ಪಕ್ಷದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದಕ್ಕಾಗಿ 24 ಬಂಡಾಯ ನಾಯಕರನ್ನು ಉಚ್ಚಾಟಿಸಿದ ಕಾಂಗ್ರೆಸ್- ಯಾರು ತಿಳಿಯಿರಿ

ಬೆಂಗಳೂರು, ಮೇ 03: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿದ್ದಕ್ಕಾಗಿ 24 ಪಕ್ಷದ ನಾಯಕರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಶಿಸ್ತು ಸಮಿತಿ ವಜಾಗೊಳಿಸಿದೆ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಎಲ್ಲಾ ಬಂಡಾಯ ಅಭ್ಯರ್ಥಿಗಳಿಗೆ ಬಹಿರಂಗ ಪತ್ರ ಬರೆದು ಚುನಾವಣೆಯಿಂದ ನಿವೃತ್ತಿ ಹೊಂದಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿ, ಇಲ್ಲವೇ ಕ್ರಮ ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದರು.

ಕಣದಲ್ಲಿದ್ದ 24 ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲಾಗಿದೆ. ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯಲು ಬಂಡಾಯಗಾರರನ್ನು ಸಮಾಧಾನಪಡಿಸಲು ಪಕ್ಷವು ಪ್ರಯತ್ನಿಸಿದೆ. ಆದರೆ ಪ್ರಯತ್ನಗಳ ಹೊರತಾಗಿಯೂ, ಹಲವಾರು ಅಭ್ಯರ್ಥಿಗಳು ಅವರಿಗೆ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಅಸಮಾಧಾನಗೊಂಡರು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದರು. ಅದಕ್ಕಾಗಿ ಈ ಶಿಸ್ತು ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಹೇಳಿದೆ.

Congress Kicked Out 24 Rebel Leaders For Challenging Official Candidate in Election

ಉಚ್ಛಾಟಿತ ನಾಯಕರಲ್ಲಿ ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂಪಿ ಪ್ರಕಾಶ್ ಅವರ ಪುತ್ರಿ ಮತ್ತು ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂಪಿ ಲತಾ ಮಲ್ಲಿಕಾರ್ಜುನ್ ಅವರೂ ಸೇರಿದ್ದಾರೆ. ಟಿಕೆಟ್ ನಿರಾಕರಿಸಿದ್ದಕ್ಕೆ ಅಸಮಾಧಾನಗೊಂಡಿರುವ ಅವರು ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಪಕ್ಷದಿಂದ ವಜಾಗೊಂಡಿರುವವರ ಪೈಕಿ ಶಿರಹಟ್ಟಿಯಿಂದ ರಾಮಕೃಷ್ಣ ದೊಡ್ಡಮನಿ, ಕುಣಿಗಲ್‌ನಿಂದ ಬಿ.ಬಿ.ರಾಮಸ್ವಾಮಿಗೌಡ, ಬೀದರ್ ದಕ್ಷಿಣದಿಂದ ಚಂದ್ರಸಿಂಗ್ ಮತ್ತು ಖಾನಾಪುರದಿಂದ ಇರ್ಫಾನ್ ತಾಳಿಕೋಟೆ ಸೇರಿದ್ದಾರೆ.

ರಾಜ್ಯಾದ್ಯಂತ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸುತ್ತಿರುವ ಎಲ್ಲ ಅಭ್ಯರ್ಥಿಗಳಿಗೂ ಇದು ಅನ್ವಯವಾಗಲಿದೆ ಎಂದು ಉಚ್ಚಾಟನೆ ಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಪತ್ರಕ್ಕೆ ಮಾಜಿ ಕೇಂದ್ರ ಸಚಿವ ಮತ್ತು ಶಿಸ್ತು ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್ ಸಹಿ ಹಾಕಿದ್ದಾರೆ. ಮೇ 10 ರಂದು ಕರ್ನಾಟಕ ಚುನಾವಣೆ ನಿಗದಿಯಾಗಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಕಾಂಗ್ರೆಸ್‌ಗೆ ಬಲ ನೀಡಿದ ಸಮೀಕ್ಷೆ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಲುವ ಸಾಧ್ಯತೆ ಇದೆ ಎಂದು ಇಂಡಿಯಾ ಟುಡೇ-ಸಿವೋಟರ್ ಸೋಮವಾರ ಭವಿಷ್ಯ ನುಡಿದಿದೆ. ಸಮೀಕ್ಷೆಯ ಪ್ರಕಾರ, ಬಿಜೆಪಿ ಕೇವಲ 74-86 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. 2018 ರಲ್ಲಿ ಪಕ್ಷವು ಪಡೆದಿದ್ದಕ್ಕಿಂತ 24 ಸ್ಥಾನಗಳು ಕಡಿಮೆಯಾಗಲಿವೆ. ಕೇಸರಿ ಪಕ್ಷವು 35 ಶೇಕಡಾ ಮತಗಳನ್ನು ಪಡೆಯುವ ನಿರೀಕ್ಷೆಯಿದೆ. ಇದು 2018 ರಲ್ಲಿ ಶೇಕಡಾ 36.35 ಕ್ಕಿಂತ ಕಡಿಮೆಯಾಗಿದೆ.

ಮತ್ತೊಂದೆಡೆ ಕಾಂಗ್ರೆಸ್ 107-119 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. 40 ರಷ್ಟು ಮತ ಕಾಂಗ್ರೆಸ್‌ ಪರ ಹಂಚಿಕೆಯಾಗಿದೆ. ಕಾಂಗ್ರೆಸ್‌ ಪಕ್ಷವು ಈ ಬಾರಿ 33 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರ ಪರ (ಶೇ 42) ಹೆಚ್ಚು ಒಲವು ತೋರಿದ ನಾಯಕರಾಗಿದ್ದು, ನಂತರದ ಸ್ಥಾನದಲ್ಲಿ ಬಿಜೆಪಿಯ ಬಸವರಾಜ ಬೊಮ್ಮಾಯಿ (ಶೇ 31) ಇದ್ದಾರೆ ಎಂದು ಸಮೀಕ್ಷೆಗಳು ತಿಳಿಸಿವೆ. ಜನತಾ ದಳ (ಜಾತ್ಯತೀತ) 23-35 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ ಮತ್ತು ಶೇಕಡಾ 17 ರಷ್ಟು ಮತ ಜೆಡಿಎಸ್‌ ಪರ ಹಂಚಿಕೆಯಾಗಿದೆ. ಇತರರು 0-5 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+