Get Updates
Get notified of breaking news, exclusive insights, and must-see stories!

ದೇಶ ವಿಭಜನೆಗೆ ಕಾಂಗ್ರೆಸ್ಸೇ ನೇರ ಕಾರಣ: ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು, ಆಗಸ್ಟ್‌ 14: ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಹೋರಾಡಿದ್ದರು. ಭಾರತ ಭಾರತವಾಗಿ ಉಳಿಯಬೇಕೆಂಬ ಪಣ ತೊಟ್ಟಿದ್ದರು. ಆದರೆ, ಆಗಸ್ಟ್‌ 14ರಂದು ದೇಶ ವಿಭಜನೆ ಆಗಿದ್ದು, ಅದೊಂದು ಕರಾಳ ದಿನ. ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ಪಕ್ಷ ನೇರ ಕಾರಣ ಎಂದು ಮಾಜಿ ಸಚಿವ ಆರ್.ಅಶೋಕ್ ಟೀಕಿಸಿದ್ದಾರೆ.

ಈ ಕುರಿತು ಸೋಮವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಭಾರತ ವಿಭಜನೆಯ ದುರಂತ ಕಥೆಗೆ ಸಂಬಂಧಿಸಿದ ಪ್ರದರ್ಶಿನಿಯ ಉದ್ಘಾಟನೆ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ 76ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ, 14ರ ದೇಶ ಇಬ್ಭಾಗದ ಘಟನೆ ಮೂಲಕ ಸ್ವಾತಂತ್ರ್ಯ ಯೋಧರಿಗೆ ಅಪಮಾನ ಆಗಿದೆ ಎಂದರು.

Congress Is The Direct Reason For The Partition Of The Country Said R Ashok

ನೆಹರೂರವರ ನೇತೃತ್ವದ ಕಾಂಗ್ರೆಸ್ ಹುನ್ನಾರದ ಪರಿಣಾಮವಾಗಿ ಜಿನ್ನಾ ಅವರ ಮೂಲಕ ಈ ಆಟ ಮಾಡಲಾಯಿತು. ಕಾಂಗ್ರೆಸ್ ಸಂಸ್ಕೃತಿಯೇ ಇದು. ಕಾಶ್ಮೀರವು ನಮ್ಮದೇ ಎನ್ನುವ ಎದೆಗಾರಿಕೆ ಅವರಿಗೆ ಇರಲಿಲ್ಲ. 370ನೇ ವಿಧಿಯನ್ನು ರದ್ದು ಮಾಡಿದ ಬಳಿಕ ಲೂಟಿ, ದಂಗೆ ಕಡಿಮೆ ಆಗಿದೆ. ಕಾಂಗ್ರೆಸ್ ದೇಶವನ್ನು ತುಂಡರಿಸಿದೆ ಎಂದು ಎಐಸಿಸಿ ಅಧ್ಯಕ್ಷ ಖರ್ಗೆಯವರಿಗೆ ತಿಳಿಸಬಯಸುವುದಾಗಿ ಹೇಳಿದರು. ಕಾಂಗ್ರೆಸ್ಸಿನ ತುಷ್ಟೀಕರಣ ನೀತಿ ಇಂದಿಗೂ ಮುಂದುವರಿದಿದೆ ಎಂದು ಟೀಕಿಸಿದರು. ವಿಭಜನೆ ವೇಳೆ ಹಿಂದೂ, ಸಿಕ್ಖರನ್ನು ಹೊಡೆದು ಓಡಿಸಿದ್ದಲ್ಲದೆ, ಮಾರಣ ಹೋಮ ನಡೆದಿತ್ತು ಎಂದು ಹೇಳಿದರು.

ಪ್ರಧಾನಿ ನರೇಂಗದ್ರ ಮೋದಿ ಅವರು ದೇಶವನ್ನು ಒಟ್ಟಾಗಿ ಒಯ್ಯುತ್ತಿದ್ದಾರೆ. ಕಾಶ್ಮೀರ, ಮಣಿಪುರ ಮತ್ತಿತರ ಕಡೆಗಣಿತ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗೆ ಅವರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಇನ್ನೂ ಈ ವೇಳೆ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮಾತನಾಡಿ, ದೇಶ ವಿಭಜನೆ ಸಂದರ್ಭದಲ್ಲಿ ಅತ್ಯಂತ ಅದನ್ನು ಕಠೋರವಾಗಿ ವಿರೋಧಿಸಿದವರು ಖಾನ್ ಅಬ್ದುಲ್ ಗಫಾರ್ ಖಾನ್. ಸ್ವಾರ್ಥಕ್ಕಾಗಿ ದೇಶ ವಿಭಜನೆ ಮಾಡದಿರಿ. ದೇಶ ವಿಭಜನೆ ಮಾಡಿದರೆ, ನಮ್ಮನ್ನು ನೀವು ಲಾಹೋರ್‍ನ ಪಠಾಣರ ಕೈಗೆ ಕೊಡುತ್ತೀರಿ. ಅದಕ್ಕಾಗಿ ದೇಶ ವಿಭಜಿಸದಿರಿ ಎಂದು 'ಗಡಿನಾಡ ಗಾಂದಿ, ಖಾನ್ ಅಬ್ದುಲ್ ಗಫಾರ್ ಖಾನ್ ಹೇಳಿದ್ದರು. ಇವತ್ತೂ ಆ ಮಾತು ಪ್ರಸ್ತುತವಾಗಿದೆ ಎಂದರು.

ಪಾಕಿಸ್ತಾನ ಆರ್ಥಿಕವಾಗಿ ದಿವಾಳಿ ಆಗಿದೆ. ದೇಶ ವಿಭಜನೆ ಬಳಿಕ ಅಲ್ಲಿನ ಜನರ ಜೀವನ ನರಕ ಆಗಿದೆ. ಮೋದಿಜಿ ಅವರ ನೇತೃತ್ವದಲ್ಲಿ ಭಾರತದ ಕೀರ್ತಿ ಪ್ರಪಂಚಕ್ಕೆ ಪಸರಿಸಿದೆ ಎಂದು ಅವರು ವಿವರಿಸಿದರು.

ಇನ್ನೂ ಈ ವೇಳೆ ಮಾಜಿ ಸಚಿವ ಸಿ.ಎನ್. ಅಶ್ವತ್ಥನಾರಾಯಣ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಾಜಿ ಶಾಸಕ ಪ್ರೀತಂ ಗೌಡ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಜಿ ಮಂಜುನಾಥ್ ಅವರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+