾರಿ ಸಿಮೆಂಟ್ ಕದ್ದಿದ್ದೇನೆ. ನನ್ನನ್ನು ಬಂಧಿಸಿ ಎನ್ನುವ ಎಡಿಟೆಡ್ ಪೋಸ್ಟರ್ ಹಿಡಿದಿರುವ ಫೋಟೋವನ್ನು ಕಾಂಗ್ರೆಸ್ ಹಂಚಿಕೊಂಡಿದೆ. ನನ್ನನ್ನೂ ಬಂಧಿಸಿ ಎನ್ನುತ್ತಿರುವ ಸುನಿಲ್ ಕುಮಾರ್ ಕಾರ್ಕಳ ಅವರೇ, ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೆ? ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕಾಗಿ ಬಂಧಿಸಬೇಕೆ? ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪ್ರತಾಪ್ ಸಿಂಹ ಅವರೇ, ನೀವು ಈ ಪೋಸ್ಟರ್ ಹಿಡಿದು ಕೂರುವ ಧೈರ್ಯ ತೋರಿಸಿ, ನಿಮ್ಮವರೇ ಹೇಳುವ ದಮ್ಮು, ತಾಕತ್ತು ಪ್ರದರ್ಶಿಸಿ ಎಂದಿರುವ ಕಾಂಗ್ರೆಸ್, ನಾನು ಸಂಸತ್ ದಾಳಿಕೋರರಿಗೆ ಪಾಸ್ಕೊಟ್ಟು ಸಹಕರಿಸಿದ್ದೇನೆ. ನನ್ನನ್ನು ಬಂಧಿಸಿ ಎನ್ನುವ ಸಂಸದ ಪ್ರತಾಪ್ ಸಿಂಹ ಎಡಿಟೆಡ್ ಪೋಸ್ಟರ್ ಹಿಡಿದಿರುವ ಫೋಟೋವನ್ನು ಕಾಂಗ್ರೆಸ್ ಹಂಚಿಕೊಂಡಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಜಿಬಿಎ ಚುನಾವಣೆ: ಕರಡು ಮತದಾರರ ಪಟ್ಟಿ ಬಗ್ಗೆರಾಜಕೀಯ ಪ್ರತಿನಿಧಿಗಳ ಆಕ್ಷೇಪಣೆ, ಆಯುಕ್ತರಿಗೆ ಮಹತ್ವದ ಸಲಹೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ












Click it and Unblock the Notifications