ಆಂಗ್ಲೋ-ಇಂಡಿಯನ್ ಸದಸ್ಯರ ನಾಮನಿರ್ದೇಶನದ ವಿರುದ್ಧ ಸುಪ್ರೀಂಗೆ ಕಾಂಗ್ರೆಸ್
ಬೆಂಗಳೂರು, ಮೇ 17: ಕರ್ನಾಟಕ ವಿಧಾನಸಭೆಗೆ ಆಂಗ್ಲೋ ಇಂಡಿಯನ್ ಸದಸ್ಯರನ್ನು ನಾಮ ನಿರ್ದೇಶನ ಮಾಡಿರುವ ರಾಜ್ಯಪಾಲರ ನಿರ್ಧಾರದ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಕಾನೂನು ಹೋರಾಟ ನಡೆಸಲು ಮುಂದಾಗಿದೆ.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯಪಾಲರು ಆಂಗ್ಲೋ - ಇಂಡಿಯನ್ ವ್ಯಕ್ತಿಯನ್ನು ವಿಧಾನಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ.
ಸದನದಲ್ಲಿ ಇನ್ನೂ ಯಡಿಯೂರಪ್ಪ ವಿಶ್ವಾಸ ಮತ ಸಾಬೀತುಪಡಿಸಿಲ್ಲ. ಹೀಗಿರುವಾಗ ಸಚಿವ ಸಂಪುಟದ ಸದಸ್ಯರು ಶಾಸಕರ ನಾಮ ನಿರ್ದೇಶನಕ್ಕೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ವಾದಿಸಿವೆ.

ರಾಜ್ಯಪಾಲರು ಬಿಜೆಪಿಯನ್ನು ಸರಕಾರ ರಚಿಸಲು ಆಹ್ವಾನಿಸಿರುವುದರ ವಿರುದ್ಧವೂ ಕಾಂಗ್ರೆಸ್ ಮತ್ತು ಜೆಡಿಎಸ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು. ಇದರ ಜೊತೆಗೆ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಶುಕ್ರವಾರ ಮುಂಜಾನೆ 10.30ಕ್ಕೆ ಅರ್ಜಿಯ ವಿಚಾರಣೆಗೆ ಸಮಯ ನಿಗದಿಯಾಗಿದೆ.












Click it and Unblock the Notifications