ರಾಜ್ಯದಲ್ಲಿ ಕೋವಿಡ್ ನಿಂದ ಮೃತ ಪಟ್ಟ ಅಸಲಿ ಸಾವಿನ ಸಂಖ್ಯೆ ಬಹಿರಂಗ!
ಬೆಂಗಳೂರು, ಜೂನ್ 17: ಕೊರೊನಾ ಮಹಾಮಾರಿಯಿಂದ ಮೃತ ಪಟ್ಟವರ ನಿಜವಾದ ಸಂಖ್ಯೆಯನ್ನು ಕೇಂದ್ರ ಮತ್ತು ರಾಜ್ಯ ಸರಕಾರ ಮುಚ್ಚಿಡುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಲೇ ಇದೆ.
ವಿದೇಶಿ ಮಾಧ್ಯಮಗಳು ಕೂಡಾ ಭಾರತದಲ್ಲಿನ ಸಾವಿನ ಸಂಖ್ಯೆಯನ್ನು ಏನು ಸರಕಾರ ತೋರಿಸುತ್ತಿದೆಯೋ ಅದು ತಪ್ಪು ಲೆಕ್ಕ ಎಂದು ಟೀಕಿಸಿದ್ದವು. ಅದಕ್ಕೆ, ಕೇಂದ್ರ ಸರಕಾರ ಸ್ಪಷ್ಟನೆಯನ್ನು ನೀಡಿತ್ತು.
ವಿರೋಧ ಪಕ್ಷದವರು ಸಾವಿನ ಆಡಿಟ್ ನಡೆಯಬೇಕೆಂದು ಸರಕಾರವನ್ನು ಒತ್ತಾಯಿಸುತ್ತಲೇ ಇದೆ. ಈಗ, ಕಾಂಗ್ರೆಸ್ಸಿನ ಹಿರಿಯ ಮುಖಂಡ ಎಚ್.ಕೆ.ಪಾಟೀಲ್ ಕೂಡಾ ಸರಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನಿಂದ ಮೃತ ಪಟ್ಟವರ ಸಂಖ್ಯೆ ಸರಕಾರ ತೋರಿಸುತ್ತಿರುವುದು ಸತ್ಯಕ್ಕೆ ದೂರವಾದದು. ಕನಿಷ್ಟವೆಂದರೂ ಎಂಟರಿಂದ ಹತ್ತು ಪಟ್ಟು ಕಮ್ಮಿ ಲೆಕ್ಕವನ್ನು ಸರಕಾರ ತೋರಿಸುತ್ತಿದೆ ಎಂದು ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.

ಆಸ್ಪತ್ರೆಗಳು ಹಿಂದಿನ ಸಾವಿನ ಸಂಖ್ಯೆಯನ್ನು ಈಗ ತೋರಿಸುತ್ತಿದೆ
ರಾಜ್ಯದಲ್ಲಿ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ, ಕೆಲವು ದಿನಗಳ ಹಿಂದೆ ಸಾವಿನ ಸಂಖ್ಯೆ ಹೆಚ್ಚಾಗಿದ್ದಾಗ, ಹಳೆಯ ಲೆಕ್ಕವನ್ನು ತೋರಿಸಲಾಗುತ್ತಿದೆ ಎಂದು ಖುದ್ದು ಆಯುಕ್ತ ಗೌರವ್ ಗುಪ್ತಾ ಒಪ್ಪಿಕೊಂಡಿದ್ದರು. ಆಸ್ಪತ್ರೆಗಳು ಹಿಂದಿನ ಸಾವಿನ ಸಂಖ್ಯೆಯನ್ನು ಈಗ ತೋರಿಸುತ್ತಿದೆ ಎಂದು ಗುಪ್ತಾ ಹೇಳಿದ್ದರು.

ಜೂನ್ 16ಕ್ಕೆ ಅನ್ವಯವಾಗುವಂತೆ 33,296 ಜನರು ಕೋವಿಡ್ ನಿಂದ ಮೃತ
"ಜೂನ್ 16ಕ್ಕೆ ಅನ್ವಯವಾಗುವಂತೆ 33,296 ಜನರು ಕೋವಿಡ್ ನಿಂದ ಮೃತ ಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತನ್ನ ಬುಲೆಟಿನ್ ನಲ್ಲಿ ತೋರಿಸಿದೆ. ಕೋವಿಡ್ ನಿರ್ವಹಣೆಯಲ್ಲೂ ರಾಜ್ಯ ಸರಕಾರ ವಿಫಲಗೊಂಡಿತ್ತು. ಈಗ, ಸಾವಿನ ಅಸಲಿ ಸಂಖ್ಯೆಯನ್ನೂ ಮುಚ್ಚಿಡುತ್ತಿದೆ'ಎಂದು ಎಚ್.ಕೆ.ಪಾಟೀಲ್ ಆರೋಪಿಸಿದ್ದಾರೆ.

ರಾಜ್ಯ ಸರಕಾರದ ವಿರುದ್ದ ಗುರುತರ ಆರೋಪ
"ಮೊದಲನೇ ಅಲೆಯಲ್ಲಿ 23 ಸಾವಿರ ಜನ ಮೃತ ಪಟ್ಟಿದ್ದಾರೆಂದು ತೋರಿಸಲಾಗಿದೆ. ಒಟ್ಟು ನಮ್ಮ ರಾಜ್ಯದಲ್ಲಿ 3,27,985 ಜನರು ಸಾವನ್ನಪ್ಪಿದ್ದಾರೆಂದು ರಾಜ್ಯ ಸರ್ಕಾರದ ಮಾಹಿತಿ ಇದೆ. ಜನವರಿಯಿಂದ ಜೂನ್ ವರೆಗೂ ಈ ಅಂಕಿಅಂಶ ಎಲ್ಲೂ ತಾಳೆಯಾಗುತ್ತಿಲ್ಲ"ಎಂದು ಪಾಟೀಲ್ ಅವರು ಸರಕಾರದ ವಿರುದ್ದ ಗುರುತರ ಆರೋಪ ಮಾಡಿದ್ದಾರೆ.

ಸರಕಾರದ ವಿರುದ್ದ ಗಂಭೀರ ಆರೋಪ ಮಾಡಿದ ಎಚ್.ಕೆ.ಪಾಟೀಲ್
"ಕೊರೊನಾ ಮೊದಲನೇ ಮತ್ತು ಎರಡನೇ ಅಲೆಯಲ್ಲಿ ಸಾವನ್ನಪ್ಪಿದವರ ಡೆತ್ ಆಡಿಟ್ ಸಿಗದ ಹಾಗೆ ಮಾಡಲಾಗಿದೆ. ಒಟ್ಟು 87,082 ಸಾವಿರ ಸಾವು ಸಂಭವಿಸಿದೆ. ಎರಡೂವರೆ ಲಕ್ಷ ಸಾವನ್ನು ಮುಚ್ಚಿಟ್ಟಿದ್ದಾರೆ. ಇವರಿಗೆ ಮನುಷ್ಯತ್ವ ಅನ್ನೋದೇ ಇಲ್ಲ"ಎಂದು ಎಚ್.ಕೆ.ಪಾಟೀಲ್ ಟೀಕಿಸಿದ್ದಾರೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications