ಅಮಿತ್ ಶಾಗೆ ಯಾವ ಜ್ವರವೂ ಇಲ್ಲ: ಬಿ.ಕೆ. ಹರಿಪ್ರಸಾದ್ ಮತ್ತೆ ವಿವಾದ
ಬೆಂಗಳೂರು, ಜನವರಿ 18: ಕಾಂಗ್ರೆಸ್ ಶಾಸಕರನ್ನು ಅಪಹರಿಸಿದ್ದಕ್ಕೆ ಅಮಿತ್ ಶಾಗೆ ಹಂದಿಜ್ವರ ಬಂದಿದೆ ಎಂದು ವಿವಾದಾತ್ಮಕ ಹೇಳಿಕೆ ಮೂಲಕ ತೀವ್ರ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್, ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಯಾವ ಹಂದಿ ಜ್ವರವೂ ಇಲ್ಲ. ಇದಕ್ಕೆ ದಾಖಲೆಗಳಿವೆ ಎಂದು ಹರಿಪ್ರಸಾದ್ ಹೇಳಿದ್ದಾರೆ.
'ಅಮಿತ್ ಶಾ ಅವರಿಗೆ ಯಾವುದೇ ಫ್ಲೂ ಬಂದಿಲ್ಲ ಎಂದು ನಮ್ಮ ಬಳಿ ವರದಿಯಿದೆ. ನಮಗೂ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ಪರಿಚಿತ ಜನರಿದ್ದಾರೆ. ಅಮಿತ್ ಶಾ ಫ್ಲೂನಿಂದ ಅಲ್ಲಿಗೆ ದಾಖಲಾಗಿಲ್ಲ ಎಂದು ಅವರು ಹೇಳುತ್ತಾರೆ. ಉಳಿದ ಸತ್ಯಾಂಶಗಳನ್ನು ಪಡೆದುಕೊಂಡು ನಿಮ್ಮ ಮುಂದೆ ಬರುತ್ತೇನೆ' ಎಂದು ಅವರು ಹೇಳಿದ್ದಾರೆ.

ಅಮಿತ್ ಶಾ ಅವರ ಅನಾರೋಗ್ಯದ ಬಗ್ಗೆ ಗುರುವಾರವಷ್ಟೇ ವ್ಯಂಗ್ಯವಾಡಿದ್ದ ಬಿ.ಕೆ. ಹರಿಪ್ರಸಾದ್ ಅವರನ್ನು ನಿಮ್ಹಾನ್ಸ್ಗೆ ಸೇರಿಸುವಂತೆ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದರು.
BK Hariprasad, Congress: We have a report that he (Amit Shah) doesn't have any flu, we also know people in All India Institute of Medical Sciences (AIIMS), they said he is not admitted because of the flu. Let me get the facts then I will get back to you. pic.twitter.com/sqg3ZbjYTJ
— ANI (@ANI) 18 January 2019
'ಕಾಂಗ್ರೆಸ್ ಶಾಸಕರನ್ನು ಕಿಡ್ನಾಪ್ ಮಾಡಿ ಬಾಂಬೆಯಲ್ಲಿಟ್ಟಿದ್ದಾರೆ. ಆರ್ಎಸ್ಎಸ್ ಮತ್ತು ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಅವರಿಗೆ ಸರ್ಪಗಾವಲಾಗಿದ್ದಾರೆ. ಕೆಲವು ಶಾಸಕರು ಈಗಾಗಲೇ ವಾಪಸ್ ಬಂದಿರುವುದರಿಂದ ಅಮಿತ್ ಶಾ ಅವರಿಗೆ ಗಾಬರಿಯಾಗಿ ಜ್ವರ ಬಂದಿದೆ. ಜ್ವರ ಎಂದರೆ ಕಮ್ಮಿ ಜ್ವರ ಅಲ್ಲ, ಅದು ಹಂದಿ ಜ್ವರ ಕರ್ನಾಟಕದಲ್ಲಿ ಸರ್ಕಾರವನ್ನು ಕಡೆವಲು ಪ್ರಯತ್ನ ಮಾಡಿದರೆ ಕೇವಲ ಹಂದಿ ಜ್ವರ ಅಲ್ಲ ವಾಂತಿ, ಭೇದಿ ರೋಗಗಳು ಬರುತ್ತವೆ' ಎಂದು ಬಿ.ಕೆ.ಹರಿಪ್ರಸಾದ್ ಹೇಳಿದ್ದರು.
'ಹರಿಪ್ರಸಾದ್ ಅವರು ಅಮಿತ್ ಶಾ ಅವರ ಆರೋಗ್ಯವನ್ನು ವ್ಯಂಗ್ಯವಾಡಿದ್ದಾರೆ. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಇಂತಹ ನಾಗರಿಕ ಸಮಾಜದಲ್ಲಿ ಬದುಕಲು ಅರ್ಹರಲ್ಲ. ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುತ್ತಿದ್ದೇವೆ. ಹರಿಪ್ರಸಾದ್ ಅವರನ್ನು ನಿಮ್ಹಾನ್ಸ್ಗೆ ಸೇರಿಸಿ' ಎಂದು ಬಿಜೆಪಿ ಟ್ವೀಟ್ ಮಾಡಿತ್ತು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications