ವಿಪ್ ತಿರಸ್ಕರಿಸಿ ಅಸೆಂಬ್ಲಿಗೆ ಚಕ್ಕರ್, ಮುಂಬೈನಲ್ಲೇ ರೆಬೆಲ್ಸ್!

Recommended Video

      ವಿಪ್ ತಿರಸ್ಕರಿಸಿ ಅಸೆಂಬ್ಲಿಗೆ ಚಕ್ಕರ್ ಹಾಕಿದ ರೆಬೆಲ್ ಅತೃಪ್ತ ಶಾಸಕರು | Oneindia Kannada

      ಮುಂಬೈ, ಜುಲೈ 12: ಕರ್ನಾಟಕದ ರಾಜೀನಾಮೆ ಹೈಡ್ರಾಮಾ ಮುಂದುವರೆದಿದ್ದು, ಜುಲೈ 12ರಿಂದ ಆರಂಭವಾಗಲಿರುವ ವಿಧಾನಸಭೆ ಅಧಿವೇಶನದಲ್ಲಿ ಅಂತ್ಯ ಕಾಣುವ ನಿರೀಕ್ಷೆಯಿದೆ. ಈ ನಡುವೆ ರೆಬೆಲ್ ಶಾಸಕರು, ಬಜೆಟ್ ಅಧಿವೇಶನಕ್ಕೆ ಗೈರಾಗುವುದು ಬಹುತೇಕ ಖಚಿತವಾಗಿದೆ.

      ಸುಪ್ರೀಂಕೋರ್ಟ್‌ ಆದೇಶದಂತೆ ಗುರುವಾರ(ಜುಲೈ11)ದಂದು ಸಂಜೆ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಶಾಸಕರು, ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದರು.

      ಜೆಡಿಎಸ್ ನ ಹುಣಸೂರು ಶಾಸಕ ಎಚ್. ವಿಶ್ವನಾಥ್, ಕೆ. ಆರ್. ಪೇಟೆ ಶಾಸಕ ನಾರಾಯಣ ಗೌಡ, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. ಗೋಪಾಲಯ್ಯ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಇದೇ ರೀತಿ ಕಾಂಗ್ರೆಸ್ಸಿನ 10 ಶಾಸಕರ ರಾಜೀನಾಮೆ ಕೂಡಾ ಸ್ವೀಕೃತಗೊಂಡಿದ್ದರೂ ಅಂಗೀಕಾರವಾಗಿಲ್ಲ.

      Congress-JDS rebel MLAs to skip Session ,Whip no use

      ರಾಜೀನಾಮೆಗಳು ಅಂಗೀಕಾರವಾಗಿಲ್ಲದ ಕಾರಣ ಕಾಂಗ್ರೆಸ್ -ಜೆಡಿಎಸ್ ಪಕ್ಷಗಳು ತಮ್ಮ ರೆಬೆಲ್ ಶಾಸಕರಿಗೆ ವಿಪ್ ಜಾರಿಗೊಳಿಸಿ ಸದನಕ್ಕೆ ಹಾಜರಾಗಿ, ಇಲ್ಲದಿದ್ದರೆ ಅರ್ನಹತೆ ಎದುರಿಸಿ ಎಂದು ಸೂಚಿಸಿವೆ.

      ಇದಲ್ಲದೆ, ಜೆಡಿಎಸ್ ಪರವಾಗಿ ವಕೀಲ ರಂಗನಾಥ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಕಾಂಗ್ರೆಸ್‌ ಸಹ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಿದೆ. ಆದರೆ, ಯಾವುದೇ ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ಸ್ಪೀಕರ್ ಇನ್ನೂ ಯಾವುದೇ ತೀರ್ಮಾನಗಳನ್ನು ಕೈಗೊಂಡಿಲ್ಲ.

      ಒಂದು ವೇಳೆ ವಿಪ್ ಉಲ್ಲಂಘಿಸಿದ್ದಕ್ಕೆ ರೆಬೆಲ್ ಶಾಸಕರನ್ನು ಅನರ್ಹಗೊಳಿಸಿದರೆ, ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮಾಡಿದರೆ ಅಗತ್ಯ ಸಂಖ್ಯಾಬಲ ಸಿಗುವುದಿಲ್ಲ, ಅನರ್ಹತೆ ಆದೇಶವನ್ನು ಪ್ರಶ್ನಿಸಿ ಮತ್ತೊಮ್ಮೆ ಕೋರ್ಟ್ ಮೆಟ್ಟಿಲೇರಬಹುದು. ಎಲ್ಲದ್ದಕ್ಕೂ ಶುಕ್ರವಾರ ಸುಪ್ರೀಂಕೋರ್ಟ್ ನೀಡುವ ಆದೇಶ ತೆರೆ ಎಳೆಯುವ ಸಾಧ್ಯತೆ ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+